ದ್ಯಾಮವ್ವ ದೇವಿ ಸನ್ನಿಧಿಯಲ್ಲಿ ಸರಳ ನವರಾತ್ರಿ


Team Udayavani, Oct 17, 2020, 12:42 PM IST

ದ್ಯಾಮವ್ವ ದೇವಿ ಸನ್ನಿಧಿಯಲ್ಲಿ ಸರಳ ನವರಾತ್ರಿ

ಕುಂದಗೋಳ: ಗುಡಗೇರಿಯ ಗ್ರಾಮದೇವಿ ದ್ಯಾಮವ್ವ ದೇವಿಯ ನವರಾತ್ರಿ ಉತ್ಸವ ಈ ಬಾರಿ ಅತ್ಯಂತ ಸರಳವಾಗಿ ನಡೆಯುತ್ತಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಗಷ್ಟೇ ಉತ್ಸವ ಸೀಮಿತವಾಗಿದೆ. ಅ. 17ರಂದು ಘಟಸ್ಥಾಪನೆಯೊಂದಿಗೆ ಉತ್ಸವ ಆರಂಭವಾಗಲಿದೆ.

ಗುಡಿಗೆ ದೀಪಾಲಂಕಾರ ಮಾಡಿದ್ದು, ಸೋಂಕು ಹರಡದಂತೆಮುಂಜಾಗ್ರತಾ ಕ್ರಮಗಳೊಂದಿಗೆ ಭಕ್ತರಿಗೆ ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಯಾವುದೇ ರೀತಿ ಪ್ರಸಾದಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.ಭಕ್ತರು ದೇವಿ ದರ್ಶನ ಪಡೆದು ತಕ್ಷಣವೇ ಹಿಂದಿರುಗಬೇಕಿದೆ.ಯಾವುದೇ ಮೆರವಣಿಗೆ ಕೈಗೊಳ್ಳದೆ ಈ ಬಾರಿ ಸರಳವಾಗಿ ಒಂಭತ್ತು ದಿನಗಳ ಕಾಲ ದೇವಿಗೆ ವಿಶಿಷ್ಟ ರೀತಿಯಿಂದ ಧಾರ್ಮಿಕಕೈಂಕರ್ಯಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕಮಿಟಿಯವರು ತಿಳಿಸಿದ್ದಾರೆ.

ಗ್ವಾನಾಳ ಮೂಲ : ದೇವಿಯು ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಗ್ವಾನಾಳ ಗ್ರಾಮದಿಂದ ಗೌಡಗೇರಿ ಗ್ರಾಮಕ್ಕೆ ಆಗಮಿಸಿ ತದನಂತರ ಗುಡಗೇರಿ ಗ್ರಾಮದಲ್ಲಿ ನೆಲೆಸಿದ್ದಾಳೆ ಎಂಬ ಪ್ರತೀತಿಯಿದೆ. ಮೊದಲು ಇಲ್ಲಿ ದೊಡ್ಡ ಪ್ರಮಾಣದ ಜಾತ್ರಾ ಮಹೋತ್ಸವ ಜರುಗುತ್ತಿತ್ತು. ಆದರೆ ಈ ಸಂಪ್ರದಾಯ ಈಗ ಕಣ್ಮರೆಯಾಗಿದೆ. ಇದಕ್ಕೆ ಕಾರಣವೂ ಇದುವರೆಗೆ ತಿಳಿದು ಬಂದಿಲ್ಲ.

ಕುಟುವುದಿಲ್ಲ, ಬೀಸುವುದಿಲ : ನವರಾತ್ರಿ ಉತ್ಸವದಲ್ಲಿ ಗ್ರಾಮದ ಜನತೆ ಮನೆ ಸ್ವತ್ಛಗೊಳಿಸಿ 9ದಿನಗಳ ಕಾಲ ಉಪವಾಸ ಮಾಡುತ್ತಾರೆ. ನಿತ್ಯ ರಾತ್ರಿ ದ್ಯಾಮವ್ವ ದೇವಿಯ ಪಲ್ಲಕ್ಕಿ ದುರ್ಗಾದೇವಿ ದೇವಸ್ಥಾನದ ವರೆಗೆ ತೆರಳಿ ಪುನಃ ಗುಡಿಗೆ ಬಂದ ನಂತರ ದೇವಿಗೆ ನಮಿಸಿ ಅಂದಿನ ಉಪವಾಸಮುಕ್ತಾಯ ಮಾಡುತ್ತಾರೆ. ಒಂಭತ್ತು ದಿನಗಳ ಕಾಲ ಗ್ರಾಮದ ಜನತೆ ಕುಟ್ಟುವುದು, ಬೀಸುವುದು, ರೊಟ್ಟಿ ಸುಡುವುದು ಮಾಡುವುದಿಲ್ಲ.

