ಗೋಮಾಳಗಳು ಮಾಯ-ಗಾಂವಠಾಣಾ ಗುಳುಂ | ಸರ್ಕಾರಿ ರಸ್ತೆಗಳೇ ಹೈನುಗಾರಿಕೆಯ ಹಾದಿ

ಹತ್ತೇ ವರ್ಷದಲ್ಲಿ 6500 ರಿಂದ 1300 ಎಕರೆಗೆ ಕುಸಿತ

Team Udayavani, Sep 14, 2021, 3:47 PM IST

hjghyu

ವರದಿ: ಬಸವರಾಜ ಹೊಂಗಲ್‌

ಧಾರವಾಡ: ಗೋವುಗಳು ಮೇಯಲು ಇದ್ದ ಗೋಮಾಳ ನುಂಗಣ್ಣರ ಪಾಲಾಗಿವೆ. ಹೊಲದ ಬದುಗಳೆಲ್ಲವೂ ಸಾಗುವಳಿಯಾಗಿ ದೇಶಿ ಹುಲ್ಲು ಸಿಕ್ಕದಾಗಿದೆ, ಕೆರೆಕುಂಟೆಯ ಮೂಲೆಗಳು ಅತಿಕ್ರಮಣಕ್ಕೆ ಒಳಗಾಗಿವೆ. ಸದ್ಯಕ್ಕೆ ಸರ್ಕಾರಿ ರಸ್ತೆಗಳೇ ಪಶುಪಾಲನೆಗೆ ನೆಲೆ. ಗೋಮಾಳ ಮಾಯಾ ಜಾನುವಾರು ಗಯಾ, ಗಾಂವಠಾಣಾ ಗುಳುಂ.

ಹೌದು, ಒಂದೇ ದಿನಕ್ಕೆ ಜಿಲ್ಲೆಯಲ್ಲಿ ಅಂದಾಜು 10 ಲಕ್ಷ ಲೀಟರ್‌ನಷ್ಟು ಹಾಲು ಉತ್ಪಾದನೆಯಾಗಿ, ಗ್ರಾಮೀಣರೇ ಅದನ್ನು ಬಳಕೆ ಮಾಡಿಕೊಂಡು ಉತ್ತಮ ಆರೋಗ್ಯ ಪಡದುಕೊಂಡಿದ್ದ ಕಾಲವೊಂದಿತ್ತು. ಅದರಲ್ಲೂ ದೇಶಿ ತಳಿಯ ಆಕಳು ಮತ್ತು ಧಾರವಾಡಿ ಎಮ್ಮೆ ಎಂದು ಕರೆಯುತ್ತಿದ್ದ ಉತ್ಕೃಷ್ಟ ಗುಣಮಟ್ಟದ ಹಾಲಿಗೆ ನಗರವಾಸಿಗಳಿಂದ ಭಾರಿ ಬೇಡಿಕೆ ಕೂಡ ಇತ್ತು. ಇದೆಲ್ಲದಕ್ಕೂ ಕಾರಣವಾಗಿದ್ದು ಅಂದಿನ ದೊಡ್ಡ ದೊಡ್ಡ ಗೋಮಾಳಗಳು, ಗಾಂವಠಾಣಾ ಅಡವಿಗಳು ಮತ್ತು ಸ್ವತ್ಛಂದವಾದ ಕೆರೆಕುಂಟೆಗಳ ಮಡಿಲುಗಳು.

ಜಿಲ್ಲೆಯ 144 ಗ್ರಾಪಂಗಳ ವ್ಯಾಪ್ತಿಯಲ್ಲಿನ ಅಂದಾಜು 15 ಸಾವಿರ ಎಕರೆ ಗೋಮಾಳ, 6500 ಎಕರೆ ಗಾಂವಠಾಣಾ ಹಾಗೂ 200 ಎಕರೆ ಖೇತ ಖರಾಬು ಭೂಮಿ ನುಂಗಣ್ಣರ ಪಾಲಾಗಿದ್ದು, ಇದೀಗ ಹೈನುಗಾರಿಕೆ ಮಾಡಬೇಕು ಎನ್ನುವವರು ಬರೀ ಸರ್ಕಾರಿ ರಸ್ತೆಗಳ ಇಕ್ಕೆಲಗಳಲ್ಲಿಯೇ ದನಕರುಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ.

