ಆರ್ಟಿಇ ಸಮಸ್ಯೆ ಬಗೆಹರಿಸಿ
Team Udayavani, May 15, 2018, 5:35 PM IST
ಹುನಗುಂದ: ಆರ್ಟಿಇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪಾಲಕರು ಬಿಇಒ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ಪಟ್ಟಣದಲ್ಲಿ ನಡೆಯಿತು.
ಪ್ರತಿಭಟನೆಯ ನೇತೃತ್ವ ವಹಿಸಿ ಸಮಾಜ ಸೇವಕ ರಾಜು ಬಡಿಗೇರ ಮಾತನಾಡಿ, ಪಾಲಕರೊಂದಿಗೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದ್ದು, ಇದರಿಂದ ತಾಲೂಕಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಶಿಕ್ಷಣ ಇಲಾಖೆ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಚುಣಾವಣೆ ಸಂದರ್ಭದಲ್ಲಿ ಎರಡು ದಿನ ರಜೆ ಬಂದಿದ್ದು ಅರ್ಜಿ ಸಲ್ಲಿಸಲು ಸಮಯದ ಅಭಾವ ಉಂಟಾಗಿದೆ. ಆನ್ಲೈನ್ದಲ್ಲಿ ಅರ್ಜಿ ಸಲ್ಲಿಸಲು ಹೋದರೆ ಮತ್ತೆ ಮರಳಿ ಪ್ರಯತ್ನಿಸಿ ಎಂದು ಮೇಸೇಜ್ ಬರುತ್ತದೆ ಇದರಿಂದ ವಿದ್ಯಾರ್ಥಿಗಳ ಪಾಲಕರಲ್ಲಿ ಆತಂಕ ಉಂಟಾಗಿದೆ. ಇದನ್ನು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿ ಈ ಕೂಡಲೇ ಪಾಲಕರಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ದಿನಾಂಕ ಮುಂದೂಡಬೇಕು ಎಂದು ಆಗ್ರಹಿಸಿದರು.
ಪಾಲಕ ಇಮ್ತಿಯಾಜ ಖತಿಬ್ ಮಾತನಾಡಿ, ಆರ್ಟಿಎ ಯೋಜನೆಯು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಇದರಿಂದ ಬಡ ಜನಸಾಮಾನ್ಯ ಪಾಲಕರಿಗೆ ತೊಂದರೆಯಾಗಿದೆ. ನಿಜವಾದ ಪಲಾನುಭವಿಗಳಿಗೆ ಮಹತ್ವಾಕಾಂಕ್ಷಿ ಈ ಯೋಜನೆಯ ಸೌಲಭ್ಯ ದೊರೆಯದೆ ವಂಚಿತರಾಗುತಿದ್ದಾರೆ. ಕಾರಣ ಯೋಜನೆಯನ್ನು ಸರ್ಕಾರ ಸರಳೀಕರಣಗೊಳಿಸಲು ಒತ್ತಾಯಿಸಿದರು. ಜಗದೀಶ ಬಡಿಗೇರ, ಮಂಜು ಹವಾಲ್ದಾರ, ಎಂ.ಐ.ಕಂದಗಲ್ಲ , ಮಹಾಂತೇಶ ಬಾವಿಕಟ್ಟಿ, ಎಂ.ಎಸ್. ಮೇಲಿನಮನಿ, ಎಂ.ಎಚ್. ಕಲಬುರ್ಗಿ, ಕೆ.ಎನ್.ದನ್ನೂರ, ಎನ್.ಎ. ಮುಕ್ಕಣ್ಣವರ, ಯಲ್ಲಪ್ಪ ಚುಂಚಾ, ಪಿ.ವಿ. ಮನ್ನಾಪುರ ನೂರಾರು ಸಂಖ್ಯೆಯಲ್ಲಿ ಪಾಲಕರು ಭಾವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