ಆಧುನಿಕ ಸಂಶೋಧನೆಗಳೊಂದಿಗೆ ಹೆಜ್ಜೆ ಅನಿವಾರ್ಯ

ಧಾರವಾಡ: ನಗರದಲ್ಲಿ ಆಸ್ತಾ ಮಹಿಳಾ ಕೇಂದ್ರ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಮಾಜಿ ಮೇಯರ್‌ ಪೂರ್ಣಾ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

Team Udayavani, May 17, 2019, 12:03 PM IST

hubali-tdy-10..

ಧಾರವಾಡ: ಆಧುನಿಕ ವೈಜ್ಞಾನಿಕ ಸಂಶೋಧನೆಗಳು ಮಕ್ಕಳಾಗದ ದಂಪತಿಗಳಿಗೆ ತಮ್ಮದೇ ಮಕ್ಕಳನ್ನು ಪಡೆಯುವಲ್ಲಿ ಹಲವು ಆಯ್ಕೆಗಳನ್ನು ಒದಗಿಸುವ ಮೂಲಕ ಹಲವು ಕುಟುಂಬಗಳ ನೆಮ್ಮದಿಗೆ ಕಾರಣವಾಗಿದೆ ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಅಧ್ಯಕ್ಷ ಎಸ್‌. ರವೀಂದ್ರನ್‌ ಹೇಳಿದರು. ನಗರದಲ್ಲಿ ಆಸ್ತಾ ಮಹಿಳಾ ಕೇಂದ್ರ ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಪ್ರನಾಳ ಶಿಶು ಕುರಿತ ಉಚಿತ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ವೈದ್ಯರೂ ಕೂಡ ಆಧುನಿಕ ಸಂಶೋಧನೆಗಳೊಂದಿಗೆ ಹೆಜ್ಜೆ ಹಾಕುವುದು ಅನಿವಾರ್ಯ ಆಗಿರುವುದರಿಂದ ಬಂಡವಾಳದ ಅವಶ್ಯಕತೆ ಅವರಿಗೆ ಹಿಂದೆಂದಿಗಿಂತ ಹೆಚ್ಚಿದೆ. ಇದನ್ನು ಅನುಲಕ್ಷಿಸಿ ನಮ್ಮ ಬ್ಯಾಂಕ್‌ ವೈದ್ಯರ ತಕ್ಷಣದ ಅವಶ್ಯಕತೆ ಪೂರೈಸಲು ಗರಿಷ್ಠ 25 ಲಕ್ಷ ಸಾಲ ಒದಗಿಸುವ ಓಡಿ ಸೌಲಭ್ಯ ಜಾರಿಗೆ ತಂದಿದೆ. ಪ್ರನಾಳ ಶಿಶು ಮತ್ತು ಬಂಜೆತನ ನಿವಾರಣೆಗೆ ಧಾರವಾಡದಲ್ಲೇ ಅವಕಾಶ ದೊರೆತಿರುವುದಿಂದ ಜನಸಾಮಾನ್ಯರಿಗೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು. ಜ್ಯೋತಿ ಪ್ರಹ್ಲಾದ ಜೋಶಿ ಮಾತನಾಡಿ, ಮಕ್ಕಳಾಗದ ದಂಪತಿಗಳನ್ನು ಸಮಾಜ ನೋಡುವ ದೃಷ್ಟಿಕೋನವೇ ಭಿನ್ನವಾಗಿದೆ. ವಿಶೇಷವಾಗಿ ಮಹಿಳೆ ಮಾನಸಿಕವಾಗಿ ತುಂಬಾ ತೊಳಲಾಡುತ್ತಾಳೆ. ಬಂಜೆತನ ನಿವಾರಣೆಗೆ ಸಂಬಂಧಿಸಿ ಧಾರವಾಡದಲ್ಲಿ ಆಸ್ಪತ್ರೆ ತೆರೆದ ಡಾ| ಸೌಭಾಗ್ಯ ಕುಲಕರ್ಣಿ ಅವರ ಕಾರ್ಯ ಶ್ಲಾಘನೀಯ ಎಂದರು. ಖ್ಯಾತ ಸ್ತ್ರೀರೋಗ ತಜ್ಞೆ ಡಾ| ಸೌಭಾಗ್ಯ ಕುಲಕರ್ಣಿ ಮಾತನಾಡಿ, ಆಧುನಿಕ ಜೀವನ ಶೈಲಿ ಪುರುಷ ಮತ್ತು ಮಹಿಳೆಯರನ್ನು ಬಂಜೆತನಕ್ಕೆ ದೂಡುತ್ತಿದ್ದು, ಸೂಕ್ತ ಔಷಧೋಪಚಾರ ಮತ್ತು ಜೀವನ ಶೈಲಿ ಬದಲಾವಣೆಯೊಂದಿಗೆ ಮಕ್ಕಳನ್ನು ಫಲಿಸುವಂತೆ ಮಾಡಬಹುದು. ಅದೂ ಸಾಧ್ಯವಾಗದಿದ್ದರೆ ಪ್ರನಾಳ ಶಿಶು ಪ್ರಯೋಗದ ಮೂಲಕ ಮೂಲಕ ಸಾಫಲ್ಯ ಕಾಣಬಹುದು ಎಂದು ತಿಳಿಸಿದರು. ಆಸ್ಪತ್ರೆ ಮುಖ್ಯ ವೈದ್ಯೆ ಡಾ| ಕೋಮಲ ಕುಲಕರ್ಣಿ ಮಾತನಾಡಿ, ಪ್ರನಾಳ ಶಿಶು ವ್ಯವಸ್ಥೆ ಅತ್ಯಂತ ಸರಳಗೊಂಡಿದ್ದು ಜನಸಾಮಾನ್ಯರಿಗೂ ಲಭ್ಯವಾಗಬಲ್ಲ ತಂತ್ರಜ್ಞಾನವಾಗಿದೆ ಎಂದರು. ಮಾಜಿ ಮೇಯರ್‌ ಪೂರ್ಣಾ ಪಾಟೀಲ, ಅಕ್ಕನ ಬಳಗದ ಅಧ್ಯಕ್ಷೆ ಮೀನಾಕ್ಷಿ ಕೋಟೂರು, ಬರಹಗಾರ್ತಿ ಮಾಲತಿ ಮುದಕವಿ, ರೋಟರಿ ಕ್ಲಬ್‌ ಉಪ ಗವರ್ನರ್‌ ಗೌರಿ ಹಿರೇಮಠ ಅವರನ್ನು ಸನ್ಮಾನಿಸಲಾಯಿತು. 150ಕ್ಕೂ ಅಧಿಕ ದಂಪತಿಗಳು ಉಚಿತ ಶಿಬಿರದ ಪ್ರಯೋಜನ ಪಡೆದರು.

ಧಾರವಾಡ: ಆಧುನಿಕ ವೈಜ್ಞಾನಿಕ ಸಂಶೋಧನೆಗಳು ಮಕ್ಕಳಾಗದ ದಂಪತಿಗಳಿಗೆ ತಮ್ಮದೇ ಮಕ್ಕಳನ್ನು ಪಡೆಯುವಲ್ಲಿ ಹಲವು ಆಯ್ಕೆಗಳನ್ನು ಒದಗಿಸುವ ಮೂಲಕ ಹಲವು ಕುಟುಂಬಗಳ ನೆಮ್ಮದಿಗೆ ಕಾರಣವಾಗಿದೆ ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಅಧ್ಯಕ್ಷ ಎಸ್‌. ರವೀಂದ್ರನ್‌ ಹೇಳಿದರು.

ನಗರದಲ್ಲಿ ಆಸ್ತಾ ಮಹಿಳಾ ಕೇಂದ್ರ ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಪ್ರನಾಳ ಶಿಶು ಕುರಿತ ಉಚಿತ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯರೂ ಕೂಡ ಆಧುನಿಕ ಸಂಶೋಧನೆಗಳೊಂದಿಗೆ ಹೆಜ್ಜೆ ಹಾಕುವುದು ಅನಿವಾರ್ಯ ಆಗಿರುವುದರಿಂದ ಬಂಡವಾಳದ ಅವಶ್ಯಕತೆ ಅವರಿಗೆ ಹಿಂದೆಂದಿಗಿಂತ ಹೆಚ್ಚಿದೆ. ಇದನ್ನು ಅನುಲಕ್ಷಿಸಿ ನಮ್ಮ ಬ್ಯಾಂಕ್‌ ವೈದ್ಯರ ತಕ್ಷಣದ ಅವಶ್ಯಕತೆ ಪೂರೈಸಲು ಗರಿಷ್ಠ 25 ಲಕ್ಷ ಸಾಲ ಒದಗಿಸುವ ಓಡಿ ಸೌಲಭ್ಯ ಜಾರಿಗೆ ತಂದಿದೆ. ಪ್ರನಾಳ ಶಿಶು ಮತ್ತು ಬಂಜೆತನ ನಿವಾರಣೆಗೆ ಧಾರವಾಡದಲ್ಲೇ ಅವಕಾಶ ದೊರೆತಿರುವುದಿಂದ ಜನಸಾಮಾನ್ಯರಿಗೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.

ಜ್ಯೋತಿ ಪ್ರಹ್ಲಾದ ಜೋಶಿ ಮಾತನಾಡಿ, ಮಕ್ಕಳಾಗದ ದಂಪತಿಗಳನ್ನು ಸಮಾಜ ನೋಡುವ ದೃಷ್ಟಿಕೋನವೇ ಭಿನ್ನವಾಗಿದೆ. ವಿಶೇಷವಾಗಿ ಮಹಿಳೆ ಮಾನಸಿಕವಾಗಿ ತುಂಬಾ ತೊಳಲಾಡುತ್ತಾಳೆ. ಬಂಜೆತನ ನಿವಾರಣೆಗೆ ಸಂಬಂಧಿಸಿ ಧಾರವಾಡದಲ್ಲಿ ಆಸ್ಪತ್ರೆ ತೆರೆದ ಡಾ| ಸೌಭಾಗ್ಯ ಕುಲಕರ್ಣಿ ಅವರ ಕಾರ್ಯ ಶ್ಲಾಘನೀಯ ಎಂದರು.

ಖ್ಯಾತ ಸ್ತ್ರೀರೋಗ ತಜ್ಞೆ ಡಾ| ಸೌಭಾಗ್ಯ ಕುಲಕರ್ಣಿ ಮಾತನಾಡಿ, ಆಧುನಿಕ ಜೀವನ ಶೈಲಿ ಪುರುಷ ಮತ್ತು ಮಹಿಳೆಯರನ್ನು ಬಂಜೆತನಕ್ಕೆ ದೂಡುತ್ತಿದ್ದು, ಸೂಕ್ತ ಔಷಧೋಪಚಾರ ಮತ್ತು ಜೀವನ ಶೈಲಿ ಬದಲಾವಣೆಯೊಂದಿಗೆ ಮಕ್ಕಳನ್ನು ಫಲಿಸುವಂತೆ ಮಾಡಬಹುದು. ಅದೂ ಸಾಧ್ಯವಾಗದಿದ್ದರೆ ಪ್ರನಾಳ ಶಿಶು ಪ್ರಯೋಗದ ಮೂಲಕ ಮೂಲಕ ಸಾಫಲ್ಯ ಕಾಣಬಹುದು ಎಂದು ತಿಳಿಸಿದರು.

ಆಸ್ಪತ್ರೆ ಮುಖ್ಯ ವೈದ್ಯೆ ಡಾ| ಕೋಮಲ ಕುಲಕರ್ಣಿ ಮಾತನಾಡಿ, ಪ್ರನಾಳ ಶಿಶು ವ್ಯವಸ್ಥೆ ಅತ್ಯಂತ ಸರಳಗೊಂಡಿದ್ದು ಜನಸಾಮಾನ್ಯರಿಗೂ ಲಭ್ಯವಾಗಬಲ್ಲ ತಂತ್ರಜ್ಞಾನವಾಗಿದೆ ಎಂದರು.

ಮಾಜಿ ಮೇಯರ್‌ ಪೂರ್ಣಾ ಪಾಟೀಲ, ಅಕ್ಕನ ಬಳಗದ ಅಧ್ಯಕ್ಷೆ ಮೀನಾಕ್ಷಿ ಕೋಟೂರು, ಬರಹಗಾರ್ತಿ ಮಾಲತಿ ಮುದಕವಿ, ರೋಟರಿ ಕ್ಲಬ್‌ ಉಪ ಗವರ್ನರ್‌ ಗೌರಿ ಹಿರೇಮಠ ಅವರನ್ನು ಸನ್ಮಾನಿಸಲಾಯಿತು. 150ಕ್ಕೂ ಅಧಿಕ ದಂಪತಿಗಳು ಉಚಿತ ಶಿಬಿರದ ಪ್ರಯೋಜನ ಪಡೆದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.