ಗ್ರಾಮೀಣ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ವಿಶೇಷ ಒತ್ತು

ಆಸಕ್ತಿ ಇರುವವರನ್ನು ಕಲಿಕೆಯಲ್ಲಿ ಬಳಸಿಕೊಳ್ಳುವ ಮಹದಾಸೆ ಇದೆ.

Team Udayavani, Nov 19, 2022, 1:18 PM IST

ಗ್ರಾಮೀಣ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ವಿಶೇಷ ಒತ್ತು

ಅಳ್ನಾವರ: ಗ್ರಾಮೀಣ ಸಮುದಾಯಗಳಿಗೆ ಸಮಾನಶಿಕ್ಷಣ ಪ್ರಕಲ್ಪದಡಿ ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥೆ ತಾಲೂಕಿನ ಬೆಣಚಿ ಮತ್ತು ಕಡಬಗಟ್ಟಿ ಗ್ರಾಪಂ ಆಯ್ಕೆ ಮಾಡಿಕೊಂಡು ಅಂಗನವಾಡಿಯಿಂದ ಪಿಯುಸಿ ವರೆಗಿನ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸ್ಥೆಯ ಪ್ರಾದೇಶಿಕ ಮುಖ್ಯಸ್ಥ ಕೆ.ಎಸ್‌. ಜಯಂತ ಹೇಳಿದರು.

ಡೋರಿ ಗ್ರಾಮದ ಸರ್ಕಾರಿ ಶಾಲಾ ಮೈದಾನದಲ್ಲಿ ಅಂಗನವಾಡಿ ಮಕ್ಕಳಿಗಾಗಿ ಹಮ್ಮಿಕೊಂಡ ಚಿಲಿಪಿಲಿ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂಗನವಾಡಿ ಮಕ್ಕಳ ಕಲಿಕೆ, ದಾಖಲಾತಿ ಉತ್ತಮಪಡಿಸುವ ಕಾರ್ಯ ನಡೆದಿದೆ.

ಶೈಕ್ಷಣಿಕ ಚಟುವಟಿಕೆ ಜೊತೆಗೆ ಅಂಗನವಾಡಿ ಮಕ್ಕಳಲ್ಲಿ ಕ್ರಿಯಾಶೀಲತೆ ಮೂಡಿಸುವ ಪ್ರಯತ್ನದ ಫಲವಾಗಿ ಬೆಣಚಿ, ಡೋರಿ, ಕಿವಡೆಬೈಲ್‌, ದೋಪೆನಟ್ಟಿಯ ಮಕ್ಕಳಿಗೆ ಹಲವಾರು ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.

ಕಲಿಕಾ ಪದ್ಧತಿ ಸುಧಾರಣೆಗೆ ಸಮುದಾಯದ ಸಹಭಾಗಿತ್ವ ಮುಖ್ಯ ಎಂಬ ಅಂಶ ಮನಗಂಡು ಅಂಗನವಾಡಿಗೆ ಬರುವ ಮಕ್ಕಳ ಪಾಲಕರ ಪಟ್ಟಿ ಮಾಡಿಕೊಂಡು ಆಸಕ್ತಿ ಇರುವವರನ್ನು ಕಲಿಕೆಯಲ್ಲಿ ಬಳಸಿಕೊಳ್ಳುವ ಮಹದಾಸೆ ಇದೆ. ನಮ್ಮ ಸಂಸ್ಥೆ ಆರೋಗ್ಯ, ಶಿಕ್ಷಣ, ಸಮುದಾಯ ಅಭಿವೃದ್ಧಿ, ಸಂಶೋಧನೆ ಮತ್ತು ತರಬೇತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಅಧ್ಯಕ್ಷ ಡಾ| ಲಿಂಗರಾಜ ರಾಮಾಪುರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯದಲ್ಲಿ ದೊರೆಯುವ ಶಿಕ್ಷಣ ಮುಂದಿನ ಬದುಕಿಗೆ ಅಡಿಪಾಯ ಇದ್ದಂತೆ ಎಂದರು.ಮಕ್ಕಳಿಗಾಗಿ ಅಭಿನಯ ಗೀತೆ, ವೇಷಭೂಷಣ, ಗುಂಪು ನೃತ್ಯ, ಕಥೆ ಹೇಳುವುದು, ಕಪ್ಪೆ ಓಟ, ಸ್ವಯಂ ಪರಿಚಯ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ನೀಡಲಾಯಿತು. ಪೋಷಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ವಿವಿಧ ಸ್ಪರ್ಧೆ ನಡೆಯಿತು.

