ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Sep 13, 2019, 10:43 AM IST
ಕಲಘಟಗಿ: ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ವಿದ್ಯಾರ್ಥಿಗಳ ಮನವೊಲಿಸಿದ ಪೊಲೀಸ್ ಸಿಬ್ಬಂದಿ.
ಕಲಘಟಗಿ: ಪಟ್ಟಣದಿಂದ ಧಾರವಾಡಕ್ಕೆ ದಿನಂಪ್ರತಿ ಹೊರಡುವ ಬಸ್ಗಳು ಸರಿಯಾದ ಸಮಯಕ್ಕೆ ಬಾರದಿರುವುದನ್ನು ಖಂಡಿಸಿ ಬಸ್ ನಿಲ್ದಾಣದ ಎದುರು ಧಾರವಾಡ ಮಾರ್ಗವಾಗಿ ತೆರಳುವ ಎಲ್ಲ ಬಸ್ಗಳನ್ನು ತಡೆದು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಕಳೆದ ಒಂದು ವರ್ಷದಿಂದ ಸಮಯಕ್ಕೆ ಸರಿಯಾಗಿ ಬಸ್ ಬಾರದಿರುವುದು, ಮುನ್ಸೂಚನೆ ಇಲ್ಲದೇ ಏಕಾಏಕಿ ಬಸ್ಗಳನ್ನು ರದ್ದು ಗೊಳಿಸುವಿಕೆ ಸೇರಿದಂತೆ ಹಲವಾರು ಸಮಸ್ಯೆಗಳಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೆಲ್ಲರೂ ರೋಸಿ ಹೋಗಿದ್ದರು. ಸಮಸ್ಯೆಗಳ ಪರಿಹಾರಕ್ಕೆ ಹತ್ತಾರು ಬಾರಿ ಲಿಖೀತ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಬಸ್ ತಡೆದು ಆಕ್ರೋಶ ಹೊರಹಾಕಿದರು.
ಪ್ರತಿನಿತ್ಯವೂ ಶಾಲೆ-ಕಾಲೇಜುಗಳಿಗೆ ತಡವಾಗಿ ಹೋಗುವುದರಿಂದ ವಿದ್ಯಾರ್ಜನೆಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ಬೆಳಗಿನ ಸಮಯದಲ್ಲಿ ಸರಿಯಾಗಿ ಬಸ್ಗಳು ಬಾರದಿರುವುದರಿಂದ ಒಂದೊಂದು ಬಸ್ಸಿನಲ್ಲಿ ಮೂರು ಬಸ್ಸಿನಷ್ಟು ಪ್ರಯಾಣಿಕರು ಸಂಚರಿಸುವಂತಾಗಿದೆ. ಅನಿರೀಕ್ಷಿತ ಹೋರಾಟ ಮಾಡಿದಾಗ ಕಾನೂನು ಕ್ರಮ ಜರುಗಿಸುವ ಪೊಲೀಸರ ಎಚ್ಚರಿಕೆಯ ಭಯವೂ ಇದೆ ಎಂದು ವಿದ್ಯಾರ್ಥಿಗಳು ಮಾಧ್ಯಮದೆದುರು ಅಳಲು ತೋಡಿಕೊಂಡರು.
ತತ್ಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸ್ ಸಿಬ್ಬಂದಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಆದರೆ, ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಶನಿವಾರ (ಸೆ.14) ಮತ್ತೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