ವಿದ್ಯಾರ್ಥಿಗಳ ಕನಸು ನನಸಾಗಿಸಿ: ಪ್ರೊ| ಗಣೇಶ


Team Udayavani, Aug 13, 2017, 11:59 AM IST

hub6.jpg

ಧಾರವಾಡ: ವಿದ್ಯಾರ್ಥಿಗಳು ಕಾಣುವ ಕನಸುಗಳನ್ನು ಸಾಕಾರಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹಿರಿಯ ಭಾಷಾತಜ್ಞ ಪದ್ಮಶ್ರೀ ಪ್ರೊ| ಗಣೇಶ ಎನ್‌. ದೇವಿ ಹೇಳಿದರು. ಜೆಎಸ್‌ಎಸ್‌ ಸನ್ನಿ ಧಿ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾ ಪಿ. ಹಂಚಿನಮನಿ ಸ್ವತಂತ್ರ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಸಂಘ, ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಈಗಿನ ಶಿಕ್ಷಣ ಪದ್ಧತಿ ಹಾಗೂ ಈ ಹಿಂದಿನ ಶಿಕ್ಷಣ ಪದ್ಧತಿಗೆ ಅಜಗಜಾಂತರ ವ್ಯತ್ಯಾಸವಿದೆ. ಎಲ್ಲ ವಿಷಯವನ್ನು ಎಲ್ಲರೂ ತಿಳಿದುಕೊಂಡರೆ ಮಾತ್ರ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದರು. ಇಂದು ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳು ಮಾನಸಿಕ ಕ್ರೂರತೆ ನೀಡುವ ತಾಣಗಳಾಗಿವೆ.

ಅವುಗಳನ್ನು ಪರಿವರ್ತಿಸುವ ಜವಾಬ್ದಾರಿ ನಮ್ಮ ಯುವ ಜನಾಂಗದ ಮೇಲಿದ್ದು, ಅವುಗಳನ್ನು ಸಮರ್ಥವಾಗಿ ಎದುರಿಸಿ, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳುವ ಮೂಲಕ ಶಿಸ್ತು ಹಾಗೂ ಕ್ರಮಬದ್ಧವಾದ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಪರಿಸರ ಹಾಗೂ ನಿಸರ್ಗದ ಅಭಿವೃದ್ಧಿಗೆ ಜ್ಞಾನ ಬಳಕೆಯಾಗಬೇಕೇ ಹೊರತು ಅದರ ನಾಶಕ್ಕಲ್ಲ. ಯುದ್ಧ ನಡೆದರೆ ಅದರ ಪರಿಣಾಮ ಬಹಳಷ್ಟು ಗಂಭೀರವಾಗಲಿದೆ. ಇದೀಗ ಭಾರತ ಸೇರಿದಂತೆ ಅನೇಕ ದೇಶದಲ್ಲಿ ಅಸುರಕ್ಷಿತತೆ ತಾಂಡವಾಡುತ್ತಿದ್ದು, ಅಪರಾಧ ಹಾಗೂ ಅಪರಾಧ ಮನೋಭಾವನೆ ಗಣನೀಯವಾಗಿ ಹೆಚ್ಚುತ್ತಿದೆ.

ಇದನ್ನು ಬದಲಿಸಲು ನಾವೆಲ್ಲ ಮುಂದಾಗಬೇಕು. ಜಗತ್ತನ್ನು ಸಂತಸದತ್ತ ಕೊಂಡೊಯ್ಯಲು ಎಲ್ಲರೂ ಶ್ರಮಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಎಸ್‌.ಎ. ಜೋಶಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸುತ್ತಿದ್ದು, ಮಕ್ಕಳ ಭವಿಷ್ಯ ರೂಪಿಸಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ.

ಮಕ್ಕಳಿಗೆ ಹಣ ಹಾಗೂ ಮೊಬೈಲ್‌ ನೀಡದೆ ಅವರ ಕಠಿಣ ಪರಿಶ್ರಮಕ್ಕೆ ಪ್ರೋತ್ಸಾಹಿಸಬೇಕು. ಜೀವನ ಮೌಲ್ಯಗಳು ಇಂದು ಕ್ಷೀಣಿಸುತ್ತಿದ್ದು, ಅವುಗಳನ್ನು ಕಲಿಸಬೇಕು ಎಂದು ಹೇಳಿದರು. ಕಾಲೇಜು ವಿದ್ಯಾರ್ಥಿ ಅಮೋಘ ಮಲಕಣ್ಣವರ ರಚಿಸಿದ “ಮಿಡಿದ ಮನ’ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು. 

ಶಾಂತೇಶ ಎಜುಕೇಷನ್‌ ಸೊಸೈಟಿ ಕಾರ್ಯಾಧ್ಯಕ್ಷ ಪ್ರೊ| ಪಿ.ಆರ್‌. ಹಂಚಿನಮನಿ, ಕಾರ್ಯದರ್ಶಿ ಮನೋಜ ಹಂಚಿನಮನಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಸಂದೇಶ ಗಡ್ಡಿ, ಪ್ರತಿಭಾ ಇದ್ದರು. ಶಾಲಿನಿ ಕನಕಾಪುರ ಸ್ವಾಗತಿಸಿದರು. ತರುಣ ಹಾಗೂ ಪೂರ್ವಿ ನಿರೂಪಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.  

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.