ಕೌಶಲ್ಯ ತರಬೇತಿ ವೃತ್ತಿಜೀವನ ಪ್ರಗತಿಗೆ ರಹದಾರಿ

ವಿದ್ಯಾರ್ಥಿಗಳ ಕೌಶಲ್ಯ ತರಬೇತಿ ಕೇಂದ್ರ ಉದ್ಘಾಟನೆ; ಸ್ವ ಉದ್ಯೋಗ ಸೃಷ್ಟಿಸಿಕೊಳ್ಳಲು ಪೂರಕ

Team Udayavani, Jul 22, 2022, 2:36 PM IST

16

ಧಾರವಾಡ: ಕೌಶಲ್ಯ ಅಭಿವೃದ್ಧಿ ತರಬೇತಿಗಳು ವಿದ್ಯಾರ್ಥಿಯ ವೃತ್ತಿ ಜೀವನದ ಪ್ರಗತಿಗೆ ರಹದಾರಿಗಳಾಗುತ್ತವೆ ಎಂದು ಜೆಎಸ್‌ಎಸ್‌ ಸಂಸ್ಥೆಯ ವಿತ್ತಾಧಿಕಾರಿ ಡಾ| ಅಜಿತ ಪ್ರಸಾದ ಹೇಳಿದರು.

ನಗರದ ಶ್ರೀ ಮಂಜುನಾಥೇಶ್ವರ ಐಟಿಐನಲ್ಲಿ ಡಾಯ್‌ ಫೌಂಡೇಶನ್‌ನವರ ಸಿಎಸ್‌ಆರ್‌ ಯೋಜನೆಯಡಿ ಬೆಂಗಳೂರಿನ ಸ್ಕೈಡರ್‌ ಕಂಪನಿಯ ಪ್ರಾಯೋಜಕತ್ವದಲ್ಲಿ ಪ್ರಾರಂಭವಾಗುತ್ತಿರುವ ವಿದ್ಯಾರ್ಥಿಗಳ ಕೌಶಲ್ಯ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಲ್ಪಾವಧಿ ಮತ್ತು ದೀರ್ಘಾವಧಿ ಗುಣಮಟ್ಟದ ಕೌಶಲ್ಯ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿ ಬೇರೆ ಉದ್ಯೋಗಾವಕಾಶಕ್ಕಾಗಿ ಕಾಯದೇ ಸ್ವ-ಉದ್ಯೋಗ ತಾನೇ ಸೃಷ್ಟಿಸಿಕೊಳ್ಳುತ್ತಾನೆ ಎಂದರು.

ಧರ್ಮಸ್ಥಳದ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಜನರಿಗೆ ಸಾಮಾಜಿಕ-ಆರ್ಥಿಕ ಸಮಾನತೆ, ನ್ಯಾಯವನ್ನು ದೊರಕಿಸುವ ನಿಟ್ಟಿನಲ್ಲಿ ಶೈಕ್ಷಣಿಕ, ಧಾರ್ಮಿಕ, ಉದ್ಯೋಗ, ಆರೋಗ್ಯ, ಮಹಿಳಾ ಸಬಲೀಕರಣ ವಿಚಾರಗಳಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇದರಲ್ಲಿ ತಾಂತ್ರಿಕ ಶಿಕ್ಷಣವು ಸಹ ಅವರ ಕನಸಿನ ಕೂಸು. ಹೀಗಾಗಿ ರುಡ್‌ಸೆಟ್‌, ಐಟಿಐಗಳನ್ನು, ತಾಂತ್ರಿಕ ಮಹಾವಿದ್ಯಾಲಯಗಳನ್ನು ಸ್ಥಾಪಿಸುತ್ತಾ ಬಂದಿದ್ದಾರೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಟೂಲ್‌ಕಿಟ್‌ ವಿತರಿಸಿದ ಮೇಯರ್‌ ಈರೇಶ ಅಂಚಟಗೇರಿ ಮಾತನಾಡಿ, ತಾಂತ್ರಿಕ ಶಿಕ್ಷಣ ಎಂದರೆ ತಾಂತ್ರಿಕತೆಯ ಬಗ್ಗೆ ಕ್ರಿಯಾತ್ಮಕ ರೂಪದಲ್ಲಿ ನೀಡುವ ಶಿಕ್ಷಣ. ಇದರಲ್ಲಿ ವಿದ್ಯಾರ್ಥಿಗಳು ಕೈಗಾರಿಕೆಗೆ ಅವಶ್ಯವಿರುವ ತರಬೇತಿಯನ್ನು ಪಡೆದು ಮುಂದೆ ಕೈಗಾರಿಕೆಗಳಲ್ಲಿ ಕೆಲಸಗಳನ್ನು ಸಹ ಮಾಡಬಹುದು ಅಥವಾ ಅದೇ ಕೈಗಾರಿಕೆಗೆ ಬೇಕಾಗುವ ಕಚ್ಚಾ ವಸ್ತುಗಳನ್ನು ಅಥವಾ ಕೈಗಾರಿಕೆಗೆ ಬೇಕಾಗುವ ಪೂರಕ ಕೆಲಸಗಳನ್ನು ಸಹ ಮಾಡುವಷ್ಟು ಪ್ರಬುದ್ಧರಾಗುತ್ತಾರೆ. ಹೀಗಾಗಿ ಐಟಿಐ ಕಲಿಯುವಾಗಲೇ ಇಂತಹ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದಲ್ಲಿ ಅವರು ಬೇರೆಯವರಿಗೂ ಉದ್ಯೋಗ ಕೊಡುವಷ್ಟು ಬೆಳೆಯಬಹುದು ಎಂದರು.

