ಎಸ್ಸೆಸ್ಸೆಲ್ಸಿ: ಜಿಲ್ಲೆಯ ಉತ್ತಮ ಫಲಿತಾಂಶಕ್ಕೆ ಸಿದ್ಧತೆ ಕೈಗೊಳ್ಳಿ


Team Udayavani, Nov 21, 2017, 1:08 PM IST

h5-vinay.jpg

ಧಾರವಾಡ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆ ಕನಿಷ್ಠ 5ನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರು ಪೂರಕ ತಯಾರಿ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ನಗರದ ಶಿಕ್ಷಕಿಯರ ತರಬೇತಿ ಕೇಂದ್ರದಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿದ ಉರ್ದು ಮಾಧ್ಯಮದ ಸ್ಕೋರಿಂಗ್‌ ಪ್ಯಾಕೇಜ್‌ ಪುಸ್ತಕಗಳ ಬಿಡುಗಡೆ ಹಾಗೂ ಉರ್ದು ಪ್ರೌಢಶಾಲಾ ಸಹ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. 

ಶಿಕ್ಷಕರು ವಿದ್ಯಾರ್ಥಿಗಳಿಗೆ ವಿವಿಧ ಪರೀಕ್ಷೆ ನಡೆಸಿ ಉತ್ತಮ ಅಂಕ ಗಳಿಸುವ, ಉತ್ತೀರ್ಣ ಹಾಗೂ ಅನುತ್ತೀರ್ಣರಾಗುವವರ ಗುಂಪು  ಮಾಡಬೇಕು. ಅನುತ್ತೀರ್ಣ ಹೊಂದಿದ ವಿದ್ಯಾರ್ಥಿಗಳ ಸಮಸ್ಯೆ ತಿಳಿದು ಅವರು ಉತ್ತೀರ್ಣರಾಗುವಂತೆ ತಯಾರಿ ಮಾಡಬೇಕು ಎಂದರು. 

ಹಿಂದಿನ ವರ್ಷ ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಭಾಷೆ ಪರೀಕ್ಷೆಯಲ್ಲೇ ಅನುತ್ತೀರ್ಣರಾದ ಕಾರಣ ರ್‍ಯಾಂಕಿಂಗ್‌ನಲ್ಲಿ ಕುಸಿತಗೊಂಡಿದೆ. ಇದಕ್ಕೆ ಈ ವಿಷಯದ ಶಿಕ್ಷಕರೇ ನೇರ ಹೊಣೆಗಾರರು. ಶಿಕ್ಷಕರು ಕನ್ನಡ ಹಾಗೂ ಇಂಗ್ಲಿಷ್‌ ಭಾಷೆಯನ್ನು ಉರ್ದು ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ  ಕಲಿಸಬೇಕು.

ಉರ್ದು ವಿದ್ಯಾರ್ಥಿಗಳು ಖುರಾನ್‌ ಓದಿದರೆ ಸಾಲದು. ಎಸ್ಸೆಸ್ಸೆಲ್ಸಿನಂತರ ಉನ್ನತ ಶಿಕ್ಷಣದತ್ತ ಗಮನ ಹರಿಸಬೇಕು ಎಂದರು. ವೈಶುದೀಪ ಪ್ರತಿಷ್ಠಾನದ ಕಾರ್ಯದರ್ಶಿ ಶಿವಲೀಲಾ ಕುಲಕರ್ಣಿ ಮಾತನಾಡಿ, ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿವಿಧ ಶಿಕ್ಷಕರಿಂದ ಪುಸ್ತಕ ತಯಾರಿಸಿ ಸಂಸ್ಥೆಯಿಂದ ನೀಡಲಾಗುತ್ತಿದೆ. 

ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಶೇ.10ರ ವರೆಗೆ ಉನ್ನತಿಯಾಗಬೇಕು. ಈ ನಿಟ್ಟಿನಲ್ಲಿ ಮಕ್ಕಳ ಮತ್ತು ಪಾಲಕರ ಸಭೆ ನಡೆಸಿ, ಅವರ ಸಲಹೆ-ಸೂಚನೆ ಕಂಡುಕೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು. ಶ್ರೀಶೈಲ್‌ ಕರೀಕಟ್ಟಿ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಫೋನ್‌ ಇನ್‌ ಕಾರ್ಯಕ್ರಮ ಪೂರಕವಾಗಿದೆ. 

ನ. 22ರಂದು ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಫೋನ್‌ ಇನ್‌ ನಡೆಯಲಿದ್ದು, ಟೋಲ್ ಫ್ರೀ ನಂ.1800-4255540 ಕರೆ ಮಾಡಿ  ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದರು.  ಶಹರ ಬಿಇಒ ಎಸ್‌.ಎಂ. ಹುಡೇದಮನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರಿ

ಉಪನಿರ್ದೇಶಕ ಎಂ.ಎಲ್ ಹಂಚಾಟೆ, ಪ್ರೇರಣಾ ಸಮಿತಿ ಸದಸ್ಯ ವಿನಾಯಕ ಜೋಶಿ, ಶಶಿಕಲಾ ಬಸವರೆಡ್ಡಿ, ಎ.ಕೆ. ಮುಜಾವರ, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೇರಣಾ ಸಮಿತಿ ಸದಸ್ಯರು, ಉರ್ದು ಶಿಕ್ಷಕರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.