ಕ್ರೀಡಾಂಗಣ ಹದಗೆಡಿಸಿದ ಸ್ವಚ್ಛಮೇವ ಜಯತೆ!

•20ಕ್ಕೂ ಅಧಿಕ ವಾಹನ ಓಡಾಡಿ ರನ್ನಿಂಗ್‌ ಟ್ರ್ಯಾಕ್‌ಗೆ ಹಾನಿ•ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

Team Udayavani, Sep 11, 2019, 10:11 AM IST

huballi-tdy-3

ಹುಬ್ಬಳ್ಳಿ: ‘ಸ್ವಚ್ಛಮೇವ ಜಯತೆ’ ಯೋಜನೆ ಹೆಸರಲ್ಲಿ ಇದ್ದ ಮೈದಾನದ ಅಂದ ಕೆಡಿಸಲಾಗಿದೆ. ಅಷ್ಟು ಇಷ್ಟು ಬಳಕೆಯಾಗುತ್ತಿದ್ದ ಮೈದಾನ ಇದೀಗ ವಾಹನಗಳಿಗೆ ಕೆಲ ಬಿಡಿಭಾಗ ಜೋಡಣೆ ಹಾಗೂ ದುರಸ್ತಿಯ ವರ್ಕ್‌ಶಾಪ್‌-ಗ್ಯಾರೇಜ್‌ ರೂಪ ತಾಳಿದೆ. ಮೈದಾನ ಸ್ವಚ್ಛತೆ ಜವಾಬ್ದಾರಿಯ ಅಧಿಕಾರಿಗಳು ಮಾತ್ರ ನಮಗೇನು ಸಂಬಂಧವಿಲ್ಲ ಎಂಬಂತೆ ಮೌನಕ್ಕೆ ಜಾರಿದಂತಿದೆ.

-ಇದು ನಗರದ ಹೃದಯ ಭಾಗದಲ್ಲಿರುವ, ಸ್ಮಾರ್ಟ್‌ಸಿಟಿ ಯೋಜನೆಯಡಿ ಆಧುನಿಕ ಸೌಲಭ್ಯಗಳ ಸ್ಪರ್ಶ ಪಡೆಯಬೇಕಾಗಿರುವ ನೆಹರು ಮೈದಾನದ ಕಥೆ. ಕೇಂದ್ರ ಸರಕಾರದ ಸ್ವಚ್ಛ ಭಾರತ ಯೋಜನೆಯ ಮುಂದುವರಿದ ಭಾಗವಾಗಿ ಸ್ವಚ್ಛಮೇವ ಜಯತೆ ಯೋಜನೆ ಗಾಂಧಿ ಜಯಂತಿ ದಿನವಾದ ಅ. 2ರಿಂದ ಚಾಲನೆ ಪಡೆಯಲಿದೆ. ಯೋಜನೆ ಪ್ರಚಾರ ವಾಹನಗಳನ್ನು ಸಜ್ಜುಗೊಳಿಸಲು ನೆಹರು ಮೈದಾನವನ್ನು ವರ್ಕ್‌ಶಾಪ್‌ ಮಾದರಿಯಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಹಲವು ವರ್ಷಗಳಿಂದ ಅಭಿವೃದ್ಧಿ ಹೊಂದುತ್ತದೆ ಎಂದು, ಅಭಿವೃದ್ಧಿ ಹೊಂದಿತೆಂದು, ಇದೀಗ ಸ್ಮಾರ್ಟ್‌ಸಿಟಿ ಯೋಜನೆಯಡಿ ಆಧುನಿಕ ರೂಪ ತಾಳಲಿದೆ ಎಂದು ಹೇಳಲ್ಪಡುವ, ಕ್ರೀಡೆ, ರಾಜಕೀಯ, ಧಾರ್ಮಿಕ, ಸಾಮಾಜಿಕ ಇನ್ನಿತರ ಸಮಾವೇಶಗಳಿಗೆ, ಪಟಾಕಿ ಮಾರಾಟಕ್ಕೂ ಬಳಕೆಯಾಗುತ್ತಿರುವ ನೆಹರು ಮೈದಾನ ಹಲವು ಸೌಲಭ್ಯ ಹಾಗೂ ನಿರ್ವಹಣೆ ಕೊರತೆಯಿಂದ ನರಳುತ್ತಿದೆ. ಇದು ಸಾಲದು ಎನ್ನುವಂತೆ ಸ್ವಚ್ಛಮೇವ ಜಯತೆ ಯೋಜನೆ ಹೆಸರಲ್ಲಿ ಇದ್ದ ಸ್ಥಿತಿಯನ್ನು ಹದಗೆಡುವ ಕಾರ್ಯ ನಿರ್ವಿಘ್ನವಾಗಿ ಸಾಗತೊಡಗಿದೆ.

