ಶ್ರೀಮನ್ಮಹಾಭಾರತ ಮಂಗಳ್ಳೋತ್ಸವಕ್ಕೆ ಚಾಲನೆ

•ನಾಲ್ಕು ವೇದಗಳ ಸಂಗಮದ ಸನ್ನಿಧಾನವೇ ಮಹಾಭಾರತ: ವಿಶ್ವಪ್ರಿಯತೀರ್ಥರು

Team Udayavani, May 23, 2019, 4:28 PM IST

hubali-tdy-2..

ಧಾರವಾಡ: ಕಂಠಪಲ್ಲಿ ಸಮೀರಾಚಾರ್ಯ ಅವರಿಂದ ನಾಲ್ಕು ವರ್ಷಗಳ ಪರ್ಯಂತ ನಡೆದ ಶ್ರೀಮನ್ಮಹಾಭಾರತ ಮಂಗಳ್ಳೋತ್ಸವಕ್ಕೆ ಉಡುಪಿ ಅದಮಾರು ಮಠದ ವಿಶ್ವಪ್ರಿಯತೀರ್ಥ ಸ್ವಾಮೀಜಿ ಚಾಲನೆ ನೀಡಿದರು.

ಧಾರವಾಡ: ನಾಲ್ಕು ವೇದಗಳ ಸಂಗಮದ ಸನ್ನಿಧಾನವೇ ಮಹಾಭಾರತ ಆಗಿದೆ ಎಂದು ಉಡುಪಿಯ ಅದಮಾರು ಮಠದ ವಿಶ್ವಪ್ರಿಯತೀರ್ಥ ಸ್ವಾಮೀಜಿ ಹೇಳಿದರು.

ನಗರದ ಕವಿಸಂನ ಪುಂಡರೀಕ್ಷಕ ಸಭಾಂಗಣದ ವ್ಯಾಸಪೀಠ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥ ಮೇ 22ರಿಂದ ಮೇ 26ರವರೆಗೆ ಹಮ್ಮಿಕೊಂಡ ಪಂಡಿತ ಕಂಠಪಲ್ಲಿ ಸಮೀರಾಚಾರ್ಯ ಅವರಿಂದ ನಾಲ್ಕು ವರ್ಷಗಳ ಪರ್ಯಂತ ನಡೆದ ಶ್ರೀಮನ್ಮಹಾಭಾರತ ಮಂಗಳ್ಳೋತ್ಸವಕ್ಕೆ ಚಾಲನೆ ನೀಡಿ ಅವರು ಆರ್ಶೀವಚನ ನೀಡಿದರು.

ಪ್ರತಿಯೊಬ್ಬರು ಎಲ್ಲ ವೇದಗಳನ್ನು ಅಧ್ಯಯನ ಮಾಡಲಾಗದು. ಇಂತಹ ಸಂದರ್ಭದಲ್ಲಿ ಮಹಾಭಾರತದ ಅಧ್ಯಯನದಿಂದ ವೇದಗಳ ಸನ್ನಿಧಾನ ಪ್ರಾಪ್ತಿ ಆಗುತ್ತದೆ. ಅದರಲ್ಲೂ ಇಡೀ ವಿಶ್ವಕ್ಕೆ ಕಣ್ಣಿನಂತೆ ಮಹಾಭಾರತ, ರಾಮಾಯಣ ಆಗಿದ್ದು, ಇವು ವಿಶ್ವಕ್ಕೆ ಶ್ರೇಷ್ಠ ಗ್ರಂಥಗಳಾಗಿವೆ ಎಂದರು.

ಭಾರತ ದೇಶ, ನಮ್ಮ ಸಂಸ್ಕೃತಿ ಆಚಾರ-ವಿಚಾರಗಳ ಬಗ್ಗೆ ಅಪಮಾನ, ಟೀಕಿಸುವ ಜನರಿಗೆ ತಕ್ಕ ಪಾಠ ಕಲಿಸುವ ಕೆಲಸ ಆಗಬೇಕಿದೆ. ಅದಕ್ಕಾಗಿ ಮಕ್ಕಳಿಗೆ ನಮ್ಮ ಸಂಸ್ಕೃತಿಯ ವಿಚಾರದ ಚಿಂತನೆಗಳ ಬೀಜ ಬಿತ್ತುವ ಕಾರ್ಯವಾಗಬೇಕು. ಯಾರೇ ತಪ್ಪು ಮಾಡಿದ್ದರೂ ಅದನ್ನು ನೇರವಾಗಿ ಹೇಳುವ, ಎದುರಿಸುವ ತಾಕತ್ತು ಕೊಡುವ ಶಕ್ತಿ ಮಹಾಭಾರತಕ್ಕಿದೆ. ಅದಕ್ಕಾಗಿ ಪ್ರತಿ ದಿನ ಅದರ ಒಂದು ಶ್ಲೋಕವನ್ನಾದರೂ ಮಾಡಬೇಕೆಂದು ಸಲಹೆ ನೀಡಿದರು.

