ನೀರಾವರಿಗಾಗಿ ಸಂಘ ಬಲಪಡಿಸಿ


Team Udayavani, Jul 22, 2019, 9:47 AM IST

hubali-tdy-2

ಹುಬ್ಬಳ್ಳಿ: ರೈತರು, ಅಧಿಕಾರಿಗಳು, ಸಂಘ-ಸಂಸ್ಥೆಗಳವರು ಶ್ರಮದಾನ ಮೂಲಕ ಕಾಲುವೆಗಳಲ್ಲಿನ ಹೂಳು, ಕಸ-ಕಡ್ಡಿ ಸ್ವಚ್ಛಗೊಳಿಸಿದರು.

ಹುಬ್ಬಳ್ಳಿ: ಸಮರ್ಪಕ ನೀರಾವರಿಗಾಗಿ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲಪಡಿಸುವುದು ಅವಶ್ಯ ವಿದೆ ಎಂದು ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಅಭಿಪ್ರಾಯಪಟ್ಟರು.

ನರಗುಂದ ಚಳವಳಿಯ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರದ ಜಲ ಸಂಪನ್ಮೂಲ ಇಲಾಖೆಯ ವಾಲ್ಮಿ ಸಂಸ್ಥೆ, ಮಲಪ್ರಭಾ ಬಲದಂಡೆ ಕಾಲುವೆಯ ನರಗುಂದ ವಿಭಾಗ ಮತ್ತು ಮಲಪ್ರಭಾ ಸಹಕಾರ ಸಂಘಗಳ ಮಹಾಮಂಡಳ ಹಾಗೂ ವೀರಪ್ಪ ಕಡ್ಲೇಕೊಪ್ಪ ಹುತಾತ್ಮ ಸ್ಮಾರಕ ಸಮಿತಿ ಆಶ್ರಯದಲ್ಲಿ ಚಿಕ್ಕನರಗುಂದಲ್ಲಿ ರವಿವಾರ ಹಮ್ಮಿಕೊಂಡಿದ್ದ ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ ಅಭಿಯಾನ ಹಾಗೂ ಕಾಲುವೆಗಳ ಸ್ವಚ್ಛಗೊಳಿಸುವ ಶ್ರಮದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನೀರು ಬಳಕೆದಾರ ಸಹಕಾರ ಸಂಘಗಳು ಹಾಗೂ ನೀರಾವರಿ ಇಲಾಖೆ ಕೈಜೋಡಿಸಿ ಕೆಲಸ ಮಾಡಿದರೆ ರಾಜ್ಯದಲ್ಲಿ ನೀರಾವರಿ ವ್ಯವಸ್ಥೆ ಒಂದು ವರದಾನವಾಗುವುದು ಎಂದರು.

ಮಲಪ್ರಭಾ ಯೋಜನೆ ಅಧೀಕ್ಷಕ ಅಭಿಯಂತರ ರಾಜೇಶ ಮಾತನಾಡಿ, ನೀರಾವರಿ ಜಾಲ ಸುಸ್ಥಿತಿಯಲ್ಲಿಡಲು ನೀರಾವರಿ ಅಧಿಕಾರಿಗಳೊಂದಿಗೆ ಸಂಘಗಳು ಜತೆಗೂಡಿ ಕೆಲಸ ಮಾಡಬೇಕು ಎಂದರು.

ಮಲಪ್ರಭಾ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷ ಬಿ.ವೈ. ಕಾಡಪ್ಪನವರ ಮಾತನಾಡಿ, ಜನ ಸಮುದಾಯಗಳಿಗೆ ಸಂಕಷ್ಟ ಬಂದಾಗ ಚಳವಳಿ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸಿದ ಇತಿಹಾಸ ನರಗುಂದ ರೈತ ಚಳವಳಿಗಿದೆ. ಪ್ರಸ್ತುತ ಜಲ ಸಂಕಷ್ಟದ ಸಂದರ್ಭದಲ್ಲಿ ರೈತ ಸಂಘಟನೆಗಳು ನೀರಾವರಿ ಇಲಾಖೆಯೊಂದಿಗೆ ಕೈಜೋಡಿಸಿ ಹೊಸ ಮಾದರಿಗಳನ್ನು ನಿರ್ಮಿಸಬಲ್ಲವು ಎಂದರು.

