ಬೀದಿಬದಿ ವ್ಯಾಪಾರಿಗಳ ಬದುಕು ಚಿಂದಿ

ನಿತ್ಯ ದುಡಿಮೆ, ಆದಾಯ ಇಲ್ಲದೇ ಪರದಾಟ!ತುತ್ತು ಅನ್ನಕ್ಕೂ ಸಂಕಷ್ಟ ತಂದಿಟ್ಟ ಕೋವಿಡ್

Team Udayavani, May 11, 2021, 9:37 AM IST

fgjrtr

ಹುಬ್ಬಳ್ಳಿ: ಬೀದಿಬದಿ ವ್ಯಾಪಾರಿಗಳು, ವಿವಿಧ ತಿಂಡಿ-ತಿನಿಸುಗಳ ಮಾರಾಟ ಮಾಡುವವರಿಗೆ ಕೋವಿಡ್ ಪೆಟ್ಟು ನೀಡಿದ್ದು, ನಿತ್ಯದ ದುಡಿಮೆ, ಆದಾಯ ಇಲ್ಲದೆ ಪರದಾಡುತ್ತಿದ್ದಾರೆ. ಸಂಜೆಯಾದರೆ ಗಿರಮಿಟ್ಟು, ಬನ್‌-ಮಿರ್ಚಿ, ಎಗ್‌ ರೈಸ್‌, ಕುರುಕುಲು ತಿಂಡಿ ಮಾರಾಟ ಮಾಡಿ ಅಂದಿನ ಜೀವನ ನಡೆಸುತ್ತಿದ್ದವರು, ಸಣ್ಣ ಪುಟ್ಟ ಅಂಗಡಿಗಳನ್ನು ಇರಿಸಿಕೊಂಡವರು ಅಕ್ಷರಶಹಃ ಬೀದಿಗೆ ಬಂದಿದ್ದಾರೆ.

ತಮ್ಮದೇ ವಹಿವಾಟಿನಿಂದ ನಿತ್ಯದ ಆದಾಯದೊಂದಿಗೆ ಕುಟುಂಬ ನಿರ್ವಹಣೆ ಮಾಡುತ್ತಿದ್ದವರು ಇದೀಗ ಸಂಕಷ್ಟ ಎದುರಿಸುವಂತಾಗಿದೆ. ಕುಟುಂಬ ನಿರ್ವಹಣೆಗೂ ಕಷ್ಟ ಪಡುತ್ತಿದ್ದಾರೆ. ಕೋವಿಡ್‌-19 ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೀದಿಬದಿಯ ಬಹುತೇಕ ವ್ಯಾಪಾರ-ವಹಿವಾಟು ನಿಂತಿದೆ. ಹೊಟೇಲ್‌ಗ‌ಳಿಗೆ ಪಾರ್ಸಲ್‌ಗೆ ಅವಕಾಶ ನೀಡಲಾಗಿತ್ತಾದರೂ ಸಂಜೆ ವೇಳೆ ತಳ್ಳುಗಾಡಿ, ಸಣ್ಣ ಮಳಿಗೆಯಲ್ಲಿ ವಿವಿಧ ತಿಂಡಿ-ತಿನಿಸು, ಇನ್ನಿತರೆ ಪದಾರ್ಥಗಳ ಮಾರಾಟಗಾರರು ಪಾರ್ಸಲ್‌ ಸಾಧ್ಯವಾಗದೆ ತಮ್ಮ ವ್ಯಾಪಾರವನ್ನೇ ಬಂದ್‌ ಮಾಡಿಕೊಳ್ಳಬೇಕಾಗಿ ಬಂದಿದ್ದರಿಂದ ಕುಟುಂಬ ನಿರ್ವಹಣೆಗೆ ಬೇರೆ ವಹಿವಾಟಿನತ್ತ ಮುಖ ಮಾಡುವಂತಾಗಿದೆ.

ತರಕಾರಿ ಮಾರಾಟ: ಈಗ ಎಲ್ಲವೂ ಬಂದ್‌ ಆದ ಹಿನ್ನೆಲೆಯಲ್ಲಿ ಜೀವನ ನಡೆಸುವುದು, ಅಂಗಡಿ ಬಾಡಿಗೆ ಕಟ್ಟುವುದು ಕಷ್ಟಕರವಾಗಿದ್ದು, ಇದರಿಂದ ಅನ್ಯ ಮಾರ್ಗವಿಲ್ಲದೇ ಬಹುತೇಕರು ತರಕಾರಿ ಮಾರಾಟಕ್ಕೆ ಮುಂದಾಗಿದ್ದಾರೆ. ನಗರದಲ್ಲಿ ಸಂಜೆಯಾದರೆ ಗಿರಮಿಟ್ಟು, ಪಡ್ಡು ಮಾರಾಟ ಮಾಡುತ್ತಿದ್ದವರು ಇಂದು ಅದೇ ಗಾಡಿಯಲ್ಲಿ ತರಕಾರಿ ಮಾರಲು ಮುಂದಾಗಿದ್ದಾರೆ. ಇನ್ನೂ ಕೆಲವರು ರಸ್ತೆ ಅಕ್ಕಪಕ್ಕದಲ್ಲಿ ತರಕಾರಿ ಮಾರಲು ಮುಂದಾಗಿದ್ದಾರೆ.

ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ತರಕಾರಿ ಮಾರಾಟಕ್ಕೆ ಸರಕಾರ ಅವಕಾಶ ನೀಡಿದ್ದು, ಪ್ರತಿದಿನ ಬೆಳಿಗ್ಗೆ ವಾಹನ ತೆಗೆದುಕೊಂಡು ತರಕಾರಿ ಖರೀದಿಸಿ ಬರಲು ಅವಕಾಶ ಮಾಡಿ ಕೊಡಿ ಎನ್ನುವುದು ತರಕಾರಿ ಮಾರಾಟಗಾರರ ಒತ್ತಾಯವಾಗಿದೆ. ವಾಹನಗಳು ರಸ್ತೆಗಿಳಿದರೆ ಪೊಲೀಸರು ಅವುಗಳನ್ನು ಸೀಜ್‌ ಮಾಡುತ್ತಿದ್ದು, ಖರೀದಿ ಇದ್ದವರು ನಡೆದುಕೊಂಡು ಬರಬೇಕೆಂದು ಹೇಳುತ್ತಿದ್ದರಿಂದ ಎಪಿಎಂಸಿಗೆ ಹೋಗಿ ತರಕಾರಿ ತಂದು ಮಾರಾಟ ಮಾಡುವರಿಗೆ ಸಮಸ್ಯೆ ಆಗುತ್ತಿದೆ ಎಂಬುದು ಕೆಲವರ ಅನಿಸಿಕೆ.

ವರದಿ :ಬಸವರಾಜ ಹೂಗಾರ

 

 

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.