ನಷ್ಟದ ಕೊರಳಿಗೆ ಮತ್ತೂಂದು ಉರುಳು
Team Udayavani, Apr 27, 2019, 11:12 AM IST
ಹುಬ್ಬಳ್ಳಿ: ಹು-ಧಾ ತ್ವರಿತ ಬಸ್ ಸಾರಿಗೆ ವ್ಯವಸ್ಥೆ (ಬಿಆರ್ಟಿಎಸ್) ಆರಂಭಿಕ ನಿರ್ವಹಣೆಗೆ ಸರಕಾರ ಘೋಷಿಸಿದ್ದ ಅನುದಾನ ಭರವಸೆಯಾಗಿಯೇ ಉಳಿದಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪಾಲಿಗೆ ಬಿಆರ್ಟಿಎಸ್ ಬಿಳಿ ಆನೆಯಾಗಿದೆ.
ಬಿಆರ್ಟಿಎಸ್ ಸೇವೆಯನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸಬೇಕು. ಆರಂಭಿಕ ಹಂತದಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ದರದಲ್ಲಿ ಐಷಾರಾಮಿ ಬಸ್ ಸೇವೆ ನೀಡಬೇಕು ಎನ್ನುವುದು ಸರಕಾರದ ಚಿಂತನೆಯಾಗಿತ್ತು. ಇದರಿಂದ ಬಿಆರ್ಟಿಎಸ್ ಸಂಸ್ಥೆಗೆ ಆಗುವ ನಷ್ಟವನ್ನು ಹಾಗೂ ಯೋಜನೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರಕಾರ ಆರು ತಿಂಗಳ ಅವಧಿಗೆ ಪ್ರತಿ ತಿಂಗಳು 5 ಕೋಟಿ ರೂ. ಅನುದಾನ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಯಿತು. ಆದರೆ ಈ ತೀರ್ಮಾನ ಕೈಗೊಂಡು ಈಗಾಗಲೇ ಐದು ತಿಂಗಳು ಗತಿಸಿದರೂ ಒಂದು ತಿಂಗಳ ಕಂತು ಕೂಡ ವಾಯವ್ಯ ಸಾರಿಗೆ ಸಂಸ್ಥೆಗೆ ಬಂದಿಲ್ಲ.
ಈ ಹಣ ಪಡೆಯಲು ಸಾರಿಗೆ ಸಂಸ್ಥೆ ಅಧಿಕಾರಿಗಳು ಹಣಕಾಸು ಇಲಾಖೆ ಅಧಿಕಾರಿಗಳ ಟೇಬಲ್ಗೆ ಎಡತಾಕುತ್ತಿರುವುದನ್ನು ಬಿಟ್ಟರೆ ಯಾವ ಫಲವೂ ದೊರೆಯುತ್ತಿಲ್ಲ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ವಾಯವ್ಯ ಸಾರಿಗೆ ಸಂಸ್ಥೆ ಕೊರಳಿಗೆ ಮತ್ತೂಂದು ನಷ್ಟದ ಸಂಸ್ಥೆಯನ್ನು ನೇತಾಕಿರುವುದು ಮತ್ತಷ್ಟು ಸಮಸ್ಯೆಯಾಗಿ ಪರಿಣಮಿಸಿದೆ. ಸರಕಾರದಿಂದ ಬರಬೇಕಾಗಿದ್ದ ಅನುದಾನ ಬಾಕಿ ಉಳಿದಿರುವುದು ಸಂಕಷ್ಟಕ್ಕೆ ಕಾರಣವಾಗಿದೆ.
