ಹುಬ್ಬಳ್ಳಿ-ಅಂಕೋಲಾ ಮಾರ್ಗಕ್ಕೆ ನೈಋತ್ಯ ರೈಲ್ವೆ ಸಜ್ಜು


Team Udayavani, Jul 15, 2017, 3:45 AM IST

Southwest-railway-outfit-fo.jpg

ಹುಬ್ಬಳ್ಳಿ: ಹಲವು ದಶಕಗಳಿಂದ ನನೆಗುದಿಗೆ ಬಿದ್ದಿರುವ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಮುಹೂರ್ತದ ಶುಭ ಲಕ್ಷಣಗಳು ಗೋಚರಿಸುತ್ತಿವೆ. ಕೇಂದ್ರ ಅರಣ್ಯ ಸಚಿವಾಲಯದ ಪ್ರಾದೇಶಿಕ ಉನ್ನತಾಧಿಕಾರ ಸಮಿತಿಯಿಂದ ಇನ್ನೊಂದು ಹಂತದ ಅನುಮೋದನೆ ಸಿಕ್ಕರೆ ಸಾಕು. ನೈಋತ್ಯ ರೈಲ್ವೆ ವಲಯ ರಾಜ್ಯ ಸರ್ಕಾರಕ್ಕೆ ಭೂ ಸ್ವಾಧೀನ ಪ್ರಸ್ತಾವನೆ ಸಲ್ಲಿಸಲು ತುದಿಗಾಲ ಮೇಲೆ ನಿಂತಿದೆ.

ಬಯಲುಸೀಮೆ ಮತ್ತು ಕರಾವಳಿ ಪ್ರದೇಶಕ್ಕೆ ವ್ಯಾಪಾರ-ವಹಿವಾಟು, ಪ್ರವಾಸೋದ್ಯಮ ಸಂಪರ್ಕ ಇನ್ನಷ್ಟು ಸುಲಭವಾಗಲು ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಮಹತ್ವದ ಪಾತ್ರ ವಹಿಸಲಿದೆ. ಹಲವು ದಶಕಗಳಿಂದ ವಿವಾದ ಹಾಗೂ ಉದಾಸೀನತೆಗೆ ಸಿಲುಕಿದ್ದ ಯೋಜನೆ ಇದೀಗ ಅನುಷ್ಠಾನವಾಗುವ ಆಶಾಭಾವನೆ ಗಟ್ಟಿಗೊಳ್ಳತೊಡಗಿದೆ.

164 ಕಿ.ಮೀ. ರೈಲು ಮಾರ್ಗ:
ಹುಬ್ಬಳ್ಳಿ-ಅಂಕೋಲಾ ನಡುವೆ ಸುಮಾರು 164.44 ಕಿ.ಮೀ. ಉದ್ದದ ರೈಲು ಮಾರ್ಗ ನಿರ್ಮಿಸಬೇಕಾಗಿದೆ. ಸುಮಾರು 45 ಕಿ.ಮೀ. ಮಾರ್ಗ ನಿರ್ಮಾಣ ಕಾರ್ಯ ಬಹುತೇಕ ಮುಗಿದಿದ್ದು, ಯೋಜನೆಗೆ ಹುಬ್ಬಳ್ಳಿಯಿಂದ ಯಲ್ಲಾಪುರ ವರೆಗೆ ಸುಮಾರು 75 ಕಿ.ಮೀ. ಅರಣ್ಯವಲ್ಲದ ಬಯಲು ಪ್ರದೇಶವಿದೆ. ಯಲ್ಲಾಪುರದಿಂದ ಸುಂಕಸಾಳ ನಡುವೆ ಸುಮಾರು 56 ಕಿ.ಮೀ. ಪಶ್ಚಿಮ ಘಟ್ಟದ ಸಹ್ಯಾದ್ರಿ ಬೆಟ್ಟಗಳ ಘಾಟ್‌ ವಲಯವಾಗಿದೆ. ಸುಂಕಸಾಳದಿಂದ ಅಂಕೋಲಾವರೆಗೆ ಪ್ರತ್ಯೇಕ ಬೆಟ್ಟಗಳಿಂದ ಕೂಡಿದ ಪ್ರದೇಶವಿದೆ.

ಯೋಜನೆಗೆ ಒಟ್ಟಾರೆ ಸುಮಾರು 995.64 ಹೆಕ್ಟೇರ್‌ ಭೂಸ್ವಾಧೀನ ಅಗತ್ಯವಿದ್ದು. ಸುಮಾರು 595.64 ಹೆಕ್ಟೇರ್‌ ಅರಣ್ಯಭೂಮಿ, 184.60 ಹೆಕ್ಟೇರ್‌ ತೇವಾಂಶ ಇರುವ ಭೂಮಿ (ವೆಟ್‌ ಲ್ಯಾಂಡ್‌), 190 ಹೆಕ್ಟೇರ್‌ ಒಣ ಭೂಮಿ (ಡ್ರೈ ಲ್ಯಾಂಡ್‌) ಆಗಿದೆ. ಶೇ. 80ರಷ್ಟು ಅರಣ್ಯ ಪ್ರದೇಶ ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಅರಣ್ಯ ಪ್ರದೇಶದ ಬಳಕೆ ಕುಗ್ಗಿಸಲಾಗಿದೆ. ಕೆಲ ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ಯೋಜಿಸಲಾಗಿದ್ದು. ಯೋಜನೆಯಿಂದ ಪರಿಸರದ ಮೇಲಾಗುವ ಪರಿಣಾಮಗಳನ್ನು ತಗ್ಗಿಸಲು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಹಲವು ಸಲಹೆ-ಶಿಫಾರಸುಗಳ ಅಳವಡಿಕೆಗೆ ಯೋಜಿಸಲಾಗಿದೆ.