ನಿಟ್ಟೆ ಅಟಲ್‌ ಇನ್ಕ್ಯೂಬೇಶನ್‌ ಸೆಂಟರ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ಎ.ಪಿ.ಆಚಾರ್‌ ಮಾತನಾಡಿ, ಐಟಿಐನಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿ ಪ್ರಾಯೋಗಿಕವಾಗಿ ದೊರೆಯುತ್ತದೆ. ಅದರೊಟ್ಟಿಗೆ ಈ ರೀತಿ ತರಬೇತಿಗಳು ಅವರನ್ನು ಕೌಶಲ್ಯ ಭರಿತರನ್ನಾಗಿ ಮಾಡುತ್ತವೆ. ಜೆಎಸ್‌ ಎಸ್‌ ಸಂಸ್ಥೆ ಹಲವಾರು ತರಬೇತಿಗಳನ್ನು ಆಯೋಜಿಸಿ, ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಅಣಿಗೊಳಿಸುತ್ತಿದೆ ಎಂದು ಹೇಳಿದರು.

ಡಾಯ್‌ ಫೌಂಡೇಶನ್‌ನ ಸ್ಥಾಪಕ ಜಗದೀಶ್‌ ನಾಯಕ್‌ ಮಾತನಾಡಿ, ಸ್ಕೈಡರ್‌ ಕಂಪನಿಯವರು ನೀಡಿದ ಈ ತರಬೇತಿ ಕೇಂದ್ರದ ಉದ್ದೇಶ ವಿದ್ಯಾರ್ಥಿಗಳಿಗೆ ಕಲಿಯುತ್ತಿರುವಾಗಲೇ ಇಲೆಕ್ಟ್ರಿಕಲ್ ತಾಂತ್ರಿಕ ತರಬೇತಿಯನ್ನು ನೀಡಿ ಅವರೊಂದಿಗೆ ಉದ್ಯೋಗ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯಲ್ಲಿ 90 ದಿನಗಳ ಕಾಲ ಐಟಿಐ ವಿದ್ಯಾರ್ಥಿಗಳಿಗೆ ಡೊಮೆಸ್ಟಿಕ್‌, ಇಂಡಸ್ಟ್ರಿಯಲ್‌, ಕಮರ್ಶಿಯಲ್‌ ಹಾಗೂ ಮನೆಯ ವಾಯರಿಂಗ್‌, ಹೋಮ್‌ ಅಪ್ಲಾಯನ್ಸಸ್‌ ರಿಪೇರಿಗೆ ಸಂಬಂಧಿಸಿದ ತರಬೇತಿಯನ್ನು ನೀಡಲಾಗುವುದು. ಈ ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಟೂಲ್‌ ಕಿಟ್‌ಗಳನ್ನು ಸಹ ನೀಡುವುದರ ಜತೆಗೆ ತರಬೇತಿಯ ನಂತರ ಪ್ರಮಾಣ ಪತ್ರ ವಿತರಿಸಿ, ಉದ್ಯೋಗ ದೊರಕಿಸಿ ಕೊಡಲಾಗುವದು ಎಂದರು.

ಜೆಎಸ್ಸೆಸ್‌ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಡಾಯ್‌ ಫೌಂಡೇಶನ್‌ನ ಶಿಲ್ಪಾ ಕಡಕೋಳ, ಮಹೇಶ ಕುಂದರಪಿಮಠ, ವಿಕಾಸ ಬಿಳಗಿಕರ್‌, ಸುಕನ್ಯಾ ಗುಮ್ಮಗೋಳಮಠ ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.