ಪಾಲಿಕೆ ಒಡೆತನದ ಕಟ್ಟಡಗಳ ಮೇಲೆ ಶೀಘ್ರ ಸೌರ ಘಟಕ

ಯೋಜನೆಗಿದ್ದ "ದರ ಗೊಂದಲ' ತೊಡಕು ನಿವಾರಣೆ

Team Udayavani, Jun 1, 2020, 8:08 AM IST

ಪಾಲಿಕೆ ಒಡೆತನದ ಕಟ್ಟಡಗಳ ಮೇಲೆ ಶೀಘ್ರ ಸೌರ ಘಟಕ

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಸ್ಮಾರ್ಟ್‌ಸಿಟಿ ಯೋಜನೆಯ ಸೋಲಾರ್‌ ಯೋಜನೆಗಿದ್ದ ತೊಡಕು ನಿವಾರಣೆಯಾಗಿದೆ. ಐದನೇ ಬಾರಿಗೆ ಕರೆದಿರುವ ಟೆಂಡರ್‌ ಬಹುತೇಕ ಪೂರ್ಣಗೊಳ್ಳುವ ಭರವಸೆ ಮೂಡಿದ್ದು, ಮಹಾನಗರ ಪಾಲಿಕೆ ಒಡೆತನದ ಪ್ರಮುಖ ಕಟ್ಟಡಗಳ ಮೇಲೆ ಸೋಲಾರ್‌ ಪ್ಯಾನಲ್‌ ಅಳವಡಿಕೆ ಕಾರ್ಯ ಆರಂಭಗೊಳ್ಳುವ ವಿಶ್ವಾಸ ಮೂಡಿಸಿದೆ.

ಆಯ್ದ ಸರಕಾರಿ ಕಟ್ಟಡಗಳ ಮೇಲೆ ಸೋಲಾರ್‌ ಪ್ಯಾನಲ್‌ ಅಳವಡಿಕೆಗೆ ಯೋಜನೆ ರೂಪಿಸಲಾಗಿದೆ. ಖಾಸಗಿ ಸಹಭಾಗಿತ್ವದಡಿ ಸೋಲಾರ್‌ ವಿದ್ಯುತ್‌ ಉತ್ಪಾದನೆಗೆ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಒತ್ತು ನೀಡಲಾಗಿದೆ. ಆದರೆ ರಾಜ್ಯದ ಪ್ರತಿ ಯುನಿಟ್‌

ಖರೀದಿಯ ದರ ದೊಡ್ಡ ಕಗ್ಗಂಟಾಗಿ ಪರಿಣಿಮಿಸಿದ್ದರ ಪರಿಣಾಮ ಕಳೆದ ನಾಲ್ಕು ಬಾರಿ ಟೆಂಡರ್‌ ಕರೆದರೂ ಗುತ್ತಿಗೆದಾರರು ಮುಂದೆ ಬಂದಿರಲಿಲ್ಲ. ಕರ್ನಾಟಕ ಎಲೆಕ್ಟ್ರಿಕಲ್‌ ರೆಗ್ಯುಲೇಶನ್‌ ಕಾರ್ಪೊರೇಶನ್‌ ಪ್ರತಿ ಯುನಿಟ್‌ ಸೋಲಾರ್‌ ವಿದ್ಯುತ್‌ಗೆ 3.20 ರೂ. ನಿಗದಿ ಮಾಡಿದ್ದು, ಗುತ್ತಿಗೆದಾರರು ಕನಿಷ್ಠ 5-6 ರೂ. ನಿಗದಿಪಡಿಸಿದರೆ ಮಾತ್ರ ಸಾಧ್ಯ ಎಂದು ಪಟ್ಟು ಹಿಡಿದಿದ್ದರು.

