ಬಾಲಕಾರ್ಮಿಕ ಪದ್ಧತಿ ನಿವಾರಣೆಗೆ ಪಣ ತೊಡಿ: ನ್ಯಾ| ದಾಕ್ಷಾಯಿಣಿ
Team Udayavani, Jun 23, 2019, 9:14 AM IST
ಕಲಘಟಗಿ: ಪಟ್ಟಣದ ಜನತಾ ಇಂಗ್ಲಿಷ್ ಸ್ಕೂಲ್ನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ನ್ಯಾ| ದಾಕ್ಷಾಯಣಿ ಜಿ.ಕೆ. ಉದ್ಘಾಟಿಸಿದರು.
ಕಲಘಟಗಿ: ಸಂಪಾದನೆಗೋಸ್ಕರ ಬಾಲ್ಯಾವಸ್ಥೆ ಯಲ್ಲಿ ಕೆಲಸಕ್ಕೆ ತೊಡಗಿಸುವುದರಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಕ್ಷೀಣಿಸುತ್ತಿದೆ. ಬಾಲಕಾರ್ಮಿಕ ಪದ್ಧತಿಯನ್ನು ಬೇರು ಸಹಿತ ಕಿತ್ತೆಸೆಯಲು ಎಲ್ಲರೂ ಪಣ ತೊಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧಿಧೀಶೆ ದಾಕ್ಷಾಯಣಿ ಜಿ.ಕೆ. ಹೇಳಿದರು.
ಪಟ್ಟಣದ ಜನತಾ ಇಂಗ್ಲಿಷ್ ಸ್ಕೂಲ್ನಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ, ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿರುವ ಮಕ್ಕಳನ್ನು ಕಂಡು ಸುಮ್ಮನಾಗಿರುವುದರಿಂದ ಈ ಅನಿಷ್ಠ ಪದ್ಧತಿ ತೊಲಗುವುದಿಲ್ಲ. ಇಂತಹ ಅವಸ್ಥೆಯನ್ನು ಹುಡುಕಿ ಅದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಿದಾಗ ಬಾಲ ಕಾರ್ಮಿಕರಿಗೆ ನ್ಯಾಯ ಒದಗಿಸಿದಂತಾಗುತ್ತದೆ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ತರನುಮ ಬಂಗಾಲಿ ಮಾತನಾಡಿ, 14ರಿಂದ 16 ವಯಸ್ಸಿನ ಒಳಗಿನ ಮಕ್ಕಳು ಅಪಾಯಕಾರಿಯಲ್ಲದ ಕೆಲಸದಲ್ಲಿ ತೊಡಗಿಕೊಳ್ಳಬಹುದು. ಆದರೆ ಮಾಲೀಕರು ಅವರಿಂದ ಕೇವಲ 5 ತಾಸು ಮಾತ್ರ ಕೆಲಸ ಮಾಡಿಸಿಕೊಳ್ಳಬೇಕು ಹಾಗೂ ಮಧ್ಯಂತರದಲ್ಲಿ ಒಂದು ತಾಸು ವಿರಾಮ ನೀಡಬೇಕು. ಇದರ ಜೊತೆಗೆ ಪ್ರತಿಯೊಂದು ಅಂಗಡಿಯಲ್ಲಿ ಒಂದು ಪುಸ್ತಕವನ್ನು ಬಿಡುವಿನ ಸಮಯದಲ್ಲಿ ಓದಲು ಇಡುವುದು ಕಡ್ಡಾಯ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ ಮಾತನಾಡಿದರು. ಜನತಾ ಇಂಗ್ಲಿಷ್ ಸ್ಕೂಲ್ ಚೇರ್ಮನ್ ಡಾ| ಎಚ್.ಬಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ದಿವಾಣಿ ನ್ಯಾಯಾಧೀಶ ರಾಜಶೇಖರ ತಿಳಿಗಂಜಿ, ಸಹಾಯಕ ಕಾರ್ಮಿಕ ಆಯುಕ್ತರಾದ ಮೀನಾ ಪಾಟೀಲ, ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ.ಬಿ. ಶಿವನಗೌಡರ, ಬಿ.ವಿ. ಪಾಟೀಲ, ಆರ್.ವೈ. ರೊಟ್ಟಿ, ವಿಜಯ ಗಾಣಿಗೇರ, ಎಂ.ಎಸ್. ಧನಿಗೊಂಡ, ಕೆ.ಬಿ. ಚೌಡಿಹಾಳ, ಪುಟ್ಟಪ್ಪ ಭಜಂತ್ರಿ, ಶ್ರೀಧರ ಪಾಟೀಲಕುಲಕರ್ಣಿ, ಗೌರಮ್ಮ ನಾಯಕ, ಎಂ.ಎಸ್. ಕಾಟೆ, ಉಮಾ ದಿವಟರ, ಎಂ.ಬಿ. ಕರ್ಲವಾಡ, ಎನ್.ಬಿ. ಹಳ್ಳಿ, ಎಫ್.ಎಸ್. ಹಳ್ಳಿ, ಪಿ.ಬಿ. ಹಿರೇಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