ಬೆಣಚಿ ಗ್ರಾಪಂ ಅಧ್ಯಕ್ಷ ಉಮೇಶ ಕದಂ, ಮಹಾಂತೇಶ ಗಾಳಿ, ಕೆ.ಎಂ. ಕರಿಗಾರ, ಆರ್‌. ಎನ್‌. ಬಸ್ತವಾಡಕರ, ಡಿ.ಎನ್‌. ಖಾನಾಪುರಕರ, ಸಂತೋಷ ಕಂಬಾರ, ಸಂಗೀತಾ ಮುತ್ತಲಮುರಿ, ಲಲಿತಾ ಕಮ್ಮಾರ, ಎನ್‌.ಡಿ. ಕುಕಡೊಳ್ಳಿ ಇದ್ದರು. ಶಿವಾನಂದ ವಸ್ತ್ರದಮಠ ಸ್ವಾಗತಿಸಿದರು. ಯೋಗಿತಾ ಪ್ರಾಸ್ತಾವಿಕ ಮಾತನಾಡಿದರು. ಸೋಮನಾಥ ಪಾಟೀಲ ನಿರೂಪಿಸಿದರು. ಸಂತೋಷ ಕಂಬಾರ ವಂದಿಸಿದರು. ಪೂರ್ಣಿಮಾ ಗೆನಪ್ಪನವರ, ಹೀನಾ ದೊಡ್ಡಮನಿ, ನಿರ್ಮಲಾ ಜಗತಾಪ ನಿರ್ಣಾಯಕರಾಗಿದ್ದರು.

 

ಟಾಪ್ ನ್ಯೂಸ್

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ರಾಜಕೀಯ ಪ್ರವೇಶ

ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ರಾಜಕೀಯ ಪ್ರವೇಶ

ವಾಯವ್ಯ ಸಾರಿಗೆ ಚಾಲಕನಿಗೆ ಗೌರವ; ‌ಐವತ್ತು ಮಂದಿ ಪ್ರಾಣ ರಕ್ಷಿಸಿದಾತನಿಗೆ ಅಭಿನಂದನೆ

ವಾಯವ್ಯ ಸಾರಿಗೆ ಚಾಲಕನಿಗೆ ಗೌರವ; ‌ಐವತ್ತು ಮಂದಿ ಪ್ರಾಣ ರಕ್ಷಿಸಿದಾತನಿಗೆ ಅಭಿನಂದನೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

ಕಾಣೆಯಾಗಿದ್ದ 8 ವರ್ಷದ ಬಾಲಕ ಶವವಾಗಿ ಪತ್ತೆ: ಕೊಲೆ ಶಂಕೆ

ಕಾಣೆಯಾಗಿದ್ದ 8 ವರ್ಷದ ಬಾಲಕ ಶವವಾಗಿ ಪತ್ತೆ: ಕೊಲೆ ಶಂಕೆ

ಧಾರವಾಡ: ಏಣಗಿ ಬಾಳಪ್ಪ ಕನ್ನಡ ರಂಗಭೂಮಿ ಸಾಕ್ಷಿ ಪ್ರಜ್ಞೆ

ಧಾರವಾಡ: ಏಣಗಿ ಬಾಳಪ್ಪ ಕನ್ನಡ ರಂಗಭೂಮಿ ಸಾಕ್ಷಿ ಪ್ರಜ್ಞೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