ಮಳೆ ಅನಾಹುತ ನಿವಾರಣೆಗಾಗಿ ವಿಶೇಷ ಕಾರ್ಯಾಚರಣೆಗೆ ಸೂಚನೆ
|ಮಳೆಗಾಲಕ್ಕೆ ಪೂರ್ವಸಿದ್ಧತೆ ನಡೆಸದ ಪಾಲಿಕೆ ವಿರುದ್ಧ ಶಾಸಕ ಪ್ರಸಾದ್ ಗರಂ
Team Udayavani, Jun 25, 2019, 7:25 AM IST
ಹುಬ್ಬಳ್ಳಿ: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರ ಸಭಾಂಗಣದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳ ಸಭೆ ನಡೆಸಿದರು.
ಹುಬ್ಬಳ್ಳಿ: ಮಳೆ ನೀರಿನಿಂದ ಸಂಕಷ್ಟಕ್ಕೆ ಒಳಗಾಗಿರುವ ಪ್ರದೇಶಗಳಲ್ಲಿ ಚರಂಡಿ ಸ್ವಚ್ಛತೆ ಹಾಗೂ ಮಳೆ ನೀರು ಸರಾಗವಾಗಿ ಹರಿಯುವ ನಿಟ್ಟಿನಲ್ಲಿ ವಿಶೇಷ ಕಾರ್ಯಾಚರಣೆಗೆ ಲಿಡ್ಕರ್ ಅಧ್ಯಕ್ಷರಾದ ಶಾಸಕ ಪ್ರಸಾದ ಅಬ್ಬಯ್ಯ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತರ ಸಭಾಂಗಣದಲ್ಲಿ ಸಭೆ ನಡೆಸಿದ ಅವರು, ರವಿವಾರ ಮಧ್ಯಾಹ್ನ ಸುರಿದ ಮಳೆಯಿಂದ ಮಂಟೂರು ರಸ್ತೆ ಹಾಗೂ ಎಸ್.ಎಂ. ಕೃಷ್ಣ ನಗರ ಭಾಗದಲ್ಲಿ ಸಾಕಷ್ಟು ಹಾನಿಯಾಗಿದೆ. ಪಾಲಿಕೆ ಅಧಿಕಾರಿಗಳು ಮಳೆಗಾಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಪರಿಣಾಮ ಜನರು ಸಮಸ್ಯೆ ಅನುಭವಿಸುವಂತಾಗಿದೆ. ಕೇವಲ ಒಂದೂವರೆ ಗಂಟೆ ಸುರಿದ ಮಳೆಯಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, ನಿರಂತರವಾಗಿ ಸುರಿದಿದ್ದರೆ ಈ ಭಾಗದ ಜನರು ಜೀವನ ಕಳೆದುಕೊಳ್ಳುತ್ತಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಗಟಾರು ಸ್ವಚ್ಛತೆಗೆ ಕ್ರಮ ವಹಿಸಿ: ಮಳೆ ನೀರಿನಿಂದ ಅವಾಂತರ ಸೃಷ್ಟಿಯಾಗುವ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಮೂಲಕ ಚರಂಡಿ ಹಾಗೂ ಗಟಾರು ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು. ವಲಯಾಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ತೆರಳಿ ವಾಸ್ತವಾಂಶ ಅರಿಯಬೇಕು. ಕಚೇರಿಯಲ್ಲಿ ಕುಳಿತು ಕಡತಗಳಿಗೆ ಸಹಿ ಮಾಡುವುದಷ್ಟೇ ನಿಮ್ಮ ಕೆಲಸವಲ್ಲ. ವಲಯ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಅಧಿಕಾರಿಗಳಿಗೆ ಯಾವುದೇ ಭಯವಿಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅವೈಜ್ಞಾನಿಕ ಕಾಮಗಾರಿ: ಮಂಟೂರು ರಸ್ತೆಯಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದೆ. ಪೈಪ್ ಜೋಡಿಸಿ ನೀರು ಸರಾಗವಾಗಿ ಹರಿಯದಂತೆ ಮಣ್ಣು ಹಾಕಿರುವುದರಿಂದ ನೀರು ಮನೆಗಳಿಗೆ ನುಗ್ಗಿದೆ. ಈ ಕುರಿತು ಪಾಲಿಕೆ ಅಧಿಕಾರಿಗಳು ಪರಿಶೀಲನೆ ಮಾಡಿಲ್ಲ. ಕನಿಷ್ಠ ಪಕ್ಷ ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳೂ ಈ ಬಗ್ಗೆ ಕಾಳಜಿ ತೋರಿಲ್ಲ. ಘಟನೆ ನಡೆದಾಗ ಮಣ್ಣು ತೆರವುಗೊಳಿಸಲು ಪಾಲಿಕೆ ಜೆಸಿಬಿ ವ್ಯವಸ್ಥೆ ಕೂಡ ಮಾಡಿಲ್ಲ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಎಚ್ಚೆತ್ತುಕೊಳ್ಳಬೇಕು ಎಂದು ಸೂಚಿಸಿದರು.
ವಲಯವಾರು ಸಮೀಕ್ಷೆಗೆ ಸೂಚನೆ:ಪಾಲಿಕೆ ಆಯುಕ್ತ ಪ್ರಶಾಂತಕುಮಾರ ಮಿಶ್ರಾ ಮಾತನಾಡಿ, ಸಭೆಯ ಸೂಚನೆಗಳನ್ನು ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕು. ತಮ್ಮ ವಲಯ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಖುದ್ದಾಗಿ ಪರಿಶೀಲಿಸಿ ವರದಿ ನೀಡಬೇಕು. ಅಗತ್ಯ ಕಾಮಗಾರಿ ಇದ್ದರೆ ನನ್ನ ಗಮನಕ್ಕೆ ತರಬೇಕು. ಕಂಟ್ರೋಲ್ ರೂಂಗೆ ಬಂದ ದೂರುಗಳನ್ನು ಕೂಡಲೇ ಆಯಾ ವಲಯದ ಅಧಿಕಾರಿಗಳಿಗೆ ತಿಳಿಸಬೇಕು. ವಲಯವಾರು ಮಳೆ ನೀರಿನಿಂದ ಸಮಸ್ಯೆಯಾಗುವ ಪ್ರದೇಶಗಳ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