ಅತಿಕ್ರಮಣದ ಹೊಸ್ತಿಲಲ್ಲಿ: ಕಂದಾಯ ಇಲಾಖೆ ಶತಮಾನಗಳ ಹಿಂದಿನಿಂದಲೂ ಎಲ್ಲೆಲ್ಲಿ ಗ್ರಾಮಗಳಿದ್ದವು ಮತ್ತು ಅವುಗಳ ವ್ಯಾಪ್ತಿಯಲ್ಲಿ ಎಷ್ಟೆಷ್ಟು ಭೂಮಿ ಇತ್ತು ಎಂಬುದನ್ನು ಅಳತೆ ಗೋಲು ಹಾಕಿ ಬಾಂದು ಕಲ್ಲುಗಳನ್ನು ನಿಲ್ಲಿಸಿಬಿಟ್ಟಿದೆ. ಕಾಲಾಂತರದಲ್ಲಿ ಮಂಡಳ ಪಂಚಾಯಿತಿ, ಗ್ರಾಪಂಗಳ ಅಧಿಕಾರ ಬರುತ್ತಿದ್ದಂತೆಯೇ ಆಯಾ ಗ್ರಾಮೀಣ ಮಟ್ಟದಲ್ಲಿಯೇ ಗಾಂವಠಾಣಾ ಜಮೀನನ್ನು ಜನರಿಗೆ ವಸತಿ ನಿವೇಶನಗಳಿಗಾಗಿ ಮಂಜೂರು ಮಾಡಿಕೊಟ್ಟಿವೆ. ಆದರೆ ಕಳೆದ 10 ವರ್ಷಗಳಲ್ಲಿ ಜಿಲ್ಲೆಯ 6500 ಎಕರೆಯಷ್ಟು ಗಾಂವಠಾಣಾ ಜಮೀನಿನ ಪೈಕಿ ಉಳಿದಿದ್ದು ಕೇವಲ 1300 ಎಕರೆ ಮಾತ್ರ. ಅದೂ ಕೂಡ ಇದೀಗ ಅತಿಕ್ರಮಣದ ಹೊಸ್ತಿಲಲ್ಲಿಯೇ ಇದೆ.

2013ರಲ್ಲಿ ಜಿಲ್ಲೆಯಲ್ಲಿ ಅತಿಕ್ರಮಣಕ್ಕೆ ಒಳಗಾಗಿದ್ದ 116 ಎಕರೆಯಷ್ಟು ಭೂಮಿಯನ್ನು ಜಿಲ್ಲಾಡಳಿತ ಮರಳಿ ಪಡೆದುಕೊಂಡಿತು. ಆದರೆ ಇದೀಗ ಮತ್ತದೇ ಜಮೀನು ಅತಿಕ್ರಮಣಕ್ಕೆ ಒಳಗಾಗಿದೆ. ಭೂಮಾಪನ ಕಚೇರಿಯಲ್ಲಿಯಲ್ಲಿನ ಹಳೆಯ ನಕಾಶಗಳೇ ಮಾಯವಾಗಿದ್ದರೆ, ಕೆಲವು ತಿದ್ದುಪಡಿಯಾಗಿವೆ. ಗೋಮಾಳದ ಗಡಿಗುರುತಿನ ಕಲ್ಲುಗಳೇ ಕಿತ್ತು ಮನೆಗಳ ಅಡಿಪಾಯ ಸೇರಿಕೊಂಡಿವೆ.

