ರಂಗಮಂದಿರ ಕಾಮಗಾರಿ ನನೆಗುದಿಗೆ


Team Udayavani, Aug 12, 2018, 5:18 PM IST

12-agust-24.jpg

ಇಳಕಲ್ಲ: ವೃತ್ತಿರಂಗಭೂಮಿ ಕೇಂದ್ರ ಎಂಬ ಹೆಗ್ಗಳಿಕೆ ಹೊಂದಿರುವ ನಗರದಲ್ಲಿ ವೃತ್ತಿ ರಂಗಕಲಾವಿದರಿಗೆ ತಮ್ಮ ಪ್ರತಿಭೆ ಹೊರಹೊಮ್ಮಿಸಲು ಒಂದು ಸುಸಜ್ಜಿತ ರಂಗಮಂದಿರ ಇಲ್ಲವಾಗಿದೆ. ದಿ. ಎಸ್‌.ಆರ್‌. ಕಾಶಪ್ಪನವರ ಅವರು ಸಚಿವರಾಗಿದ್ದಾಗ ಗಾಯತ್ರಿ ಬಯಲು ರಂಗಮಂದಿರ ಎಂಬ ನಾಮಕರಣದಿಂದ ಭೂಮಿಪೂಜೆ ನೆರವೇರಿಸಿದ್ದರು. ಅವರ ಅಕಾಲಿಕ ನಿಧನದಿಂದ ಬಯಲು ರಂಗಮಂದಿರದ ಕಾಮಗಾರಿ ಕೆಲಸ ಪ್ರಾರಂಭಗೊಳ್ಳಲಿಲ್ಲ.

ನಂತರ 2006ರಲ್ಲಿ ಸುವರ್ಣ ಕರ್ನಾಟಕ ವರ್ಷಾಚರಣೆ ಸವಿನೆನಪಿನ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರಾಜ್ಯದ 7 ಭಾಗಗಳಲ್ಲಿ ಸುವರ್ಣ ರಂಗ ಮಂದಿರ ನಿರ್ಮಿಸಲು ಉದ್ದೇಶಿಸಿ 25 ಲಕ್ಷ ಅನುದಾನವನ್ನು ಮಂಜೂರು ಮಾಡಿತು. ರಾಜ್ಯದ 7 ಭಾಗಗಳಲ್ಲಿ ಇಳಕಲ್ಲ ನಗರವು ಒಂದಾಗಿದ್ದು, ಅಂದು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಎಚ್‌.ಡಿ. ಕುಮಾರಸ್ವಾಮಿ ಅವರು ಅ.10, 2006ರಂದು ಇಳಕಲ್ಲಗೆ ಆಗಮಿಸಿ ಸುವರ್ಣ ರಂಗಮಂದಿಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಆಗ ಶಾಸಕರಾಗಿದ್ದ ದೊಡ್ಡನಗೌಡ ಪಾಟೀಲ ಸುವರ್ಣ ರಂಗ ಮಂದಿರ ಕೇವಲ 25ಲಕ್ಷದಿಂದ ನಿರ್ಮಾಣಗೊಳ್ಳುವುದು ಅಸಾಧ್ಯ. ಅದಕ್ಕಾಗಿ ಅಂದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಗೋವಿಂದ ಕಾರಜೋಳ ಅವರಿಂದ ಹೆಚ್ಚುವರಿಯಾಗಿ 50ಲಕ್ಷ ಅನುದಾನಕ್ಕೆ ಒತ್ತಾಯಿಸಿ ಮಂಜೂರು ಮಾಡಿಸಿದ್ದರು. ಆದರೆ ರಂಗಮಂದಿರಕ್ಕಾಗಿ ಕಾಯ್ದಿರಿಸಿದ್ದ ನಿವೇಶನ ನಗರಸಭೆಯಿಂದ ಕನ್ನಡ ಹಾಗೂ ಸಂಸ್ಕೃತ ಇಲಾಖೆಗೆ ವರ್ಗಾವಣೆ ಮಾಡಬೇಕಿತ್ತು. ಅಲ್ಲದೇ ಈ ನಿವೇಶನದಲ್ಲಿದ್ದ ರಂಗಮಂದಿರ ಒಡೆಯುವುದಕ್ಕೆ ಕೆಲವೊಂದು ತಾಂತ್ರಿಕ ಅಡಚಣೆಗಳಿಂದಾಗಿ ಅಂದಿನ ಶಾಸಕ ದೊಡ್ಡನಗೌಡ ಪಾಟೀಲ ಅವಧಿಯಲ್ಲಿ ಯಾವುದೇ ಪ್ರಗತಿಯಾಗಲಿಲ್ಲ.

ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸ್ಥಾನವು ಇದೇ ಭಾಗದಲ್ಲಿ ಆಯ್ಕೆಗೊಂಡ ಕಲಾವಿದೆ ಉಮಾಶ್ರೀ ಅವರು ವಹಿಸಿಕೊಂಡಾಗ ಕಲಾವಿದರ ಕಷ್ಟಗಳನ್ನು ಒಬ್ಬ ಕಲಾವಿದೆಯೇ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂಬಂತೆ ಇವರ ಅವಧಿ ಯಲ್ಲಿ ಸುವರ್ಣ ರಂಗ ಮಂದಿರ ಪೂರ್ಣಗೊಳ್ಳವುದು ಎಂದು ಸಾಕಷ್ಟು ಕನಸು ಕಂಡ ಕಲಾವಿದರಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಸೆ.18 2013ರಲ್ಲಿ ಸುವರ್ಣ ರಂಗಮಂದಿರ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದರು. ಒಟ್ಟು 1.50 ಲಕ್ಷ ಮೊತ್ತದ ಕಾಮಗಾರಿಗೆ ಈಗಾಗಲೇ 75 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಇನ್ನೂ 75 ಲಕ್ಷ ಅನುದಾನವನ್ನು ತಂದು ಭವ್ಯ ರಂಗಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದಾಗ ನಗರದ ಕಲಾವಿದರಲ್ಲಿ ಹೊಸದೊಂದು ಆಸೆ ನೆಲೆಸಿತು. ಬಿಡುಗಡೆಯಾಗಿದ್ದ 75ಲಕ್ಷ ಅನುದಾನದಲ್ಲಿ ಅಡಿಪಾಯದವರೆಗೆ ನಿರ್ಮಿಸಿದ ಭೂ ಸೇನಾ ನಿಗಮ ಅನುದಾನದ ಕೊರತೆಯಿಂದ ಕಾಮಗಾರಿ ಕೆಲಸ ಆಮೆಗತಿಯಲ್ಲಿ ಕುಂಟುತ್ತ ಸಾಗಿತು.

ಭೂ ಸೇನಾ ನಿಗಮ ಕಾಮಗಾರಿ ಕೆಲಸವನ್ನು ಸರಿಯಾಗಿ ನಿರ್ವಹಿಸಿದ ಕಾರಣ ನಿರ್ಮಿತಿ ಕೇಂದ್ರಕ್ಕೆ ಕೇಂದ್ರಕ್ಕೆ ಕಾಮಗಾರಿ ಕೆಲಸವನ್ನು ವಹಿಸಿ ಇಲಾಖೆಯು 50 ಲಕ್ಷ ಅನುದಾನವನ್ನು ಸಹಿತ ಮಂಜೂರು ಮಾಡಿದ್ದೇವೆ. ಆದರೆ ನಿರ್ಮಿತ ಕೇಂದ್ರದವರು 50 ಲಕ್ಷ ಅನುದಾನವನ್ನು ಮರಳಿಸಿದ್ದರೇ ಪಿಡಿ.ಖಾತೆಗೆ ಜಮಾ ಬರಬೇಕಿತ್ತು. ಅನುದಾನ ಮರಳಿಸಿದ ಒಂದು ಪ್ರತಿಯನ್ನಾದರೂ ಇಲಾಖೆಗೆ ಕಳುಹಿಸಬೇಕಿತ್ತು. ಈಚೆಗೆ ಎ.ಜಿ. ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿದಾಗ ನಿರ್ಮಿತ ಕೇಂದ್ರದವರು ಕಾಮಗಾರಿ ಕೆಲಸ ಆರಂಭಿಸುವುದಾಗಿ ಹೇಳಿದ್ದರು.
ನಾಗರಾಜ,
ಕನ್ನಡ-ಸಂಸ್ಕೃತಿ ಇಲಾಖೆ ಅಧಿಕಾರಿ.

ಭೂ ಸೇನಾ ನಿಗಮ ಕಾಮಗಾರಿ ಕೆಲಸವನ್ನು ಅರ್ಧಕ್ಕೆ ಮೊಟುಕುಗೊಳಿಸಿದ್ದರಿಂದ ಅಂದಿನ ಶಾಸಕರಾದ ವಿಜಯಾನಂದ ಕಾಶಪ್ಪನವರ ನಿರ್ಮಿತಿ ಕೇಂದ್ರಕ್ಕೆ ಕಾಮಗಾರಿ ಕೆಲಸ ವಹಿಸಿದ್ದರು. ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 50 ಲಕ್ಷ ಅನುದಾನವನ್ನು ಮಂಜೂರು ಮಾಡಿದ ಎರಡು ತಿಂಗಳಲ್ಲೆ ಇಲಾಖೆಯು ಅನುದಾನವನ್ನು ಮರಳಿಸುವಂತೆ ಸೂಚಿಸಿದ್ದರಿಂದ ಕಾಮಗಾರಿ ಕೆಲಸ ಮುಂದುವರಿಸಲಿಲ್ಲ.
 ಶಂಕರಲಿಂಗ ಗೋಗಿ, ನಿರ್ಮಿತ ಕೇಂದ್ರ ಯೋಜನಾ ನಿರ್ದೇಶಕ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.