ಪುನರ್ವಸತಿ ಕೇಂದ್ರಗಳಿಂದ ಮನೆಯತ್ತ ಹೆಜ್ಜೆ


Team Udayavani, Aug 10, 2019, 9:25 AM IST

huballi-tdy-1

ಹುಬ್ಬಳ್ಳಿ: ನಾರಾಯಣಪೇಟೆಯ ತುಳಜಾಭವಾನಿ ದೇವಸ್ಥಾನದಲ್ಲಿ ನಿರಾಶ್ರಿತರಿಗೆ ಊಟ ಬಡಿಸುತ್ತಿರುವ ಎಸ್‌ಎಸ್‌ಕೆ ಸಮಾಜದವರು.

ಹುಬ್ಬಳ್ಳಿ: ನಗರದ ಕೆಲ ಭಾಗಗಳಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪಾಲಿಕೆಯು ನಗರದ ಕೆಲವೆಡೆ ಪರಿಹಾರ ಕೇಂದ್ರಗಳನ್ನು ಆರಂಭಿಸಿದ್ದು, ನಿರಾಶ್ರಿತರಿಗೆ ಊಟ, ವಸತಿ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ. ಶುಕ್ರವಾರ ಮಳೆ ಸ್ವಲ್ಪ ಕಡಿಮೆ ಆಗಿದ್ದರಿಂದ ಬಹುತೇಕರು ತಮ್ಮ ಮನೆಯತ್ತ ಮುಖ ಮಾಡಿದರು.

ನ್ಯೂ ಇಂಗ್ಲಿಷ್‌ ಸ್ಕೂಲ್ನ ಪರಿಹಾರ ಕೇಂದ್ರದಲ್ಲಿ 50ಕ್ಕೂ ಅಧಿಕ ನಿರಾಶ್ರಿತರಿಗೆ ಹಾಗೂ ಬಮ್ಮಾಪುರ ಓಣಿಯ ಓಲೆ ಮಠದಲ್ಲಿ 40ಕ್ಕೂ ಹೆಚ್ಚು ಜನರಿಗೆ ಊಟ, ವಸತಿ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ.

ಬುಧವಾರ ರಾತ್ರಿಯಿಂದ ಈ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ನಿರಾಶ್ರಿತರು ರಾತ್ರಿ ಪರಿಹಾರ ಕೇಂದ್ರಗಳಲ್ಲಿ ವಾಸ್ತವ್ಯ ಮಾಡಿ, ಹಗಲು ಹೊತ್ತಿನಲ್ಲಿ ತಮ್ಮ ಮನೆಗಳಿಗೆ ಹೋಗಿ ಸಾಮಗ್ರಿಗಳನ್ನು ತೆಗೆದುಕೊಂಡು ಒಂದೆಡೆ ಸಂಗ್ರಹಿಸಿಡುತ್ತಿದ್ದಾರೆ. ಸಂಬಂಧಿಕರ ಮನೆಗೆ ಇಲ್ಲವೆ ಬೇರೆಡೆ ಬಾಡಿಗೆ ಮನೆ ಮಾಡಿಕೊಂಡು ಹೋಗುತ್ತಿದ್ದಾರೆ.

ಪರಿಹಾರ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಬೆಳಗ್ಗೆ ಉಪಹಾರ ಹಾಗೂ ಮಧ್ಯಾಹ್ನ-ರಾತ್ರಿ ಊಟ ನೀಡಲಾಗುತ್ತಿದೆ. ಜೊತೆಗೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಪರಿಹಾರ ಕೇಂದ್ರದ ಸಿಬ್ಬಂದಿ ಹೇಳಿದರು.

ಓಲೆಮಠದಲ್ಲಿ ತೆರೆಯಲಾದ ಪರಿಹಾರ ಕೇಂದ್ರದಲ್ಲಿ ಹಳೇಹುಬ್ಬಳ್ಳಿ ಕುಂಬಾರ ಓಣಿ, ಮ್ಯಾದಾರ ಓಣಿಯ ನಿರಾಶ್ರಿತರು ಉಳಿದುಕೊಂಡಿದ್ದಾರೆ. ತೊರವಿ ಗಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಓರ್ವ ವೈದ್ಯರು, ಸ್ಟಾಪ್‌ ನರ್ಸ್‌, ನಾಲ್ವರು ಸಿಸ್ಟರ್, ಏಳು ಜನ ಆಶಾ ಕಾರ್ಯಕರ್ತೆಯರು ಸೇರಿ ಸಹಾಯ ಮಾಡುತ್ತಿದ್ದೇವೆ ಎಂದು ನರ್ಸ್‌ ತಿಳಿಸಿದರು.

