ಒಂದೇ ಸೂರಿನಡಿ ಕ್ರೀಡಾ ಚೈತನ್ಯ!


Team Udayavani, Dec 3, 2019, 2:18 PM IST

huballi-tdy-1

ಹುಬ್ಬಳ್ಳಿ: ಕಬಡ್ಡಿ, ಕ್ರಿಕೆಟ್‌, ಬ್ಯಾಡ್ಮಿಂಟನ್‌, ಫ‌ುಟ್‌ಬಾಲ್‌, ಶೂಟಿಂಗ್‌ ಹೀಗೆ ವಿವಿಧ ಕ್ರೀಡೆಗಳಿಗೆ ಒಂದೇ ಸೂರಿನಡಿ ತರಬೇತಿ ನೀಡುವ ಉತ್ತರ ಕರ್ನಾಟಕದ ಮೊದಲ ಕ್ರೀಡಾ ಸಮುಚ್ಛಯವೊಂದು ಹುಬ್ಬಳ್ಳಿಯಲ್ಲಿ ತಲೆ ಎತ್ತಿದೆ. ಇಲ್ಲಿನ ಚೈತನ್ಯ ಸ್ಫೋರ್ಟ್ಸ್ ಫೌಂಡೇಶನ್‌ ಇಂತಹ ಸಾಹಸಕ್ಕೆ ಮುಂದಾಗಿದೆ.

ಹೊಸೂರುಉಣಕಲ್ಲ ಒಳರಸ್ತೆಯಲ್ಲಿ ನೂತನ ಕೋರ್ಟ್‌ ಸಂಕೀರ್ಣ ಪಕ್ಕದಲ್ಲಿಯಕಲ್ಲೂರು ಲೇಔಟ್‌ನಲ್ಲಿ ನೂತನ ಕ್ರೀಡಾಸಂಕೀರ್ಣ ನಿರ್ಮಾಣಗೊಳ್ಳುತ್ತಿದ್ದು, ಈಗಾಗಲೇ ಕ್ರಿಕೆಟ್‌ ತರಬೇತಿ ಆರಂಭಗೊಂಡಿದೆ. ಬೆಂಗಳೂರು ಬಿಟ್ಟರೆ ಇಂತಹ ಸೌಲಭ್ಯದ ಸಂಕೀರ್ಣ ಇದಾಗಿದೆ ಎಂಬುದು ಫೌಂಡೇಶನ್‌ನವರ ಅಭಿಪ್ರಾಯ.

32 ಗುಂಟೆಯಲ್ಲಿ ಸಮುತ್ಛಯ: ಕಲ್ಲೂರ ಲೇಔಟ್‌ನಲ್ಲಿ ಸುಮಾರು 32 ಗುಂಟೆ ಜಾಗದಲ್ಲಿ ಈ ಕ್ರೀಡಾ ಸಮುತ್ಛಯ ನಿರ್ಮಾಣಗೊಳ್ಳುತ್ತಿದೆ. ಕ್ರಿಕೆಟ್‌, ವಾಲಿಬಾಲ್‌, ಫುಟಬಾಲ್‌,ಹಾಕಿ, ಟೆನ್ನಿಸ್‌, ಬಾಕ್ಸ್‌ ಕ್ರಿಕೆಟ್‌, ಕಬಡ್ಡಿ, ಶೂಟಿಂಗ್‌, ಜಿಮ್‌, ಶಟಲ್‌ ಬ್ಯಾಡ್ಮಿಂಟನ್‌, ಟೇಬಲ್‌ ಟೆನ್ನಿಸ್‌, ಸಿಂಥೆಟಿಕ್‌ ಟ್ರ್ಯಾಕ್, ಖೋ ಖೋ, ಅಟ್ಯಾಪಟ್ಯಾ, ಯೋಗ, ಅಥ್ಲೆಟಿಕ್ಸ್‌ ಕ್ರೀಡೆಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ.

ಕೆಲವೊಂದು ಕ್ರೀಡೆಗಳಿಗೆ ಆಟ ಆಡಲು ಅವಕಾಶ ನೀಡಲಾಗುತ್ತದೆ. ಬೆಳಗ್ಗೆ 6 ಗಂಟೆಗೆ ಆರಂಭವಾಗುವ ತರಬೇತಿ ರಾತ್ರಿ 10 ಗಂಟೆವರೆಗೂ ನಡೆಯಲಿದೆ. ಪ್ರತಿ ಕ್ರೀಡೆಗೂ ಇಬ್ಬರು ನುರಿತ ತರಬೇತುದಾರರನ್ನು ನೇಮಿಸಲಾಗುತ್ತಿದ್ದು, ತರಬೇತಿ ಪಡೆಯುವವರಿಗೆ ಹೊಂದಿಕೆಯಾಗುವ ಸಮಯಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುತ್ತದೆ. ಕ್ರೀಡೆಗಳ ಕುರಿತಾಗಿ ಶಾಲಾಕಾಲೇಜುಗಳಿಗೆ ತೆರಳಿ ಜಾಗೃತಿ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಗಿದೆ.