ಮಹಾಭಾರತ-ರಾಮಾಯಣ ಗ್ರಂಥಗಳು ಇಡೀ ಜಗತ್ತಿಗೆ ಮಾರ್ಗದರ್ಶನ ಮಾಡಿವೆ. ಈ ಗ್ರಂಥಗಳನ್ನು ನಾವು ಪ್ರತಿನಿತ್ಯ ಪಠಣ ಮಾಡಬೇಕು. ಈ ಮಹಾನ್‌ ಗ್ರಂಥಗಳ ಪರಿಚಯ ಇಂದಿನ ಜನಾಂಗಕ್ಕೆ ಅವಶ್ಯವಿದೆ. ನಮ್ಮ ಸಂಸ್ಕತಿಯ ಹಿರಿಮೆ ನಮಗೆ ಗೊತ್ತೇ ಇಲ್ಲ. ಮಹಾಪುರುಷರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಬೆಂಗಳೂರಿನ ಜಯತೀರ್ಥ ವಿದ್ಯಾಪೀಠದ ಡಾ|ಸತ್ಯಧ್ಯಾನಾಚಾರ್ಯ ಕಟ್ಟಿ ಮಾತನಾಡಿ, ಮಕ್ಕಳು ಪೋಷಕರು ಮಾತು ಕೇಳುತ್ತಿಲ್ಲ. ಮನೆಯಲ್ಲಿ ಸಮ್ಮತಿಯ ಮದುವೆಗಳೇ ಆಗುತ್ತಿಲ್ಲ. ಆದ ಮದುವೆಗಳು ಮುರಿದು ಬೀಳುತ್ತಿವೆ. ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸಮಾಜದಲ್ಲಿ ಮೌಲ್ಯಗಳು ನಶಿಸಿ ಹೋಗುತ್ತಿವೆ. ಹೀಗಾಗಿ ಸಮಾಜದಲ್ಲಿ ಮತ್ತೆ ಮೌಲ್ಯಗಳ ಪುನರ್‌ ಸ್ಥಾಪಿಸಲು ಮಕ್ಕಳಿಗೆ ನಮ್ಮ ಸಂಸ್ಕೃತಿ ಪರಿಚಯಿಸುವ ಕೆಲಸ ಆಗಬೇಕಿದೆ ಎಂದರು.

ರಾಮಾಯಣ, ಮಹಾಭಾರತದಂತಹ ಶ್ರೇಷ್ಠ ಗ್ರಂಥಗಳನ್ನು ಬರೀ ಪತಿ-ಪತ್ನಿ, ಸಹೋದರರ ಜಗಳದ ಮನೋಭಾವಕ್ಕೆ ಹೋಲಿಸುತ್ತಿರುವುದು ವಿಷಾದನೀಯ. ಮೊಬೈಲ್, ಟಿವಿಗಳಿಂದ ಎಂದಿಗೂ ಮನಸ್ಸಿಗೆ ನೆಮ್ಮದಿ, ಸುಖ, ಶಾಂತಿ ಲಭಿಸಲಾರದು. ಬದಲಾಗಿ ಈ ಗ್ರಂಥಗಳಿಂದ ಮಾತ್ರವೇ ಸುಖ-ಶಾಂತಿ ಪಡೆಯಲು ಸಾಧ್ಯ. ಮಹಾಭಾರತ, ರಾಮಾಯಣದಂತಹ ಶ್ರೇಷ್ಠ ಗ್ರಂಥಗಳಿಂದ ಸಮಾಜ ದೂರವಾದಷ್ಟು ದುಃಖ, ಅಶಾಂತಿಗೆ ಸ್ವಾಗತ ಕೋರಿದಂತೆ ಎಂದರು.

ಪಂ|ಸಮೀರಾಚಾರ್ಯ ಕಂಠಪಲ್ಲಿ, ಡಾ|ಆರ್‌. ಜಿ. ಜೋಶಿ, ಎಸ್‌.ಎಂ.ಸರಾಫ್‌, ಪ್ರಕಾಶ ಬೇಗೂರ, ಕೃಷ್ಣಮೂರ್ತಿ, ಎಸ್‌.ಎನ್‌. ದೇಶಪಾಂಡೆ ಸೇರಿದಂತೆ ಹಲವರು ಇದ್ದರು. ತೇಜಸ್ವಿನಗರದ ತೇಜಸ್ವಿ ಮಹಿಳಾ ಮಂಡಳದವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಂಗಳ್ಳೋತ್ಸವ ಪ್ರಯುಕ್ತ ಮೇ 26 ರವರೆಗೆ ದಿನನಿತ್ಯ ವಿವಿಧ ಕಾರ್ಯಕ್ರಮ ಜರುಗಲಿವೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.