ಕ್ರಿಕೆಟ್, ವಾಲಿಬಾಲ್, ರನ್ನಿಂಗ್‌ ಇನ್ನಿತರ ಕ್ರೀಡೆಗಳಿಗಾಗಿ ಅನೇಕರು ನೆಹರು ಮೈದಾನಕ್ಕೆ ನಿತ್ಯವೂ ಆಗಮಿಸುತ್ತಾರೆ. ವಿವಿಧ ಶಾಲಾ-ಕಾಲೇಜು ಹಾಗೂ ಸಂಘ-ಸಂಸ್ಥೆಗಳು ಕ್ರೀಡಾಕೂಟ ಆಯೋಜನೆಗೆ ಇದನ್ನೇ ಅವಲಂಬಿಸಿವೆ. ಬೆಳಗ್ಗೆ, ಸಂಜೆ ವೇಳೆ ವಾಯುವಿಹಾರಕ್ಕೆ ಇದೇ ಮೈದಾನ ಆಸರೆಯಾಗಿದೆ. ಆದರೆ, ಮೈದಾನದ ಸದ್ಯದ ಸ್ಥಿತಿಯಿಂದ ಕ್ರೀಡೆ, ವಾಯುವಿಹಾರಕ್ಕೂ ಅವಕಾಶ ಇಲ್ಲದ ಸ್ಥಿತಿ ನಿರ್ಮಾಣಗೊಂಡಿದೆ.

ವಾಹನಗಳಿಗೆ ಬ್ಯಾನರ್‌ ಕಟ್ಟಲು ಬಳಕೆ: ‘ಸ್ವಚ್ಛಮೇವ ಜಯತೆ’ ಯೋಜನೆ ಜಾಗೃತಿಗಾಗಿ 22 ಮಿನಿ ಲಾರಿಗಳನ್ನು ಪ್ರಚಾರಕ್ಕಾಗಿ ಬಳಸುವ ಉದ್ದೇಶದಿಂದ ನಾಲ್ಕೈದು ದಿನಗಳಿಂದ ವಾಹನಗಳಿಗೆ ಪ್ರಚಾರ ಸಾಮಗ್ರಿ ಅಳವಡಿಕೆಗಾಗಿ ನೆಹರು ಮೈದಾನ ಬಳಸಿಕೊಳ್ಳಲಾಗುತ್ತಿದೆ. ಮಿನಿ ಲಾರಿಗಳ ಓಡಾಟದಿಂದ ರನ್ನಿಂಗ್‌ ಟ್ರ್ಯಾಕ್‌ ಸೇರಿದಂತೆ ಮೈದಾನ ಸಂಪೂರ್ಣ ಹಾಳಾಗಿದೆ.

‘ಸ್ವಚ್ಛಮೇವ ಜಯತೆ’ ಜಾಗೃತಿಗಾಗಿ ಪ್ರಚಾರ ವಾಹನಗಳ ಬಾಡಿಗೆ ಪಡೆಯುವ ನಿಟ್ಟಿನಲ್ಲಿ ಖಾಸಗಿಯವರಿಗೆ ಇದರ ಗುತ್ತಿಗೆ ನೀಡಲಾಗಿದೆ. ಖಾಲಿಯಾಗಿರುವ ಜಾಗದಲ್ಲಿ ಪ್ರಚಾರ ವಾಹನಗಳ ತಯಾರಿ ಕೈಗೊಳ್ಳಬೇಕಾಗಿತ್ತಾದರೂ, ಅದರ ಬದಲು ನೆಹರು ಮೈದಾನವನ್ನೇ ಬಳಸಿಕೊಳ್ಳಲಾಗುತ್ತಿದೆ.

