ನೆರವಿನ ನೆಪ ಹೇಳಿ ರಸ್ತೆಗಿಳಿದ್ರೆ ವಾಹನಗಳ ಸೀಜ್‌


Team Udayavani, Apr 16, 2020, 11:30 AM IST

ನೆರವಿನ ನೆಪ ಹೇಳಿ ರಸ್ತೆಗಿಳಿದ್ರೆ ವಾಹನಗಳ ಸೀಜ್‌

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಆಹಾರ, ಉಪಹಾರ, ಹಣ್ಣು- ಹಂಪಲು, ಕುಡಿಯುವ ನೀರು ಹಂಚುವುದು, ನೆರವಿನ ನೆಪ ಹೇಳಿ ಓಣಿ ಓಣಿಗಳಲ್ಲಿ ತಿರುಗುವುದು ಇನ್ನು ಬಂದ್‌. ದೇಶದಲ್ಲೆಡೆ ಕರೋನಾ ವೈರಸ್‌ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್‌ಡೌನ್‌ ಘೋಷಣೆ ಮಾಡಿ ಆದೇಶ ಹೊರಬಿದ್ದಾಗಿನಿಂದ ಪ್ರತಿದಿನವೂ ಹಲವಾರು ಯುವಕರ ತಂಡಗಳು ವಿವಿಧ ಸಾಮಗ್ರಿ ಹಂಚುವ ನೆಪದಲ್ಲಿ ಗಲ್ಲಿ ಗಲ್ಲಿ ಸುತ್ತುತ್ತಿದ್ದರು. ಗಾಡಿಗಳಲ್ಲಿ ಆಹಾರದ ಚೀಲ, ಕುಡಿಯುವ ನೀರಿನ ಚೀಲ, ಹಣ್ಣುಗಳನ್ನಿಟ್ಟುಕೊಂಡು ನಗರದಲ್ಲಿ ಸಿಗುವ ನಿರ್ಗತಿಕರಿಗೆ, ಭಿಕ್ಷುಕರಿಗೆ, ವೃದ್ಧರಿಗೆ ವಿತರಿಸುವ ನೆಪದಲ್ಲಿ ತಿರುಗುತ್ತಿದ್ದರು. ಕೆಲವರು ತಮ್ಮ ವಾಹನಗಳಿಗೆ ತುರ್ತು ಸೇವೆ ಎಂದೆಲ್ಲಾ ಬೋರ್ಡ್‌ ಹಾಕಿಕೊಂಡು ತಿರುಗುತ್ತಿದ್ದರು.

ಸಾರ್ವಜನಿಕರು ಇನ್ನು ಯಾವುದನ್ನೂ ಹಂಚುವ ಹಾಗಿಲ್ಲ. ಏನೇ ನೀಡುವುದಿದ್ದರೂ ಅದನ್ನು ಜಿಲ್ಲಾಡಳಿತ ಆರಂಭಿಸಿರುವ ಕೇಂದ್ರಕ್ಕೆ ತಂದು ನೀಡಬೇಕು. ಅಲ್ಲಿ ನೀವು ಹೇಳಿದ ಸ್ಥಳಗಳಿಗೆ ಇಲ್ಲವೇ ಅವಶ್ಯವಿರುವವರಿಗೆ ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ಜನರಿಗೆ ವಿತರಿಸಲಾಗುವುದೆಂದು ಆದೇಶ ಹೊರಡಿಸಿದ ನಂತರ ನಗರದಲ್ಲಿ ಆಹಾರ, ಉಪಹಾರ, ಕುಡಿಯುವ ನೀರು ಹಂಚುವವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಹಂಚಿಕೆ ನೆಪದಲ್ಲಿ ನಗರ ಸುತ್ತುವವರ ಸಂಖ್ಯೆ ಇಲ್ಲವಾಗುತ್ತಿದೆ.

