ಸಸಿ ನೆಡುವ ಕಾರ್ಯಕ್ಕೆ ಚಾಲನೆ
Team Udayavani, Jul 15, 2019, 1:03 PM IST
ಧಾರವಾಡ: ಹಸಿರು ಸಿರಿ ನಗರದ ಉದ್ಯಾನವವನದ ಜಾಗೆಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ನಟ ಸುರೇಶ ಹೆಬ್ಳೀಕರ್ ಉದ್ಘಾಟಿಸಿದರು.
ಧಾರವಾಡ: ನಗರದಲ್ಲಿ ಹಿಂದೆ ಸಾವಿರ ಕೆರೆಗಳಿದ್ದವು ಈಗ ಎಲ್ಲಾ ಗತಿಸಿ ಹೋಗಿ ಬೆರಳೆಣಿಕೆಯಷ್ಟೆ ಉಳಿದಿವೆ. ಮನೆಯ ಮುಂದಿನ ಮರದ ಜಾಗವನ್ನು ವಾಹನಗಳು ಅತಿಕ್ರಮಿಸಿವೆ. ಇದು ಹೀಗೆ ಮುಂದುವರಿದರೆ ಮುಂದಿನ ಪೀಳಿಗೆಗೆ ಚಿತ್ರದ ಮೂಲಕ ಗಿಡಮರಗಳನ್ನು ತೋರಿಸುವ ಸಂದರ್ಭ ಬರಲಿದೆ ಎಂದು ಪರಿಸರವಾದಿ, ನಟ ಸುರೇಶ ಹೆಬ್ಳೀಕರ ಹೇಳಿದರು.
ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ, ಏಕಸ್ ಪ್ರತಿಷ್ಠಾನ, ಹು-ಧಾ ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಹಸಿರು ಸಿರಿ ನಗರ ಧಾರವಾಡ ನಿವಾಸಿಗಳ ಸಂಘದಿಂದ ರವಿವಾರ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನೀರು, ಮಣ್ಣು, ಗಾಳಿ ಹೀಗೆ ಮಾನವನ ಬದುಕಿಗೆ ಪ್ರಮುಖವಾದ ಸಂಪತ್ತನ್ನು ನಾಶ ಮಾಡುತ್ತಿದ್ದೇವೆ. ಹವಾಮಾನ ವೈಪರಿತ್ಯ ಉಂಟಾಗಿ ಪರಿಸರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದರು.
ದೇಶದ ಆರ್ಥಿಕ ಅಭಿವೃದ್ಧಿಗೆ ಅನುಕೂಲವಾಗುವ ಕೃಷಿ, ಹೈನುಗಾರಿಕೆ, ತೋಟಗಾರಿಕೆಯನ್ನು ಮರೆಯುತ್ತಿದ್ದು, ಅನ್ಯದೇಶಿಯ ವ್ಯವಸ್ಥೆಗೆ ಮಾರು ಹೋಗುತ್ತಿದ್ದೇವೆ. ನಮ್ಮಲ್ಲಿ ಬೆಳೆಯುವ ಬೆಳೆಗಳನ್ನು ಬೇರೆ ದೇಶಕ್ಕೆ ರಫ್ತು ಮಾಡುತ್ತಿದ್ದ ನಾವೇ ಆಮದು ಮಾಡಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಉದ್ಯಾನವನಗಳು ಮಕ್ಕಳಿಗೆ ಹಾಗೂ ಸಮುದಾಯ ಜನತೆಗೆ ಉಪಯುಕ್ತವಾಗಿದ್ದು ಇದರ ಸದುಪಯೋಗ ಪಡೆಯುವುದಲ್ಲದೆ ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಮಾಜಿ ಮಹಾಪೌರ ಪೂರ್ಣಾ ಪಾಟೀಲ ಮಾತನಾಡಿ, ಪರಿಸರ ನಮ್ಮ ಸಂಪತ್ತಾಗಿದ್ದು, ಅದನ್ನು ಉಳಿಸಿ-ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ. ಬಡಾವಣೆಯಲ್ಲಿ ನಿರ್ಮಿಸಿರುವ ಉದ್ಯಾನವನ್ನು ಅಚ್ಚುಕಟ್ಟಾಗಿ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕಾರ್ಯ ಎಂದರು.
ರಾಮಜೀ ರಾಘವನ್ ಮಾತನಾಡಿದರು.ಪ್ರತಿಷ್ಠಾನದ ಪ್ರಾದೇಶಿಕ ಮುಖ್ಯಸ್ಥ ಡಾ|ಎಂ.ಪಿ. ಬಬಿತಾ, ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪಾಟೀಲ, ಸುಧಿಧೀರ ಪಾಟೀಲ, ಬಾಲಾಜಿ ನಾಡಕರ್ಣಿ,ಅರವಿಂದ ಜಮಖಂಡಿ, ಶಿವಾನಂದ ಚಲವಾದಿ ಇನ್ನಿತರರಿದ್ದರು.
ಇದೇ ಸಂದರ್ಭದಲ್ಲಿ ಹಸಿರು ಸಿರಿ ನಗರದ ನಿವಾಸಿಗಳು ಭಾಗವಹಿಸಿದ ಎಲ್ಲ ಮಕ್ಕಳಿಗೆ ನೋಟ್ಬುಕ್-ಪೆನ್ ವಿತರಿಸಿದರು. ಶಿವಾನಂದ ಚಲವಾದಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್