ಬಾರಿ ದನಗಳೇ ಇಲ್ಲ: ಪ್ರತಿ ಕೃಷಿ ಕುಟುಂಬದಲ್ಲಿ ಒಂದಿಷ್ಟು ಕಾಗಾರ (ಆಕಳು, ಎಮ್ಮೆ, ಕರು)ದನಗಳು ಇರುತ್ತಿದ್ದವು. ಕೃಷಿ ಚಟುವಟಿಕೆಗೆ ಎತ್ತು, ಹೋರಿಗಳನ್ನು ಹೊರತುಪಡಿಸಿ ಹೈನುಗಾರಿಕೆಗೆ ಬಳಕೆಯಾಗುತ್ತಿದ್ದ ಮತ್ತು ಉತ್ತಮ ಗೊಬ್ಬರ ಸಂಗ್ರಹಣೆಗೆ ಬೆನ್ನೆಲುಬಾಗಿದ್ದ ದೇಶಿ ಆಕಳು, ದೇಶಿ ಎಮ್ಮೆ ತಳಿಗಳನ್ನು ಕೃಷಿ ಕುಟುಂಬಗಳೇ ಪೋಷಣೆ ಮಾಡಿಕೊಂಡು ಬಂದಿದ್ದವು. ಇಂತಿಪ್ಪ ದನಗಳನ್ನು ಬಾರಿ ಅಥವಾ ಕಾಗಾರ ದನಗಳು ಎಂದು ಕರೆಯಲಾಗುತ್ತಿತ್ತು. ಒಂದು ಗ್ರಾಮದಲ್ಲಿ ಕನಿಷ್ಟ ಇಂತಹ 200 ದನಗಳು ಇರುತ್ತಿದ್ದವು. ಇವುಗಳನ್ನು ಒಬ್ಬ ವ್ಯಕ್ತಿ ಗುಡ್ಡ, ಗೋಮಾಳ, ಅಡವಿಗೆ ಮೇಯಲು ಹೊಡೆದುಕೊಂಡು ಹೋಗುತ್ತಿದ್ದ. ಆತನಿಗೆ ತಿಂಗಳಿಗೆ ಪ್ರತಿ ಹಸುವಿಗೆ ಇಂತಿಷ್ಟು ದರ ನಿಗದಿ ಮಾಡಲಾಗಿರುತ್ತಿತ್ತು. ಆದರೆ ಇದೀಗ ಯಾರ ಮನೆಯಲ್ಲೂ ದನಗಳು ಈ ಪ್ರಮಾಣದಲ್ಲಿ ಉಳಿದಿಲ್ಲ. ಇರುವ ದನಗಳನ್ನು ಮೇಯಿಸಲು ಗೋಮಾಳದ ಕೊರತೆ ಎದುರಾಗಿದ್ದರಿಂದ ಎಲ್ಲರೂ ಗೋಸಂಪತ್ತಿನಿಂದ ದೂರಾಗುತ್ತಿದ್ದಾರೆ.

ಅರೆಮಲೆನಾಡು ಪ್ರದೇಶವೆಂದೇ ಬಿಂಬಿತವಾಗಿರುವ ಧಾರವಾಡ, ಕಲಘಟಗಿ, ಅಳ್ನಾವರ ತಾಲೂಕಿನ ಪ್ರತಿ ಹಳ್ಳಿಗಳಲ್ಲಿಯೂ ಸಾವಿರ ಸಾವಿರ ಸಂಖ್ಯೆಯಲ್ಲಿ ಪಶು ಸಂಪತ್ತು ಇತ್ತು. ಇದಕ್ಕೆ ಬೆನ್ನೆಲುಬಾಗಿ ನಿಂತಿದ್ದು ಆಯಾ ಗ್ರಾಮಾಠಾಣಾ ವ್ಯಾಪ್ತಿಯಲ್ಲಿನ ಗೋಮಾಳ, ಗಾಂವಠಾಣಾ ಭೂಮಿ. ಆದರೆ ಇದೀಗ ಈ ಭೂಮಿ ಅತಿಕ್ರಮಣಕ್ಕೆ ಒಳಗಾಗಿದ್ದು, ಜನರಿಗೆ ಹೈನುಗಾರಿಕೆ ಕೇವಲ ಹಟ್ಟಿಯಲ್ಲಿಯೇ ದನಕಟ್ಟಿ ಮಾಡುವುದಕ್ಕೆ ಸೀಮಿತವಾಗುವಂತೆ ಮಾಡಿದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.