ವಿವಿಧ ಸೌಲಭ್ಯ ಇಲ್ಲದಿರುವುದು, ನಿರ್ವಹಣೆ ಕೊರತೆಯಿಂದ ನೈಹರು ಮೈದಾನವನ್ನು ಸುತ್ತಲು ಗೋಡೆ ಕಟ್ಟಿದ ಒಂದು ಬಯಲು ಜಾಗ ಎಂದು ಕರೆಯಬಹುದೆ ವಿನಃ ಅದನ್ನು ಕ್ರೀಡಾ ಮೈದಾನವೆಂದು ಭಾವಿಸಿಕೊಳ್ಳಬೇಕಾದ ಸ್ಥಿತಿಯಲ್ಲಿದೆ. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ರಾಡಿಮಯವಾಗಿರುವ ಮೈದಾನ ಇದೀಗ ವಾಹನಗಳ ಓಡಾಟದಿಂದ ಇನ್ನಷ್ಟು ಹದಗೆಟ್ಟಿದೆ.

 

ನಿತ್ಯ ಇಲ್ಲಿಗೆ ಕ್ರಿಕೆಟ್ ಆಟವಾಡಲು ಬರುತ್ತಿದ್ದೇವೆ. ನಾಲ್ಕೈದು ದಿನದಿಂದ 20ಕ್ಕೂ ಹೆಚ್ಚು ವಾಹನಗಳು ಮೈದಾನದಲ್ಲೆಲ್ಲ ತಿರುಗಾಡುತ್ತಿವೆ. ಮೈದಾನ ಹಾಳು ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಿ. •ಸಲೀಂ, ಕ್ರೀಡಾಪಟು ಬೆಳಗ್ಗೆ ವಾಯುವಿಹಾರಕ್ಕೆ ಅನುಕೂಲವಾಗಿರುವ ಮೈದಾನವನ್ನು ಈ ರೀತಿ ಹಾಳು ಮಾಡಲು ಇವರಿಗೆ ಯಾರು ಪರವಾನಗಿ ಕೊಟ್ಟಿದ್ದಾರೆ. ಮೊದಲೇ ಮಳೆಯಾಗಿ ಹಸಿಯಾಗಿರುವ ಮೈದಾನದಲ್ಲಿ ಲಾರಿಗಳು ಓಡಾಡಿದರೆ ಹಾಳಾಗುತ್ತದೆ ಎಂಬ ಜ್ಞಾನವೂ ಅಧಿಕಾರಿಗಳಿಗಿಲ್ಲವೇ? •ಮಲ್ಲಿಕಾರ್ಜುನ ಬಸಾಪುರ, ವಾಯುವಿಹಾರಿ

ನೆಹರು ಮೈದಾನ ಸದ್ಯದ ಸ್ಥಿತಿ ಕುರಿತು ಅಧಿಕಾರಿಗಳನ್ನು ವಿಚಾರಿಸಿದ್ದೇನೆ. ಸರ್ಕಾರಿ ಯೋಜನೆ ಹಿನ್ನೆಲೆಯಲ್ಲಿ ಖಾಸಗಿ ವ್ಯಕ್ತಿಗಳ ಬಳಕೆಗೆ ಪಾಲಿಕೆಯ ಪಿಆರ್‌ಒ ಕಚೇರಿಯಿಂದ ಪರವಾನಗಿ ನೀಡಲಾಗಿದೆ. ಮೈದಾನ ಹಾಳಾಗಿದ್ದರೆ ಅನುಮತಿ ಪಡೆದ ವ್ಯಕ್ತಿಯಿಂದಲೇ ಅದನ್ನು ಸರಿಪಡಿಸಲು ಆದೇಶಿಸಲಾಗುವುದು. •ಸುರೇಶ ಇಟ್ನಾಳ, ಪಾಲಿಕೆ ಆಯುಕ್ತ

 

•ಸೋಮಶೇಖರ ಹತ್ತಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.