ಕಂಪೆನಿಯಿಂದ ಭರಣ: ನಾಲ್ಕು ಬಾರಿ ಟೆಂಟರ್‌ ಕರೆದರೂ ಯಾವ ಗುತ್ತಿಗೆದಾರರು ಮನಸ್ಸು ಮಾಡಿರಲಿಲ್ಲ. ದರ ವ್ಯತ್ಯಾಸ ಸರಿದೂಗಿಸದಿದ್ದರೆ ಯೋಜನೆ ಸಾಕಾರಗೊಳ್ಳುವುದಿಲ್ಲ ಎಂಬುದರಿತು ರಾಜ್ಯಮಟ್ಟದಲ್ಲಿ ಕರ್ನಾಟಕ ಎಲೆಕ್ಟ್ರಿಕಲ್‌ ರೆಗ್ಯುಲೇಶನ್‌ ಕಾರ್ಪೊರೇಶನ್‌ ವಿಧಿಸಿರುವ ಪ್ರತಿ ಯುನಿಟ್‌ ದರ ಹಾಗೂ ಗುತ್ತಿದಾರರು ಬಯಸುವ ದರದಲ್ಲಿ ವ್ಯತ್ಯಾಸವನ್ನು ಸ್ಮಾರ್ಟ್‌ಸಿಟಿ ಕಂಪೆನಿ ಭರಿಸುವ ಆಧಾರದಲ್ಲಿ ಒಪ್ಪಿಗೆ ನೀಡಿದೆ. ನಿರ್ವಹಣಾ ಅವಧಿಯಲ್ಲಿ ಕೂಡ ಒಂದಿಷ್ಟು ಮಾರ್ಪಾಡು ಮಾಡಿ ಟೆಂಡರ್‌ ಮಾದರಿ ಬದಲಿಸಿ ಟೆಂಡರ್‌ ಕರೆದಿರುವುದರಿಂದ ಈ ಬಾರಿ ಗುತ್ತಿಗೆದಾರರು ಪಾಲ್ಗೊಳ್ಳುವ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಮೂರು ಪ್ರತಿಷ್ಠಿತ ಗುತ್ತಿಗೆದಾರರು ಈ ಕುರಿತು ವಿಚಾರಣೆ ಮಾಡಿದ್ದಾರೆ. ಜೂ.30 ರೊಳಗೆ ಟೆಂಡರ್‌ ಪ್ರಕ್ರಿಯೆ ಬಹುತೇಕ ಪೂರ್ಣಗೊಳ್ಳಲಿದ್ದು, ಪಾಲಿಕೆ ಕಟ್ಟಡಗಳ ಮೇಲೆ ಸೋಲಾರ್‌ ಪ್ಯಾನಲ್‌ ಅಳವಡಿಕೆ ಆರಂಭವಾಗಲಿದೆ ಎನ್ನುವ ವಿಶ್ವಾಸ ಸ್ಮಾರ್ಟ್‌ಸಿಟಿ ಯೋಜನೆ ಅಧಿಕಾರಿಗಳಲ್ಲಿದೆ.

ಟೆಂಡರ್‌ ಮಾದರಿಯಲ್ಲಿ ಮಾತ್ರ ಮಾರ್ಪಾಡಾಗಿದ್ದು, ಸೋಲಾರ್‌ ಪ್ಯಾನೆಲ್‌ ಅಳವಡಿಸಲು ಆಯ್ಕೆ ಮಾಡಿದ ಕಟ್ಟಡಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹಿಂದೆ ನಿರ್ಧರಿಸಿದಂತೆ ಪಾಲಿಕೆ ಒಡೆತನದಲ್ಲಿರುವ 180 ಕಟ್ಟಡಗಳ ಪೈಕಿ ಉತ್ತಮ ಹಾಗೂ ಹೆಚ್ಚು ವಿದ್ಯುತ್‌ ಬಳಸುವ 11 ಕಟ್ಟಡಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ. ಮುಂದೆ ಎಲ್ಲಾ ಸರಕಾರಿ ಕಚೇರಿಗಳ ಕಟ್ಟಡಗಳ ಮೇಲೆ ಸೋಲಾರ್‌ ಪ್ಯಾನೆಲ್‌ ಅಳವಡಿಸಿ ವಿದ್ಯುತ್‌ ಸ್ವಾವಲಂಬಿ ಕಚೇರಿಗಳನ್ನಾಗಿ ಮಾಡುವ ಉದ್ದೇಶವಿದೆ.