ಮುಂಬರುವ ದಿನಗಳಲಿ ಪ್ರತಿ 15 ದಿನಗಳಿಗೊಮ್ಮೆ ತಮ್ಮ ಗ್ರಾಮದ ಕಾಲುವೆಗಳನ್ನು ಸ್ವಚ್ಛಗೊಳಿಸುವುದಾಗಿ ಇದೇ ಸಂದರ್ಭದಲ್ಲಿ ರೈತರು ಸ್ವಯಂಪ್ರೇರಣೆಯಿಂದ ಪ್ರತಿಜ್ಞೆ ಮಾಡಿದರು.

ಮಲಪ್ರಭಾ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ಮಾಜಿ ಅಧ್ಯಕ್ಷ ಸದುಗೌಡ ಪಾಟೀಲ, ಖುದ್ದಣ್ಣನವರ, ಶೇಖಪ್ಪ ತಿರ್ಲಾಪುರ, ಜಿ.ಆರ್‌. ತಿಮ್ಮಾರೆಡ್ಡಿ, ಎಚ್.ಎನ್‌. ಹಳಕಟ್ಟಿ, ಶಂಕ್ರಣ್ಣ ಯರಗಟ್ಟಿ, ಬಿ.ಎಂ. ರಾಯರೆಡ್ಡಿ, ನರಗುಂದ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಎಸ್‌.ಎಲ್. ಪಾಟೀಲ, ಮೋನಿ ಪಾಟೀಲ ಹಾಗೂ ಮಲಪ್ರಭಾ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ಉಪಾಧ್ಯಕ್ಷರು, ನಿರ್ದೇಶಕರು, ಹಾಳಕುಸುಗಲ್, ಅಳಗವಾಡಿ, ಚಿಕ್ಕನರಗುಂದ ಮತ್ತು ಸುತ್ತಮುತ್ತಲಿನ ಗ್ರಾಮದ ನೀರು ಬಳಕೆದಾರರು ಪಾಲ್ಗೊಂಡಿದ್ದರು.

ಮಲಪ್ರಭಾ ಬಲದಂಡೆ ಕಾಲುವೆ ನರಗುಂದ ಉಪಕಾಲುವೆ 23ನೇ ಹಂಚುಕಾಲುವೆ 2ಆರ್‌ ಕಾಲುವೆ ಅಡಿಯಲ್ಲಿ ಬರುವ ಕಾಲುವೆಗಳನ್ನು ಸ್ವಚ್ಛಗೊಳಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನೀರಾವರಿ ಇಲಾಖೆ ಮತ್ತು ವಾಲ್ಮಿ ಸಂಸ್ಥೆ ಅಧಿಕಾರಿಗಳು ಕಾಲುವೆಯಲ್ಲಿ ತುಂಬಿದ್ದ ಹೂಳು, ಕಸಕಡ್ಡಿ, ಕಂಟಿಗಳನ್ನು ತೆರವುಗೊಳಿಸಿ ಕಾಲುವೆ ಸ್ವಚ್ಛಗೊಳಿಸಿದರು.

ವಾಲ್ಮಿಯ ಸಹಾಯಕ ಅಭಿಯಂತ ಮಹದೇವಗೌಡ ಹುತ್ತನಗೌಡರ ಪ್ರಾಸ್ತಾವಿಕ ಮಾತನಾಡಿದರು. ಸಹ ಪ್ರಾಧ್ಯಾಪಕ ಕೃಷ್ಣಾಜಿರಾವ್‌ ವಂದಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.