ಚರ್ಚೆಗೆ ಗ್ರಾಸವಾದ ಘನತ್ಯಾಜ್ಯ ಘಟಕ

ರಸ್ತೆ-ಹಳ್ಳದ ದಂಡೆ ಅತಿಕ್ರಮಿಸಿ ನಿರ್ಮಾಣ ; ಅಪೂರ್ಣವಾಗಿದ್ದರೂ ತರಾತುರಿಯಲ್ಲಿ ಉದ್ಘಾಟನೆ

Team Udayavani, Oct 28, 2022, 1:21 PM IST

8

ಕುಂದಗೋಳ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಗುರುವಿನಹಳ್ಳಿ ಗ್ರಾಮ ಪಂಚಾಯಿತಿಯವರು ರಸ್ತೆಯನ್ನೇ ಒತ್ತುವರಿ ಮಾಡಿ ನಿರ್ಮಿಸಿದ್ದು ಎಷ್ಟರ ಮಟ್ಟಿಗೆ ಸರಿ ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಗ್ರಾಪಂ ಮಟ್ಟದಲ್ಲಿ ಘನತ್ಯಾಜ್ಯ ಘಟಕಗಳನ್ನು ನಿರ್ಮಿಸಿ ಅಲ್ಲಿನ ತ್ಯಾಜ್ಯದಿಂದ ಎರೆಹುಳು ಗೊಬ್ಬರ ತಯಾರಿಸಿ ಸ್ಥಳೀಯ ರೈತರಿಗೆ ಅನುಕೂಲವಾಗಲು ಹಾಗೂ ಗ್ರಾಪಂಗೆ ಆದಾಯ ಮೂಲವಾಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಗುರುವಿನಹಳ್ಳಿ ಗ್ರಾಮದ ಘಟಕ ನಿರ್ಮಾಣಕ್ಕಾಗಿ ನರೇಗಾ ಯೋಜನೆಯಡಿ 12 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲಾಗಿದ್ದು, ಘಟಕದ ಹೊರಗಿನ ಕೆಲ ಗೋಡೆಗಳು ಸಿಮೆಂಟ್‌ ಗಿಲಾವ್‌ ಪೂರ್ಣಗೊಂಡಿಲ್ಲ. ಒಳಭಾಗದಲ್ಲಿ ಎರಡು ಶೌಚಾಲಯ ಗಳನ್ನು ನಿರ್ಮಿಸಿದ್ದು ಅವುಗಳಿಗೆ ಬಾಗಿಲು ಹಾಗೂ ನೀರಿನ ವ್ಯವಸ್ಥೆ ಇಲ್ಲವಾಗಿದೆ. ಘಟಕಕ್ಕೆ ವಿದ್ಯುತ್‌ ಸಂಪರ್ಕ ಸಹ ಇದುವರೆಗೂ ಕಲ್ಪಿಸಿಲ್ಲ. ತರಾತುರಿಯಲ್ಲಿ ಸೆ. 23ರಂದು ಘಟಕದ ಉದ್ಘಾಟನೆ ಸಹ ನೆರವೇರಿದೆ!

ಸರ್ಕಾರದ ದೃಷ್ಟಿಯಲ್ಲಿ ಈ ಘಟಕವು ಕಾರ್ಯಪ್ರವೃತ್ತಗೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿದಾಗ ಘಟಕವು ಸದಾ ಬಾಗಿಲು ಮುಚ್ಚಿರುವುದು ಕಂಡುಬಂತು. ಪಿಡಿಒ ಕವಿತಾ ವಿ.ಕೊಡ್ಲಿಗವಾಡ ಅವರನ್ನು ಈ ಕುರಿತು ಪ್ರಶ್ನಿಸಿದಾಗ, ಇನ್ನೂ ಸ್ವಲ್ಪ ಕೆಲಸ ಉಳಿದಿದೆ. ಗುತ್ತಿಗೆದಾರರಿಗೆ ಪೂರ್ಣಗೊಳಿಸಲು ಹೇಳಲಾಗಿದೆ. ಆರಂಭದ ಹಂತವಾಗಿ ಒಂದು ದಿನ ಊರಿನ ಒಣ ಕಸ ತಂದು ಸಂಗ್ರಹ ಮಾಡಲಾಗಿದೆ. ಮುಂದೆ ಕಾರ್ಯ ಆರಂಭಿಸುತ್ತೇವೆ ಎಂದರು.