ಐದು ಕೋಟಿ ಯೋಜನೆ :  11 ಕಟ್ಟಡಗಳು ಸೋಲಾರ್‌ ವಿದ್ಯುತ್‌ ಹೊಂದಲಿದ್ದು, ಒಟ್ಟು 340 ಕಿಲೋವ್ಯಾಟ್‌ ಸೋಲಾರ್‌ ವಿದ್ಯುತ್‌ ಉತ್ಪಾದನೆ ಗುರಿ ಹೊಂದಲಾಗಿದೆ. ಇದೀಗ ಮಹಾನಗರ ಪಾಲಿಕೆ ವಾಣಿಜ್ಯ ದರದಲ್ಲಿ ಹೆಸ್ಕಾಂಗೆ ವಿದ್ಯುತ್‌ ಬಳಕೆ ಪಾವತಿ ಮಾಡುತ್ತಿದ್ದು, ಸೋಲಾರ್‌ ವಿದ್ಯುತ್‌ ಪಡೆಯುವುದರಿಂದ ಖರ್ಚು ಕೂಡ ಕಡಿಮೆ ಆಗಲಿದೆ ಎನ್ನುವ ಅಭಿ ಪ್ರಾಯ ಅಧಿಕಾರಿಗಳಲ್ಲಿದೆ. ಸೋಲಾರ್‌ ಪ್ಯಾನಲ್‌ ಅವಳಡಿಕೆಗೆ ನೆಹರು ಮೈದಾನದ ಕಟ್ಟಡದ ತಾರಸಿ ಅಷ್ಟೊಂದು ಸಾಮರ್ಥ್ಯ ಹೊಂದಿಲ್ಲ ಎನ್ನುವ ಕಾರಣಕ್ಕೆ ಇದನ್ನು ಕೈಬಿಡಲಾಗಿದೆ.

ಎಲ್ಲೆಲ್ಲಿ ಎಷ್ಟು  ಉತ್ಪಾದನೆ? :  ಕರ್ನಾಟಕ ಒನ್‌ ಕೇಂದ್ರ-3 ಕಿಲೋ ವ್ಯಾಟ್‌, ಹಳೇ ಹುಬ್ಬಳ್ಳಿ ವಾಣಿಜ್ಯ ಕಟ್ಟಡ-3 ಕಿವ್ಯಾ, ಟೌನ್‌ ಹಾಲ್‌ -4.21 ಕಿವ್ಯಾ, ಈಜುಕೊಳ ಧಾರವಾಡ-10 ಕಿವ್ಯಾ, 4ನೇ ವಲಯ ಕಚೇರಿ-10 ಕಿವ್ಯಾ, ಪಾಲಿಕೆ ಕೇಂದ್ರ ಕಚೇರಿ-25 ಕಿವ್ಯಾ, ಗಾಜಿನಮನೆ-25 ಕಿವ್ಯಾ, ಚಿಟಗುಪ್ಪಿ ಆಸ್ಪತ್ರೆ(ಹೊಸ ಕಟ್ಟಡ)-35 ಕಿವ್ಯಾ, ಕನ್ನಡ ಭವನ-45 ಕಿವ್ಯಾ, ಕಲಾಭವನ ಧಾರವಾಡ-80 ಕಿವ್ಯಾ, ಸಾಂಸ್ಕೃತಿಕ ಭವನ-100 ಕಿವ್ಯಾ ವಿದ್ಯುತ್‌ ಉತ್ಪಾದನೆ ಗುರಿ ಹೊಂದಲಾಗಿದೆ. ಗುತ್ತಿಗೆದಾರರು ಇವುಗಳ ನಿರ್ವಹಣೆ ಹೊಣೆ ಹೊಂದಿದ್ದು, 10-25 ವರ್ಷಗಳ ಅವಧಿ ನಿಗದಿ ಮಾಡಲಾಗಿದೆ.

ಪ್ರತಿ ಯುನಿಟ್‌ ಸೋಲಾರ್‌ ವಿದ್ಯುತ್‌ಗೆ ನಿಗದಿಪಡಿಸಿದ ದರದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ಬಾರಿ ಟೆಂಡರ್‌ ಕರೆದರೂ ಗುತ್ತಿಗೆದಾರರು ಪಾಲ್ಗೊಂಡಿರಲಿಲ್ಲ. ಇದೀಗ ವ್ಯತ್ಯಾಸದ ಹಣವನ್ನು ಸ್ಮಾರ್ಟ್‌ಸಿಟಿ ಕಂಪನಿ ಪಾವತಿ ಮಾಡುವುದು ಸೇರಿದಂತೆ ಮಾದರಿ ಬದಲಿಸಿ ಟೆಂಡರ್‌ ಕರೆಯಲಾಗಿದೆ. ಈಗಾಗಲೇ ಮೂವರು ಗುತ್ತಿಗೆದಾರರು ವಿಚಾರಣೆ ಮಾಡಿದ್ದು, ಈ ಬಾರಿ ಯೋಜನೆ ಅನುಷ್ಠಾನಗೊಳ್ಳುವ ಭರವಸೆಯಿದೆ. -ಎಸ್‌.ಎಚ್‌. ನರೇಗಲ್ಲ, ವಿಶೇಷಾಧಿಕಾರಿ, ಸ್ಮಾರ್ಟ್‌ಸಿಟಿ ಯೋಜನೆ

 

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.