ಸಮಾಜ ಸೇವೆಯಲ್ಲಿ ಧಾರ್ಮಿಕ ಚಿಂತನೆ ಅಗತ್ಯ
Team Udayavani, Jul 15, 2018, 4:29 PM IST
ಅಳ್ನಾವರ: ಜನಪ್ರತಿನಿಧಿಗಳು ಸಮಾಜ ಸೇವೆ ಸಲ್ಲಿಸುವಾಗ ಧಾರ್ಮಿಕ ಚಿಂತನೆಗಳನ್ನು ಅಳವಡಿಸಿಕೊಂಡಲ್ಲಿ ಅವರ ಸೇವೆ ಉತ್ಕೃಷ್ಟತೆಯಿಂದ ಕೂಡಿರುತ್ತದೆ ಎಂದು ಪಪಂ ಅಧ್ಯಕ್ಷೆ ಭಾಗ್ಯವತಿ ಕುರುಬರ ಅಭಿಪ್ರಾಯಪಟ್ಟರು. ಇಲ್ಲಿನ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ ವತಿಯಿಂದ ಪಪಂನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಪುಣ್ಯಭೂಮಿಯಲ್ಲಿ ಸನ್ಮಾನ ದೊರೆತಿದ್ದು, ನನ್ನ ಸೌಭಾಗ್ಯ. ಆರಾಧ್ಯ ದೇವರ ಅನುಗ್ರಹ ಸದಾ ನನ್ನ ಸೇವೆಗೆ ದೊರಕಲಿ ಎಂದ ಅವರು, ಈ ಧಾರ್ಮಿಕ ತಾಣದಲ್ಲಿ ನಡೆಯುತ್ತಿರುವ ಧಾರ್ಮಿಕ, ಆಧ್ಯಾತ್ಮಿಕ, ಶಿವಾನುಭವ ಗೋಷ್ಠಿಗಳು ಭಕ್ತ ಸಮೂಹಕ್ಕೆ ನೈತಿಕ ಬೆಂಬಲ ಸೂಚಿಸುತ್ತಾ ಸಾಗುವುದರ ಜೊತೆಗೆ ಸಮಾಜದಲ್ಲಿ ಸನ್ನಡತೆಯನ್ನು ಜೀವಂತಿಕೆಯಲ್ಲಿಡಲು ಸಹಕಾರಿಯಾಗಿವೆ ಎಂದರು.
ಉಪಾಧ್ಯಕ್ಷ ಕಿರಣ ಗಡಕರ ಮಾತನಾಡಿ, ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ ಸದಾ ಸಮಾಜದ ಒಳಿತಿಗೆ ಶ್ರಮಿಸುತ್ತಿದೆ. ವ್ಯಕ್ತಿಯ ಬೆಳವಣಿಗೆ, ಸಾಧನೆಯಲ್ಲಿ ಅವಕಾಶಗಳ ಸದ್ಬಳಕೆ ಜೊತೆಗೆ ಸಾರ್ವಜನಿಕರ ಸಹಕಾರ ನಿರ್ಣಾಯಕವಾಗಿರುತ್ತದೆ. ಇಂದಿನ ಸನ್ಮಾನ ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದರು.
ದೇವಸ್ಥಾನ ಟ್ರಸ್ಟ್ ಕಮೀಟಿ ಅಧ್ಯಕ್ಷ ಬಸಯ್ಯ ಹಿರೇಮಠ ಮಾತನಾಡಿ, ಈ ಜನಪ್ರತಿನಿಧಿ ಗಳು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸದಾ ಪ್ರಾಮಾಣಿಕ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಭಾಗ್ಯವತಿ ಅವರು ನೂತನವಾಗಿ ಅಧ್ಯಕ್ಷರಾಗಿದ್ದು, ಪಟ್ಟಣದ ಅಭಿವೃದ್ಧಿಗೆ ಹೊಸ ದಿಕ್ಸೂಚಿಯಾಗಲಿ. ಇವರಲ್ಲಿ ಅಡಗಿರುವ ಧಾನ, ಧರ್ಮದ ಜಾಗೃತಿ ಹಾಗೂ ಸಮಾಜಮುಖೀ ಚಿಂತನೆಗಳು ಇತರರಿಗೆ ಮಾದರಿಯಾಗಿವೆ ಎಂದರು.
ಹಿರಿಯರಾದ ಎಸ್.ಡಿ. ದೇಗಾವಿಮಠ ಮಾತನಾಡಿದರು. ಐ.ಸಿ. ಹಸಬಿಮಠ, ವಿನಾಯಕ ಕುರುಬರ, ವೀರೇಶ ಲಿಂಗನಮಠ, ವಿನಾಯಕ ಹಿರೇಮಠ, ರಾಜು ಬೆಂಡಿಗೇರಿ, ಮಂಜುನಾಥ ಹಕ್ಕಿ, ರಾಜಶೇಖರ ಕೌಜಲಗಿ, ಉಮೇಶ ದೊಡ್ಡಮನಿ, ಪೂರ್ಣಿಮಾ ಮುತ್ನಾಳ, ಜಯಶ್ರೀ ಸೊಪ್ಪಿ, ಶಕುಂತಲಾ ದೇಗಾವಿಮಠ ಇದ್ದರು. ಪಲ್ಲಕ್ಕಿ ಸೇವೆ, ಮಹಾ ಮಂಗಳಾರತಿ, ಪ್ರಸಾದ ಸೇವೆ ಹಾಗೂ ಉಪನ್ಯಾಸ ಕಾರ್ಯಕ್ರಮಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!