ನಿರ್ಲಕ್ಷ್ಯ ಕಾರಣವೇ?: ಸಚಿವ ಸಂಪುಟದಲ್ಲಿನ ನಿರ್ಧಾರದಂತೆ ಬಿಆರ್ಟಿಎಸ್ ಕಾರ್ಯಾಚರಣೆಯನ್ನು ವಾಯವ್ಯ ಸಾರಿಗೆ ಸಂಸ್ಥೆ ನಿರ್ವಹಿಸಲಿದ್ದು, ಇದಕ್ಕಾಗಿ ಪ್ರತ್ಯೇಕ ನಗರ ವಿಭಾಗ ಆರಂಭಿಸಬೇಕು, ಮೂರು ತಿಂಗಳ ನಂತರ ಸಾಧಕ-ಬಾಧಕ ಅವಲೋಕಿಸಿ ಪ್ರತ್ಯೇಕ ನಿಗಮ ಅಥವಾ ವಾಯವ್ಯ ಸಾರಿಗೆ ಸಂಸ್ಥೆ ಅಡಿಯಲ್ಲಿ ವಿಭಾಗವಾಗಿ ಮುಂದುವರಿಯುವ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟವಾಗಿ ಸೂಚಿಸಿತ್ತು. ಆದರೆ ಸಂಸ್ಥೆಯ ಲಾಭದ ದೃಷ್ಟಿಯಿಂದ ಪ್ರತ್ಯೇಕ ಕಾರ್ಪೊರೇಶನ್ ಆರಂಭಿಸಬೇಕು ಎನ್ನುವ ಉದ್ದೇಶದಿಂದ ನಗರ ವಿಭಾಗ ಸ್ಥಾಪನೆಗೆ ವಿಳಂಬ ಮಾಡಲಾಗಿದ್ದು, ಪರಿಣಾಮ ಹಣಕಾಸು ಇಲಾಖೆ ಅನುದಾನ ಪಾವತಿಗೆ ಕೊಕ್ಕೆ ಹಾಕಲಾಗಿದೆ ಎನ್ನಲಾಗಿದೆ.
ಪ್ರತ್ಯೇಕ ನಗರ ವಿಭಾಗ ಆರಂಭದ ಹೊರತಾಗಿ ಸರಕಾರದ ಪ್ರೋತ್ಸಾಹ ಧನ ಬರುವುದಿಲ್ಲ ಎಂದು ಮನವರಿಕೆಯಾದ ನಂತರವಷ್ಟೇ ನೂತನ ನಗರ ವಿಭಾಗಕ್ಕೆ ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಮಾರ್ಚ್ ಮೊದಲ ವಾರದಲ್ಲಿ ಅಧಿಕೃತ ಮುದ್ರೆ ಒತ್ತಿದ್ದಾರೆ. ವಿಶೇಷಾಧಿಕಾರಿ ಹಾಗೂ ಸಹಾಯಕ ಆಡಳಿತಾಧಿಕಾರಿಗಳ ನೇಮಕ ಕೂಡ ಆಗಿದೆ. ಈ ಬೆಳವಣಿಗೆ ನಂತರ ಸಂಸ್ಥೆ ಅಧಿಕಾರಿಗಳು ಸರಕಾರಕ್ಕೆ ದಾಖಲೆಗಳನ್ನು ಸಲ್ಲಿಸುವ ಕಸರತ್ತು ನಡೆಸಿರುವಾಗಲೇ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಈ ಅನುದಾನ ಕನ್ನಡಿಯೊಳಗಿನ ಗಂಟಾಗಿ ಪರಿಣಮಿಸಿದೆ.
ತಮ್ಮ ಪಾಲಿನ ಹಣ ಪಡೆಯಲು ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಹೆಣಗಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಣದಿಂದ ನಿವೃತ್ತ ನೌಕರರಿಗೆ ಆರ್ಥಿಕ ಸೌಲಭ್ಯಸೇರಿದಂತೆ ಇತರೆ ಅವಶ್ಯಕತೆ ಪೂರೈಸಲು ಅನುಕೂಲವಾಗುತ್ತದೆ ಎನ್ನುವುದು ಸಂಸ್ಥೆಯ ಅಧಿಕಾರಿಗಳ ಲೆಕ್ಕಾಚಾರವಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಟಾರ ಅವರು ಸರಕಾರದ ಮೇಲೆ ಒತ್ತಡ ಹೇರಬೇಕಾಗಿದೆ.
• ಆರಂಭಿಕ ನಿರ್ವಹಣೆ ಅನುದಾನ ಮರೀಚಿಕೆ
•ಭರವಸೆಯಾಗೇ ಉಳಿದ ಮಾಸಿಕ 5 ಕೋಟಿ ನೆರವು
• ಐದು ತಿಂಗಳಾದ್ರೂ ಬಂದೇ ಇಲ್ಲ ಕವಡೆ ಕಾಸು
• 35 ಕೋಟಿ ರೂ. ಬಾಕಿಗಾಗಿ ಕಾದಿರುವ ಸಂಸ್ಥೆ
• ಕನ್ನಡಿಯೊಳಗಿನ ಗಂಟಾಗಿ ಪರಿಣಮಿಸಿದ ಅನುದಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್