ಮೂಗುತಿ ಪವಾಡ : ಕಳಸದ ಗುರು ಗೋವಿಂದ ಭಟ್ಟರು ಒಂದು ದಿನ ಶಿಷ್ಯ ಸಂತ ಶಿಶುನಾಳ ಶರೀಫರ ಜೊತೆಗೆ ರಾತ್ರಿ ಗುಡಿಯಲ್ಲೇ ತಂಗಿದ್ದರು. ಶಂಕರಿ (ಸರಾಯಿ)ಸೇವನೆ ಮಾಡಬೇಕೆಂಬ ಬಯಕೆಯಾಗುತ್ತದೆ. ಇಬ್ಬರ ಬಳಿಯೂ ಕಾಸಿರುವುದಿಲ್ಲ. ಗುರು ಆಣತಿಯಂತೆ ಶರೀಫರು ದೇವಿಯನ್ನು ಸ್ತುತಿಸುತ್ತಾರೆ. ದೇವಿ ಪ್ರತ್ಯಕ್ಷಳಾಗಿ ತನ್ನ ಮೂಗುತಿ ನೀಡುತ್ತಾಳೆ. ಅದನ್ನು ಗ್ರಾಮದ ಕಲಾಲರ ಮನೆಯಲ್ಲಿ ಅಡವಿಟ್ಟುಬಯಕೆ ಪೂರೈಸಿಕೊಳ್ಳುತ್ತಾರೆ.

ಮರುದಿನ ಪೂಜಾರಿ ಪೂಜೆ ಸಲ್ಲಿಸಲು ಬಂದಾಗ ದೇವಿ ಮೂಗುತಿ ಕಾಣೆಯಾಗಿರುವುದು ಕಂಡು ಶಾನಭೋಗ ಹಾಗೂ ಊರಿನ ಗೌಡರಿಗೆ ವಿಷಯ ತಿಳಿಸುತ್ತಾರೆ. ಹಿಂದಿನ ರಾತ್ರಿ ಗುಡಿಯಲ್ಲಿ ತಂಗಿದ್ದ ಗುರು-ಶಿಷ್ಯರನ್ನುಕರೆಯಿಸಿ ವಿಚಾರಣೆ ಮಾಡಿದಾಗ ದೇವಿಯೇಮೂಗುತಿ ದಯಪಾಲಿಸದಳು ಎನ್ನುತ್ತಾರೆ. ಎಲ್ಲರೂಅಪಹಾಸ್ಯ ಮಾಡಲಾರಂಭಿಸುತ್ತಾರೆ. ಶರೀಫರು ದೇವಿಯನ್ನು ಸ್ತುತಿಸಲು ಆರಂಭಿಸುತ್ತಾರೆ. ಆಗ ದೇವಿಯ ಮೂರ್ತಿಯ ಮೂಗಿನಲ್ಲಿ ಮೂಗುತಿ ಪ್ರತ್ಯಕ್ಷವಾಗುತ್ತದೆ. ಇದನ್ನು ಕಂಡ ಜನರು ಗುರು-ಶಿಷ್ಯರ ಪವಾಡ ಕೊಂಡಾಡುತ್ತಾರೆ. ಬೇಡಿ ಬಂದ ಭಕ್ತರ ಇಷ್ಟಾರ್ಥ ಈಡೇರಿಸುವ ದೇವಿಯಾಗಿ ದ್ಯಾಮವ್ವ ನೆಲೆ ನಿಂತಿದ್ದಾಳೆ.

 

-ಶೀತಲ್‌ ಮುರಗಿ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.