ವಾಹನಗಳು ಸೀಜ್‌: ಸುಖಾ ಸುಮ್ಮನೆ ಲಾಕ್‌ ಡೌನ್‌ ಆದೇಶ ಉಲ್ಲಂಘಿಸಿ ಎಲ್ಲೆಂದರಲ್ಲಿ ತಿರುಗುತ್ತಿದ್ದವರ ಮೇಲೆ ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ನೂರಾರು ವಾಹನಗಳನ್ನು ಸೀಜ್‌ ಮಾಡಿದ್ದಾರೆ. ತುರ್ತು ಸೇವೆಗೆಂದು ಬರುವ ವಿವಿಧ ವಾಹನಗಳನ್ನು ತಪಾಸಿಸಿ ಅವಶ್ಯಕತೆ ಇದ್ದಲ್ಲಿ ಅಂತಹವುಗಳನ್ನು ಬಿಡುತ್ತಿದ್ದು, ಇನ್ನುಳಿದವುಗಳನ್ನು ಬಿಡದೇ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಹೆಚ್ಚಿದ ಆಟೋರಿಕ್ಷಾಗಳ ಸಂಚಾರ:ನಗರದಲ್ಲಿ ಆಟೋರಿಕ್ಷಾಗಳ ಸಂಚಾರ ನಿಧಾನಕ್ಕೆ ಹೆಚ್ಚುತ್ತಿದೆ. ಬೆಳಗಿನ ಹೊತ್ತಿನಲ್ಲಿ ಹೆಚ್ಚಿನ ಆಟೋರಿಕ್ಷಾಗಳು ರಸ್ತೆಗಿಳಿಯುತ್ತಿವೆ. ನಗರದ ವಿಶ್ವೇಶ್ವರ ನಗರ, ವಿಜಯನಗರ, ದೇವಾಂಗಪೇಟೆ, ಗೋಕುಲ ರಸ್ತೆ, ಗಾಂಧಿ ನಗರ, ಕೇಶ್ವಾಪುರ, ಕುಸುಗಲ್ಲ ರಸ್ತೆ, ಗೋಪನಕೊಪ್ಪ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಆಟೋರಿಕ್ಷಾಗಳ ಸಂಚಾರ ನಡೆಯುತ್ತಿವೆ. ಆಟೋರಿಕ್ಷಾಗಳಲ್ಲೂ ಕೂಡಾ ತುರ್ತು ಸೇವೆಗೆಂದು ಸಂಚರಿಸುವವರಿದ್ದು, ಆಸ್ಪತ್ರೆಗೆ, ಬ್ಯಾಂಕ್‌ಗೆ ಹಾಗೂ ಉದ್ಯೋಗಕ್ಕೆ ತೆರಳುವವರು ಸಹ ಆಟೋರಿಕ್ಷಾಗಳನ್ನು ಬುಕ್‌ ಮಾಡಿಕೊಂಡಿದ್ದು, ಅಂತಹವರನ್ನು ಬಿಡಲುಆಟೋರಿಕ್ಷಾಗಳು ಸಂಚರಿಸುತ್ತಿವೆ.

ಅಲ್ಲಲ್ಲಿ ತರಕಾರಿ ಮಾರಾಟ: ನಗರದ ದೇಶಪಾಂಡೆ ನಗರ, ಕೇಶ್ವಾಪುರ, ವಿಶ್ವೇಶ್ವರನಗರ, ಗೋಕುಲ ರಸ್ತೆ, ಅಪೂರ್ವ ನಗರ, ರಾಧಾಕೃಷ್ಣ ನಗರ, ಗೋಪನಕೊಪ್ಪ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ತರಕಾರಿ, ಹಣ್ಣುಗಳಮಾರಾಟಗಾರರು ರಸ್ತೆ ಬದಿ ಕುಳಿತಿದ್ದು,ಸಾರ್ವಜನಿಕರು ಕೂಡಾ ಸಿಕ್ಕಷ್ಟು ತರಕಾರಿ ತೆಗೆದುಕೊಂಡು ಹೋಗುತ್ತಿರುವುದು ಕಂಡು ಬಂತು.

ಕಂಟೇನ್ಮೆಂಟ್‌ ಪ್ರದೇಶದಲ್ಲಿ ಸಂಚಾರ :ಇಲ್ಲಿನ ಮುಲ್ಲಾ ಓಣಿಯಲ್ಲಿ  ಕೋವಿಡ್ 19 ವೈರಸ್‌ ಪಾಜಿಟಿವ್‌ ಪ್ರಕರಣಗಳು ಹೆಚ್ಚಾಗಿದ್ದು, ತದ ನಿಮಿತ್ತ ಜಿಲ್ಲಾಡಳಿತಮೂರು ಕಿಮೀ ವ್ಯಾಪ್ತಿ ಪ್ರದೇಶವನ್ನುಕಂಟೇನ್ಮೆಂಟ್‌ ಪ್ರದೇಶವೆಂದು ಘೋಷಿಸಿ ಸಂಪೂರ್ಣ ನಾಕಾ ಬಂದಿ ಹಾಕಿದೆ. ಆದರೂ ಕೂಡಾ ರಸ್ತೆಯಲ್ಲಿಜನರು ಕಾಣಿಸಿಕೊಳ್ಳುತ್ತಿದ್ದು, ಅವಶ್ಯಕ ವಸ್ತುಗಳ ಖರೀದಿಗೆ ಜನರು ಹೊರ ಬರುತ್ತಿರುವುದು ಕಂಡು ಬರುತ್ತಿದೆ.

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.