ಖ್ಯಾತ ಕ್ರೀಡಾಪಟುಗಳಿಗೆ ಆಹ್ವಾನ:ಆಯಾ ಕ್ರೀಡೆಗಳ ಖ್ಯಾತನಾಮರನ್ನು ಆಹ್ವಾನಿಸಿ ಮಕ್ಕಳಿಗೆ ವಿವಿಧ ಕ್ರೀಡೆಗಳ ತರಬೇತಿ ಕೊಡಿಸಲು ಆದ್ಯತೆ ನೀಡಲಾಗುತ್ತದೆ. 15 ದಿನ ಇಲ್ಲವೇತಿಂಗಳಿಗೊಮ್ಮೆ ಖ್ಯಾತನಾಮರು ಆಗಮಿಸಿ ತರಬೇತಿ ನೀಡಲಿದ್ದಾರೆ.

ಮಹಿಳಾ ಹಾಕಿಫ‌ುಟ್‌ಬಾಲ್‌ ತಂಡ: ಚೈತನ್ಯ ನ್ಪೋರ್ಟ್ಸ್ ಅಕಾಡೆಮಿಯಿಂದ ಮಹಿಳಾ ಹಾಕಿ ಹಾಗೂ ಫುಟಬಾಲ್‌ತಂಡವನ್ನು ಸಜ್ಜುಗೊಳಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ರಾಜ್ಯ ಹಾಕಿ ತಂಡದ ಮಾಜಿ ನಾಯಕಿ ಕಾವೇರೆಮ್ಮಾ ನೀಲಗುಂದ ಅವರು ತರಬೇತಿ ನೀಡಲಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು,

ಅಂತಹವರಿಗೆ ಫೌಂಡೇಶನ್‌ನಿಂದಸೂಕ್ತ ತರಬೇತಿ ನೀಡಲಾಗುವುದು. ಜೊತೆಯಲ್ಲಿಯೇ ಅವರು, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಎಲ್ಲ ತರಬೇತಿ ನೀಡಲಾಗುವುದು. ರಾಜ್ಯ

ಹಾಗೂ ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಕ್ರೀಡಾಪಟುಗಳನ್ನು ಫೌಂಡೇಶನ್‌ನಿಂದ ಕಳುಹಿಸಲು ಯೋಜಿಸಲಾಗಿದೆ. ಈಗಾಗಲೇ ಕ್ರೀಡಾ ಸಮುಚ್ಛಯದಲ್ಲಿ ಹಾಕಿ, ಕ್ರಿಕೆಟ್‌, ಫ‌ುಟ್‌ಬಾಲ್‌ ಮೈದಾನಗಳು ಸಿದ್ಧಗೊಂಡಿವೆ. ಕಬಡ್ಡಿ,ಬ್ಯಾಡ್ಮಿಂಟನ್‌, ಶೂಟಿಂಗ್‌, ಜಿಮ್‌, ಟೇಬಲ್‌ ಟೆನ್ನಿಸ್‌ ಮೈದಾನಗಳ ಸಿದ್ಧತೆ ಸಾಗಿದೆ. ರಣಜಿ ಆಟಗಾರರಾದ ನೀತಿನ್‌ ಬಿಲ್ಲೆ, ಪವನ ದೇಶಪಾಂಡೆ ಸೇರಿದಂತೆ ಹಲವರು ಈಗಾಗಲೇ ಸಮುತ್ಛಯಕ್ಕೆ ಬರುತ್ತಿದ್ದಾರೆ. ಡಿ. 10ರಿಂದ ತರಬೇತಿ ಆರಂಭಗೊಳ್ಳುತ್ತಿದ್ದು, ಕ್ರಿಕೆಟ್‌, ಫುಟ್‌ ಬಾಲ್‌, ಹಾಕಿ ತರಬೇತಿ ನೀಡಲಾಗುತ್ತದೆ.

 

-ಬಸವರಾಜ ಹೂಗಾ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.