ರೋಟಾ ವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ
Team Udayavani, Aug 30, 2019, 9:56 AM IST
ಹುಬ್ಬಳ್ಳಿ: ರೋಟಾ ವೈರಸ್ ಲಸಿಕೆ ಅಭಿಯಾನಕ್ಕೆ ರಾಜ್ಯ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಚಾಲನೆ ನೀಡಿದರು.
ಹುಬ್ಬಳ್ಳಿ: ಚಿಟಗುಪ್ಪಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರೋಟಾ ವೈರಸ್ ಲಸಿಕೆ ಅಭಿಯಾನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಚಾಲನೆ ನೀಡಿದರು.
ನಂತರ ಮಾತನಾಡಿ, ರಾಜ್ಯದ ಸಾರ್ವತ್ರಿಕ ಲಸಿಕೆಯಂತೆ ರೋಟಾ ವೈರಸ್ ಒಂದು ಲಸಿಕೆಯಾಗಿದ್ದು, ಅತಿಸಾರದಿಂದ ಶಿಶುಗಳು ಸಾವನ್ನಪ್ಪುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಈ ಲಸಿಕೆ ಹಾಕಲಾಗುತ್ತಿದೆ. 6, 10 ಹಾಗೂ 14 ವಾರಗಳ ಮಕ್ಕಳಿಗೆ ಈ ಲಸಿಕೆ ಹಾಕುತ್ತಿದ್ದು, ಪಾಲಕರು ಯಾವುದೇ ಗೊಂದಲಕ್ಕೆ ಒಳಗಾಗದೆ ವೈದ್ಯರ ಸಲಹೆ ಪಡೆದು ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಸಮೀಕ್ಷೆ ಪ್ರಕಾರ ಶೇ.8-9 ಮಕ್ಕಳು ಅತಿಸಾರದಿಂದ ಮೃತಪಡುತ್ತಿದ್ದು, ಶೇ. 40 ಮಕ್ಕಳು ಈ ಬ್ಯಾಕ್ಟೀರಿಯಾದಿಂದ ನರಳುತ್ತಿದ್ದಾರೆ. ಈ ಲಸಿಕೆ ಕುರಿತು ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಇಲಾಖೆಯಿಂದ ಆಗಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಾಗೃತರಾಗಬೇಕು ಎಂದರು.
ಜಿಲ್ಲಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ತಹಶೀಲ್ದಾರ್ ಶಶಿಧರ ಮಾಡ್ಯಾಳ, ಜಿಲ್ಲಾ ಆರೋಗ್ಯಾಧಿಕಾರಿ ಯಶವಂತ, ಪಾಲಿಕೆ ಆರೋಗ್ಯಾಧಿಕಾರಿ ಡಾ| ಪ್ರಭು ಬಿರಾದಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು