ಒಳ್ಳೆಯ ಪಾತ್ರ ಬಂದರೆ ನಟಿಸಲು ಈಗಲೂ ರೆಡಿ

•ಜನರ ನಿರೀಕ್ಷೆ ಪೂರ್ಣಗೊಳಿಸಲು ಮೊದಲ ಆದ್ಯತೆ •ಮಂಡ್ಯ ಜನರಿಗೆ ದ್ರೋಹ ಬಗೆಯುವ ಕೆಲಸ ಮಾಡಲ್ಲ

Team Udayavani, Jun 16, 2019, 9:40 AM IST

hubali-tdy-6..

ಹುಬ್ಬಳ್ಳಿ: ಸಂವಾದದಲ್ಲಿ ಸಂಸದೆ ಸುಮಲತಾ ಅಂಬರೀಷ ಮಾತನಾಡಿದರು.

ಹುಬ್ಬಳ್ಳಿ: ಒಳ್ಳೆಯ ಪಾತ್ರಗಳು ಬಂದರೆ ಈಗಲೂ ನಟಿಸಲು ಸಿದ್ಧವಾಗಿದ್ದೇನೆ. ಆದರೆ ಜನರು ಹೊಸ ಜವಾಬ್ದಾರಿ ನೀಡಿರುವುದರಿಂದ ಅವರ ನಿರೀಕ್ಷೆ ಪೂರ್ಣಗೊಳಿಸುವುದು ನನ್ನ ಮುಂದಿರುವ ಮೊದಲ ಕರ್ತವ್ಯವಾಗಿದೆ ಎಂದು ಸಂಸದೆ ಸುಲಮತಾ ಅಂಬರೀಷ ಹೇಳಿದರು.

ಇಲ್ಲಿನ ಬಿವಿಬಿ ಕಾಲೇಜಿನಲ್ಲಿ ‘ಅಮರ್‌’ ಚಿತ್ರದ ಪ್ರಚಾರಾರ್ಥ ವಿದ್ಯಾರ್ಥಿಗಳೊಂದಿಗೆ ಆಯೋಜಿಸಿದ್ದ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಂಡ್ಯದ ಜನರು ನನ್ನ ಮೇಲೆ ಹಲವು ನಿರೀಕ್ಷೆಗಳನ್ನಿಟ್ಟುಕೊಂಡು ಸಂಸದೆಯಾಗಿ ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಗೆ ದ್ರೋಹ ಬಗೆಯುವ ಕೆಲಸ ಮಾಡುವುದಿಲ್ಲ. ಹೀಗಾಗಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಜನರ ಸೇವೆ ನನ್ನ ಮೊದಲ ಕಾರ್ಯವಾಗಿದೆ ಎಂದರು.

ಸಿನಿಮಾ ರಂಗಕ್ಕೆ ಆಗಮಿಸುತ್ತೇನೆ ಎನ್ನುವ ನಿರೀಕ್ಷೆ ಇರಲಿಲ್ಲ. ಆಕಸ್ಮಿಕವಾಗಿ 16ನೇ ವಯಸ್ಸಿನಲ್ಲಿ ಬಂದ ಅವಕಾಶದಿಂದ ಈ ಹಂತಕ್ಕೆ ಬಂದು ತಲುಪಿದ್ದೇನೆ. ಸಾರ್ವಜನಿಕ ಬದುಕನ್ನು ಆಯ್ದುಕೊಂಡಾಗ ಎಲ್ಲರಂತೆ ಸಾಮಾನ್ಯ ಜೀವನ ನಡೆಸುವುದು ಕಷ್ಟಸಾಧ್ಯ. ಆದರೆ ಜನರ ಪ್ರೀತಿಯಲ್ಲಿ ನಾವು ತ್ಯಾಗ ಮಾಡಿರುವುದು ಮರೆಯುತ್ತೇವೆ. ನಾವು ಆಯ್ದುಕೊಳ್ಳುವ ಕ್ಷೇತ್ರ ನಮ್ಮ ಬದುಕನ್ನು ರೂಪಿಸುತ್ತದೆ. ಇದೀಗ ರಾಜಕೀಯ ಕ್ಷೇತ್ರ ಆಯ್ದುಕೊಂಡಿದ್ದು, ಜನರ ಭಾವನೆ, ಗೌರವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದರು.

ಅಂಬರೀಷರ ಕನಸು: ಅಮರ ಚಿತ್ರ ಅಂಬರೀಶ ಅವರ ಕನಸಾಗಿತ್ತು. ಈ ಚಿತ್ರವನ್ನು ನೋಡಬೇಕು ಎನ್ನುವ ಆಸೆ ಅವರದ್ದಾಗಿತ್ತು. ಆದರೆ ಆ ಭಾಗ್ಯ ಅವರಿಗೆ ದೊರೆಯಲಿಲ್ಲ. ಚಿತ್ರರಂಗದಲ್ಲಿ ಅವರನ್ನು ಎತ್ತರಕ್ಕೆ ಬೆಳೆಸಿದ ನಾಡಿನ ಜನರು ಈ ಚಿತ್ರ ವೀಕ್ಷಿಸಿ ಅಭಿಷೇಕಗೆ ಆಶೀರ್ವಾದ ಮಾಡುವ ಮೂಲಕ ಅಂಬರೀಷ ಅವರ ಕೊನೆ ಆಸೆ ಈಡೇರಿಸಬೇಕು. ಪರಿಸರದ ಕುರಿತಾಗಿ ಉತ್ತಮ ಸಂದೇಶವನ್ನು ಇಟ್ಟುಕೊಂಡು ಈ ಚಿತ್ರ ನಿರ್ಮಿಸಲಾಗಿದೆ ಎಂದರು.

ನಾಯಕ ನಟ ಅಭಿಷೇಕ ಅಂಬರೀಶ ಮಾತನಾಡಿ, ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವಂತಹ ಚಿತ್ರಗಳಲ್ಲಿ ನಟಿಸಬೇಕು ಎಂಬುದು ನನ್ನ ಆಸೆ. ಎರಡು ಗಂಟೆಯ ಚಿತ್ರದಲ್ಲಿ ಇಡೀ ಜೀವನ ತೋರಿಸಲಾಗುತ್ತದೆ. ಕೊನೆಗೆ ಸತ್ಯಕ್ಕೆ ಮಾತ್ರ ಜಯ ಎಂಬುದು ತಿರುಳಾಗಿರುತ್ತದೆ. ನಮ್ಮ ಜೀವನಕ್ಕೆ ಪ್ರೇರಣೆ ನೀಡುವಂತಹ ವಿಷಯಗಳನ್ನು ಮಾತ್ರ ಸಿನಿಮಾಗಳಿಂದ ಸ್ವೀಕರಿಸಬೇಕು. ಜೀವನದಲ್ಲಿ ತಂದೆ ಗುಣ ಹಾಗೂ ತಾಯಿಯ ಶಿಸ್ತು ರೂಢಿಸಿಕೊಂಡಿದ್ದೇನೆ. ನನ್ನ ಮೊದಲ ಸಿನಿಮಾ ವೀಕ್ಷಿಸಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಚಿತ್ರದ ನಿರ್ದೇಶಕ ನಾಗಶೇಖರ, ನಟ ದೊಡ್ಡಣ್ಣ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ, ನಿರ್ದೇಶಕ ಯೋಗರಾಜ ಭಟ್ಟ ಇನ್ನಿತರರಿದ್ದರು.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.