ವಿವಾಹಕ್ಕೆ ಕೆಲ ಮಾರ್ಗದರ್ಶಿ ಸೂತ್ರ
Team Udayavani, May 7, 2020, 12:34 PM IST
ಧಾರವಾಡ: ಕೋವಿಡ್ 19 ಸೋಂಕು ಪತ್ತೆ ಆಗಿರುವ ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಜಿಲ್ಲಾದ್ಯಂತ ವಿವಾಹಗಳನ್ನು ನಡೆಸಲು ರಾಜ್ಯ ಸರ್ಕಾರವು ಕೆಲವು ಮಾರ್ಗದರ್ಶಿ ಸೂತ್ರಗಳನ್ನು ಸೂಚಿಸಿದೆ.
ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಗಳು ಮತ್ತು ಇತರ ಸಭೆಗಳನ್ನು ಮೇ 4ರಿಂದ ಜಾರಿಗೆ ಬರುವಂತೆ ಎರಡು ವಾರಗಳ ಅವಧಿಗೆ ನಿಷೇಧಿಸಲಾಗಿದೆ. ಉಳಿದಂತೆ ಮದುವೆಗೆ ಸಂಬಂಧಿಸಿದ ಕೂಟಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಗರಿಷ್ಠ 50ಕ್ಕಿಂತ ಹೆಚ್ಚು ಸಂಖ್ಯೆಯ ಅತಿಥಿಗಳು ಭಾಗವಹಿಸಬಾರದು.
ಸಾರ್ವಜನಿಕ ಸ್ಥಳಗಳಲ್ಲಿ, ಸಮುದಾಯ ಭವನ, ಧಾರ್ಮಿಕ ಸ್ಥಳಗಳಲ್ಲಿ ಮದುವೆಗಳನ್ನು ಹಮ್ಮಿಕೊಳ್ಳಬಾರದು. ವಿವಾಹ ಆಯೋಜನೆಗೆ ಯಾವುದೇ ವಿಶೇಷ ಅನುಮತಿ ಅಗತ್ಯವಿಲ್ಲ. ವಿವಾಹದ ಉದ್ದೇಶಕ್ಕಾಗಿ ಯಾವುದೇ ಅಂತರ ರಾಜ್ಯಗಳ ಸಂಚಾರಕ್ಕೆ ಅನುಮತಿ ಇಲ್ಲ. ಈ ಸಲಹೆಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಿಸಿ ದೀಪಾ ಚೋಳನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