ಸರಕು ಸಾಗಣೆ-ಪ್ರವಾಸೋದ್ಯಮಕ್ಕೆ ಅನುಕೂಲ:
ಉತ್ತರ ಕರ್ನಾಟಕ ಹಾಗೂ ಕರಾವಳಿ ಪ್ರದೇಶಕ್ಕೆ ವ್ಯಾಪಾರ-ವಹಿವಾಟು ಹಾಗೂ ಪ್ರವಾಸೋದ್ಯಮ ದೃಷ್ಟಿಯಿಂದ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಅನುಕೂಲವಾಗಲಿದೆ. ಕಾರವಾರ, ಬೇಲೇಕೇರಿ, ಮರ್ಮ್ ಗೋವಾ ಹಾಗೂ ಮಂಗಳೂರು ಬಂದರುಗಳಿಗೆ ಸಂಪರ್ಕದ ಕೊಂಡಿಯಾಗಲಿರುವ ಮಾರ್ಗ, ಕಬ್ಬಿಣ ಅದಿರು, ಸಿಮೆಂಟ್‌, ವಿದೇಶಕ್ಕೆ ರಫ್ತಾಗುವ ಮೆಕ್ಕೆಜೋಳ ಇನ್ನಿತರ ಕೃಷಿ ಉತ್ಪನ್ನಗಳನ್ನು ಬಂದರುಗಳ ಮೂಲಕ ಸಾಗಿಸಲು, ವಿವಿಧ ಉತ್ಪನ್ನಗಳನ್ನು ಉತ್ತರ ಕರ್ನಾಟಕಕ್ಕೆ ತರಲು, ಕರಾವಳಿ ಪ್ರದೇಶದ ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರಗಳಿಗೂ ಈ ಯೋಜನೆ ಸಂಪರ್ಕ ಕಲ್ಪಿಸಲಿದೆ.

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಕುರಿತಾಗಿ ಹಲವು ವರ್ಷಗಳಿಂದ ಧ್ವನಿ ಎತ್ತುತ್ತ ಬಂದಿದ್ದೇನೆ. ಹಲವು ಸಭೆಗಳನ್ನು ನಡೆಸಿದ್ದೆ. ಬೇಲೇಕೇರಿ ಬಂದರು ಅಭಿವೃದ್ಧಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮನವಿ ಮಾಡಿದ್ದಾಗ, ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಜಾರಿಗೊಳ್ಳಬೇಕು ಎಂಬ ಷರತ್ತಿನೊಂದಿಗೆ ನೆರವಿಗೆ ಒಪ್ಪಿದ್ದರು. ರಾಷ್ಟ್ರೀಯ ಹಸಿರು ನ್ಯಾಯಪೀಠ ಹಾಗೂ ಕೇಂದ್ರ ಅರಣ್ಯ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ ಹಸಿರು ನಿಶಾನೆ ತೋರಿಸಿವೆ. ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಯೋಜನೆ ಅನುಷ್ಠಾನಕ್ಕೆ ಸಿದ್ಧರಿರುವುದಾಗಿ ತಿಳಿಸಿದ್ದಾರೆ. ರಾಜ್ಯ ಸರಕಾರ ಯೋಜನೆಗೆ ಎಷ್ಟು ಅರಣ್ಯ ಪ್ರದೇಶ ಬಳಕೆ, ಎಷ್ಟು ಮರಗಳು ಕಡಿಯಬೇಕಾಗುತ್ತದೆ. ಪರ್ಯಾಯ ಅರಣ್ಯ ಭೂಮಿಗೆ ಕೈಗೊಂಡ ಕ್ರಮಗಳ ಬಗ್ಗೆ ಸ್ಪಷ್ಟ ಪ್ರಸ್ತಾವನೆ ಸಲ್ಲಿಸಿದಲ್ಲಿ, ಭೂ ಸ್ವಾಧೀನಕ್ಕೆ ಅನುಮೋದನೆ ದೊರೆತು ಯೋಜನೆ ಅನುಷ್ಠಾನಕ್ಕೆ ತೀವ್ರತೆ ಬರಲಿದೆ.
– ಪ್ರಹ್ಲಾದ ಜೋಶಿ, ಸಂಸದ

– ಅಮರೇಗೌಡ ಗೋನವಾರ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.