ನ್ಯೂ ಇಂಗ್ಲಿಷ್‌ ಸ್ಕೂಲ್ನ ಪರಿಹಾರ ಕೇಂದ್ರದಲ್ಲಿ ಓರ್ವ ವೈದ್ಯಾಧಿಕಾರಿ, ಆಶಾ ಕಾರ್ಯಕರ್ತೆ ಆರೋಗ್ಯ ಸೇವೆಯಲ್ಲಿ ತೊಡಗಿದ್ದೇವೆ. ಅಂಗನವಾಡಿ ಕೇಂದ್ರದವರು ಸಹಾಯ ಮಾಡುತ್ತಿದ್ದಾರೆ. ಶುಕ್ರವಾರ ಸ್ವಲ್ಪ ಮಳೆ ನಿಂತಿದ್ದರಿಂದ ಕೆಲವರು ತಮ್ಮ ಮನೆಗೆ ಹೋಗಿದ್ದಾರೆ ಎಂದು ಕಿರಿಯ ಆರೋಗ್ಯ ಸಹಾಯಕಿ ಎಂ.ಕೆ. ಛಬ್ಬಿ ಹೇಳಿದರು.

ಎಸ್‌ಎಸ್‌ಕೆ ಸಮಾಜದ ನೆರವು: ಹಳೇಹುಬ್ಬಳ್ಳಿ ನಾರಾಯಣ ಪೇಟೆಯ ಎಸ್‌ಎಸ್‌ಕೆ ಪಂಚ ಟ್ರಸ್ಟ್‌ ಕಮೀಟಿ ವತಿಯಿಂದ ಶುಕ್ರವಾರ ಪ್ರವಾಹದಲ್ಲಿ ಸಿಲುಕಿದ್ದ ನಿರಾಶ್ರಿತರಿಗೆ ಮನೆ ಮನೆಗೆ ತೆರಳಿ ಕೊಲಾØಪುರ ಚಾದರ, ಟವೆಲ್, ಸೀರೆ ವಿತರಿಸಲಾಯಿತು. ಇವರ ಜೊತೆಗೆ ವೆಂಕಟೇಶ ಎ. ಕಾಟವೆ ಫ್ರೆಂಡ್ಸ್‌ ಸರ್ಕಲ್ನವರು ಡ್ರೆಸ್‌ ಮಟಿರಿಯಲ್ಸ್ ವಿತರಿಸಿದರು.

ಪ್ರವಾಹದಲ್ಲಿ ಸಿಲುಕಿದ್ದ ಜನರಿಗೆ ಹಳೇಹುಬ್ಬಳ್ಳಿ ಚನ್ನಪೇಟೆ ನಾರಾಯಣ ಪೇಟೆಯ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಎಸ್‌ಎಸ್‌ಕೆ ಸಮಾಜದಿಂದ ನಿರಾಶ್ರಿತರ ಕೇಂದ್ರ ಸ್ಥಾಪಿಸಲಾಗಿದೆ. ಮೂರು ದಿನಗಳಿಂದ ನಿರಾಶ್ರಿತರಿಗೆ ಸಮಾಜದಿಂದ ಊಟ, ವಸತಿ, ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಲಾಗಿದೆ. ಈ ಕೇಂದ್ರದಲ್ಲಿ ನೂರು ಜನರು ಉಳಿದುಕೊಂಡಿದ್ದಾರೆ ಎಂದು ಸಮಿತಿಯ ಸತೀಶ ಮೆಹರವಾಡೆ ಹೇಳಿದರು. ಜೊತೆಗೆ ಭಾಸ್ಕರ ಜಿತೂರಿ, ಗೋಪಾಲ ಬದ್ದಿ ಮೊದಲಾದವರು ಹೆಚ್ಚಿನ ಮುತುವರ್ಜಿ ವಹಿಸಿ ನಿರಾಶ್ರಿತರಿಗೆ ಸೌಲಭ್ಯ ಕಲ್ಪಿಸುತ್ತಿದ್ದಾರೆ ಎಂದರು.

ಅವಲಕ್ಕಿ ಮಿಲ್ಗೆ ನೀರು: ಹಳೇಹುಬ್ಬಳ್ಳಿ ನಾರಾಯಣ ಸೋಪಾ ಕರಿಮಿಯಾ ನಗರದಲ್ಲಿರುವ ಜೈನುದ್ದೀನ ಚೌಧರಿ ಎಂಬುವರ ಚೌಧರಿ ಅವಲಕ್ಕಿ ಮಿಲ್ಗೆ ನೀರು ನುಗ್ಗಿದೆ. ಅಕ್ಕಿ ಹಾಗೂ ಅವಲಕ್ಕಿ ತುಂಬಿದ್ದ ಬಾಕ್ಸ್‌ಗಳನ್ನು ಸುರಕ್ಷಿತ ಸ್ಥಳದಲ್ಲಿಡುವ ಕೆಲಸ ಮಾಡುತ್ತಿದ್ದಾರೆ.

 

•ಶಿವಶಂಕರ ಕಂಠಿ

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.