ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನ


Team Udayavani, Nov 15, 2019, 11:13 AM IST

huballi-tdy-3

ಧಾರವಾಡ: ಕರ್ನಾಟಕ ವ್ಯಂಗ್ಯಚಿತ್ರ ಸಾಹಿತ್ಯ ಮಾಧ್ಯಮ ಸಂಸ್ಥೆಯ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ನಾಡು, ನುಡಿ, ಭಾಷೆ ಆಧಾರಿತ ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನವನ್ನು ನಗರದ ಸರಕಾರಿ ಆರ್ಟ್‌ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮಾತನಾಡಿ, ವ್ಯಂಗ್ಯಚಿತ್ರಗಳು ಕೆಲವೇ ಗೆರೆಗಳ ಮೂಲಕ ಸಮಾಜದ ಅಂಕುಡೊಂಕನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಹಿರಿಯ ವ್ಯಂಗ್ಯಚಿತ್ರಕಾರ ಮೇಗರವಳ್ಳಿ ಸುಬ್ರಹ್ಮಣ್ಯ ಮಾತನಾಡಿ, ಈ ಸಂಸ್ಥೆಯಿಂದ ರಾಜ್ಯದ ಎಲ್ಲೆಡೆಯೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎಂದರು. ಸರಕಾರಿ ಕಲಾ ವಿದ್ಯಾಲಯದ ಮುಖ್ಯಸ್ಥ ಬಸವರಾಜ ಕುರಿ ಮಾತನಾಡಿ, ಎಲ್ಲ ಕಲೆಗಳ ಪ್ರಕಾರವನ್ನು ಇಂದು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷ ಪ್ರಶಾಂತ ನಾಯಕ ಮಾತನಾಡಿ, ಪ್ರತಿವರ್ಷ ಧಾರವಾಡ ವ್ಯಂಗ್ಯಚಿತ್ರ ಹಬ್ಬ ಆಚರಿಸಲಾಗುವುದು. ಈ ಸಂಸ್ಥೆಯಲ್ಲಿ ಸಾಹಿತ್ಯ ಕಲೆಗೂ ಅವಕಾಶ ನೀಡಲಾಗುವುದು ಎಂದರು.

ಅಶೋಕ ಜೋಶಿ ಅಧ್ಯಕ್ಷತೆ ವಹಿಸಿದ್ದರು. ವ್ಯಂಗ್ಯಚಿತ್ರಕಾರರಾದ ಸುಬ್ರಹ್ಮಣ್ಯ ಎಂ.ಎನ್‌., ಅಶೋಕ ಜೋಶಿ, ಪ್ರಶಾಂತ ಭಾರತ, ಶರಣು ಚಟ್ಟಿ, ರಂಗನಾಥ ಸಿದ್ಧಾಪುರ, ಆರ್‌.ಜಿ. ಕುಲಕರ್ಣಿ, ವಿಜಯಾನಂದ ಕಾಲವಾಡ, ಮಧುಕರ ಯಕ್ಕೇರಿ, ಕೆ.ಆರ್‌. ಸ್ವಾಮಿ, ನಿರ್ನಳ್ಳಿ ಗಣಪತಿ, ಗುಜ್ಜಾರಪ್ಪ ಬಿ.ಜಿ., ಬಿ.ವಿ. ಪಾಂಡುರಂಗರಾವ್‌, ಜೀವನ ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ, ವಿಶ್ವ ವಿನ್ಯಾಸ, ಗೊರವರ ಯಲ್ಲಪ್ಪ ಪಾಲ್ಗೊಂಡಿದ್ದರು. ಶ್ರೀನಿವಾಸ ಹುದ್ದಾರ ನಿರೂಪಿಸಿದರು. ವಿಜಯ ಇನಾಮದಾರ ವಂದಿಸಿದರು.

ರಾಜ್ಯದ 50 ವ್ಯಂಗ್ಯಚಿತ್ರಕಾರರು ಪ್ರದರ್ಶನದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ದ.ರಾ. ಬೇಂದ್ರೆ, ಆರ್‌.ಕೆ. ಲಕ್ಷ್ಮಣ, ಕಣಿ, ವಿಶ್ವೇಶ್ವರಯ್ಯ, ಕುವೆಂಪು, ಮಾಸ್ತಿ, ಹೀಗೆ ನಾಡಿನ ಅನೇಕ ಕಲಾವಿದರ ವ್ಯಂಗ್ಯಚಿತ್ರಗಳು ಜನರನ್ನು ಆಕರ್ಷಿಸಿದವು. ಕಾವ್ಯ ವಾಚನ ಕಾರ್ಯಕ್ರಮವನ್ನು ವಿಜಯ ಇನಾಮದಾರ, ಬಸವರಾಜ ಸುರಪುರ, ವೆಂಕಟೇಶ ಕಳಸಾಪುರ, ಪ್ರಹ್ಲಾದ ಯಾವಗಲ್‌ ನಡೆಸಿಕೊಟ್ಟರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.