ಕೊಪ್ಪಳದಲ್ಲಿ ಟೂರಿಸಂ ಅಧ್ಯಯನ ಸಂಸ್ಥೆ  ಆರಂಭಿಸಿ


Team Udayavani, Aug 4, 2018, 5:18 PM IST

4-agust-20.jpg

ಕೊಪ್ಪಳ: ನೂರಾರು ಪ್ರವಾಸಿ ತಾಣ, ಐತಿಹಾಸಿಕ, ಪೌರಾಣಿಕ ಸ್ಥಳಗಳನ್ನು ಹೊಂದಿರುವ ಕೊಪ್ಪಳ ಜಿಲ್ಲೆಯು ಎಲ್ಲ ದೃಷ್ಟಿಯಿಂದ ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ ಕೊಪ್ಪಳ ನಗರದಲ್ಲಿ ಭಾರತೀಯ ಪ್ರವಾಸೋದ್ಯಮ ಮತ್ತು ಪ್ರವಾಸಿ ಅಧ್ಯಯನ ಸಂಸ್ಥೆ ಆರಂಭಿಸುವಂತೆ ಕೇಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಕೆ.ಜೆ. ಅಲ್ಫೋನ್ಸ್‌ ಅವರಿಗೆ ಸಂಸದ ಸಂಗಣ್ಣ ಕರಡಿ ಅವರು ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಮನವಿಪತ್ರ ಸಲ್ಲಿರುವ ಸಂಸದರು, ರಾಮಾಯಣ ಕಾಲದಲ್ಲಿ ಹನುಮಂತ ಜನಿಸಿದ ಎನ್ನಲಾದ ಅಂಜನಾದ್ರಿ ಪರ್ವತ, ವಿಜಯನಗರ ಅರಸರ ಕಾಲದ ಆನೆಗೊಂದಿ, ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ದೇಶದ 27 ಐತಿಹಾಸಿಕ ಸ್ಥಳಗಳು ಸೇರಿದ್ದು, ಆ ಪೈಕಿ ಕರ್ನಾಟಕದ ಹಂಪಿಯೂ ಸಹ ಪಕ್ಕದಲ್ಲೇ ಇದೆ. ಪಕ್ಕದ ಐಹೊಳೆ, ಬಾದಾಮಿ, ಪಟ್ಟದಕಲ್ಲು, ತುಂಗಭದ್ರಾ ಜಲಾಶಯ, ಪೌರಾಣಿಕ ಪ್ರಸಿದ್ಧ ಹುಲಿಗೆಮ್ಮದೇವಿ ದೇವಸ್ಥಾನ, ಇಟಗಿ ಭೀಮಾಂಬಿಕಾ ದೇವಾಲಯ, ಕನಕಗಿರಿಯ ಕನಕಾಚಲಪತಿ ದೇವಸ್ಥಾನ, ವಾಲಿ ಪರ್ವತ, ಶಬರಿ ನಾಡು, ಪಂಪಾ ಸರೋವರ ಸೇರಿದಂತೆ ನೂರಾರು ಐತಿಹಾಸಿಕ, ಪೌರಾಣಿಕ ಪ್ರಸಿದ್ಧವಾದ ಪ್ರವಾಸಿ ತಾಣಗಳು ಜಿಲ್ಲೆಯ ಸುತ್ತಮುತ್ತಲೂ ಇವೆ.

ಈ ಸ್ಥಳಗಳಿಗೆ ಮಹತ್ವ ಬರುವ ಉದ್ದೇಶದಿಂದ ಕೊಪ್ಪಳ ನಗರದಲ್ಲಿ ಕೇಂದ್ರ ಸರ್ಕಾರದಿಂದ ಪ್ರವಾಸೋದ್ಯಮ  ಅಧ್ಯಯನ ಸಂಸ್ಥೆ ಆರಂಭಿಸಬೇಕು. ಇದರಿಂದ ಇಲ್ಲಿ ಪ್ರವಾಸೋದ್ಯಮ ಇನ್ನೂ ಬೆಳೆಯುತ್ತದೆ. ಅಲ್ಲದೆ ಪ್ರವಾಸೋದ್ಯಮ ಕೋರ್ಸ್‌ ಕಲಿಯುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ನೌಕರಿ, ತರಬೇತಿ ಸಿಗುತ್ತದೆ ಎಂದು ಮನವಿ ಮಾಡಿದ್ದಾರೆ.

ಕೊಪ್ಪಳ, ಹೊಸಪೇಟೆ, ಹಂಪೆ ಸೇರಿದಂತೆ ಸುತ್ತಮುತ್ತಲಿನ ಸ್ಥಳಗಳ ಬಗ್ಗೆ ತಿಳಿಯಲು ಹಾಗೂ ಅಧ್ಯಯನ ಮಾಡಲು ಈ ಭಾಗದಲ್ಲಿ ಪ್ರವಾಸೋದ್ಯಮ ಅಧ್ಯಯನ ಸಂಸ್ಥೆಗಳಿಲ್ಲ. ನಮ್ಮ ಭಾಗದ ಐತಿಹಾಸಿಕ ಸ್ಥಳಗಳಿಗೆ ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇದನ್ನು ಸರಿಯಾಗಿ ನಿರ್ವಹಣೆ ಮಾಡುವ ದೃಷ್ಟಿಯಿಂದ ನಮ್ಮ ಭಾಗದಲ್ಲಿ ಯಾವುದೇ ಟೂರಿಸಂ ಮ್ಯಾನೆಜ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ ಇಲ್ಲ. ಕೇಂದ್ರ ಸರ್ಕಾರ ಈ ಎಲ್ಲಾ ಅಂಶಗಳನ್ನು ಅರಿತು ಕೊಪ್ಪಳದಲ್ಲಿ ಮ್ಯಾನೆಜ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ ಆರಂಭಿಸಿದರೆ ನಮ್ಮ ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಿದಂತಾಗುತ್ತದೆ. ಹೀಗಾಗಿ ಕೂಡಲೇ ಸಂಸ್ಥೆ ಆರಂಭಿಸಲು ಮುಂದಾಗಬೇಕೆಂದು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿರುವ ಕೇಂದ್ರ ಕೇಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಕೆ.ಜೆ. ಅಲ್ಫೋನ್ಸ್‌ ಅವರು, ಈ ಕುರಿತು ಸಾಧಕ, ಬಾಧಕ ಪರಿಶೀಲಿಸಿ ಶೀಘ್ರದಲ್ಲೇ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.