ರಸ್ತೆ ಮಧ್ಯೆ ಏಕೆ?: ಘಟಕವನ್ನು ರಸ್ತೆ ಮಧ್ಯದಲ್ಲಿಯೇ ಏಕೆ ನಿರ್ಮಿಸಿದ್ದೀರಿ ಎಂದು ಪಿಡಿಒ ಅವರನ್ನು ಪ್ರಶ್ನಿಸಿದಾಗ, ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ನಿವೇಶನ ಲಭ್ಯ ಇಲ್ಲದಿರುವುದರಿಂದ ಸ್ಥಳೀಯ ಕಮಿಟಿಯವರು ಕಾಲುವೆ ದಂಡೆ ಹಾಗೂ ರಸ್ತೆ ಬಳಸಿಕೊಂಡು ನಿರ್ಮಿಸಲು ಠರಾವು ಪಾಸ್‌ ಮಾಡಿದ್ದಾರೆ. ಸರ್ಕಾರದ ಯೋಜನೆ ಅನುಷ್ಠಾನಗೊಳಿಸಲು ಈ ಜಾಗದಲ್ಲಿ ನಿರ್ಮಿಸಿದ್ದೇವೆ ಎಂದು ಹೇಳಿದರು.

ಬೇಲಿಯೇ ಎದ್ದು ಹೊಲ ಮೇಯ್ದಂತೆ

ಯಾರಾದರೂ ರಸ್ತೆ ಜಾಗ ಒತ್ತುವರಿ ಮಾಡಿಕೊಂಡರೆ ಸ್ಥಳೀಯ ಆಡಳಿತ ತೆರವುಗೊಳಿಸಿ ಜನರ ಸಂಚಾರಕ್ಕೆ ಮುಕ್ತ ಮಾಡಿಕೊಡುತ್ತದೆ. ಆದರೆ ಇಲ್ಲಿ ಸ್ಥಳೀಯ ಆಡಳಿತವೇ ಸರ್ಕಾರದ ಯೋಜನೆ ಅನುಷ್ಠಾನಗೊಳಿಸುವ ನೆಪದಲ್ಲಿ ರಸ್ತೆ ಹಾಗೂ ಹಳ್ಳದ ದಂಡೆ ಒತ್ತುವರಿ ಮಾಡಿರುವುದು ಹುಬ್ಬೇರಿಸುವಂತೆ ಮಾಡಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಘಟಕ ಉದ್ಘಾಟನೆ ಆದರೂ ಇದುವರೆಗೂ ಇಲ್ಲಿ ಯಾವ ಚಟುವಟಿಕೆಗಳು ಕಾರ್ಯರೂಪಕ್ಕೆ ಬಾರದೆ ಇರುವುದರಿಂದ ಕಾಟಾಚಾರಕ್ಕೆ ನಿರ್ಮಿಸಿದಂತೆ ಭಾಸವಾಗುತ್ತಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ತಾಪಂ ಇಒ ಪರಮೇಶಕುಮಾರ ವಿ. ಅವರನ್ನು ಈ ಕುರಿತು ಮಾತನಾಡಿಸಿದಾಗ, ನಾನು ಈಗ ತಾನೆ ಬಂದಿದ್ದೇನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಹೇಳಿದರು. ತಾಪಂ ಎಂಜಿನಿಯರ್‌ ಲಿಂಗರಾಜ ದಾಡಿಬಾವಿ ಅವರನ್ನು ಮಾತನಾಡಿಸಿದಾಗ, ನಾನು ಸಹ ಈಗ ಬಂದಿದ್ದೇನೆ. ಪೂರ್ಣ ಮಾಹಿತಿಯಿಲ್ಲ ಎಂದು ಜಾರಿಕೊಂಡರು.

-ಶೀತಲ ಮುರಗಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.