ಜಲಜೀವನ ಮಿಷನ್‌ ಯಶಸ್ವಿ ಅನುಷ್ಠಾನ: ಡಾ| ಇಟ್ನಾಳ

ತಾಂತ್ರಿಕ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ

Team Udayavani, Apr 12, 2022, 2:15 PM IST

11

ಧಾರವಾಡ: ಜಲಜೀವನ ಮಿಷನ್‌ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರಿನ ನಳದ ಸಂಪರ್ಕ ಕಲ್ಪಿಸುವ ಕಾರ್ಯ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಪಂ ಸಿಇಒ ಡಾ| ಸುರೇಶ ಇಟ್ನಾಳ ಹೇಳಿದರು.

ರಾಯಾಪುರದ ಖಾಸಗಿ ಹೋಟೆಲ್‌ನಲ್ಲಿ ಜಿಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದೊಂದಿಗೆ ಜಲಜೀವನ ಮಿಷನ್‌ ಯೋಜನೆ ಅನುಷ್ಠಾನ ಕುರಿತು ತಾಂತ್ರಿಕ ಸಿಬ್ಬಂದಿಗೆ ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಲಜೀವನ ಮಿಷನ್‌ ಯೋಜನೆಯ ಭೌತಿಕ ಅನುಷ್ಠಾನದ ಸಂದರ್ಭದಲ್ಲಿ ಎದುರಾಗಬಹುದಾದ ತಾಂತ್ರಿಕ ಸಮಸ್ಯೆಗಳಿಗೆ ನಿಖರ ಪರಿಹಾರ ಕಂಡುಕೊಳ್ಳಲು ತರಬೇತಿ ಕಾರ್ಯಾಗಾರ ಅಗತ್ಯವಾಗಿದೆ ಎಂದರು.

ಜಲಮೂಲ ಸುಸ್ಥಿರವಾಗಿಟ್ಟು, ನೀರು ಮಲಿನವಾಗದಂತೆ ನೋಡಿಕೊಳ್ಳಬೇಕು. ತ್ಯಾಜ್ಯ ನೀರಿನ ನಿರ್ವಹಣೆ, ಮರುಬಳಕೆ, ನೀರು ಇಂಗಿಸಿ ಅಂತರ್ಜಲ ಮಟ್ಟ ಹೆಚ್ಚಿಸುವುದು ಇಂದಿನ ಅಗತ್ಯವಾಗಿದೆ. ನೀರಿನ ಭದ್ರತೆ, ಶುದ್ಧ ಕುಡಿಯುವ ನೀರಿನ ಪೂರೈಕೆ ನಮ್ಮೆಲ್ಲರ ಹೊಣೆಯಾಗಿದೆ. ನೀರಿನ ಗುಣಮಟ್ಟದ ಪರೀûಾ ಪ್ರಯೋಗಾಲಯ ಧಾರವಾಡದಲ್ಲಿದೆ. ಗ್ರಾಮೀಣ ನೀರು ನಿರ್ವಹಣಾ ಸಮಿತಿಗಳು ಪ್ರಯೋಗಾಲಯದ ಬಳಕೆ ಮಾಡಿಕೊಳ್ಳಲು ಉತ್ತೇಜಿಸಬೇಕು ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೆಳಗಾವಿ ವೃತ್ತದ ಅಧೀಕ್ಷಕ ಅಭಿಯಂತ ಸಿ.ಜಿ. ಹುಲಮನಿ ಮಾತನಾಡಿ, ಜಲಜೀವನ್‌ ಮಿಷನ್‌ ಯೋಜನೆಯಡಿ 2023ರೊಳಗೆ ಗ್ರಾಮೀಣದ ಎಲ್ಲಾ ಮನೆಗೂ ನೀರು ತಲುಪಿಸುವ ಗುರಿ ಹೊಂದಲಾಗಿದೆ. ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿವೃತ್ತ ಅಧೀಕ್ಷಕ ಎಂಜಿನಿಯರ್‌ ಚಂದ್ರಶೇಖರ ಮಸಗುಪ್ಪಿ ಹಾಗೂ ವೆಂಕಟೇಶ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಆರ್‌.ವಿ. ಮುನವಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಡಾ| ಗಾಯಿತ್ರಿ ದೇಶಪಾಂಡೆ ನಾಡಗೀತೆ ಪ್ರಸ್ತುತಪಡಿಸಿದರು. ಶಿವಪುತ್ರ ಮಠಪತಿ ಸ್ವಾಗತಿಸಿದರು. ಜಿಲ್ಲಾ ಯೋಜನೆಯ ವ್ಯವಸ್ಥಾಪಕಿ ಮಂಜುಳಾ ಹೂಗಾರ ನಿರೂಪಿಸಿದರು. ಜಗದೀಶ ಪಾಟೀಲ ವಂದಿಸಿದರು.

 

ಗ್ರಾಮಗಳ ಪ್ರತಿ ಮನೆಗೂ ನಳದ ಸಂಪರ್ಕ ಕಲ್ಪಿಸುವ ಜತೆಗೆ ಪ್ರತಿದಿನ ಕುಡಿಯುವ ನೀರು ಸರಬರಾಜು ಮಾಡುವುದು ಮುಖ್ಯವಾಗಿದೆ. ಸದ್ಯ ಜಿಲ್ಲೆಯ 103 ಜನವಸತಿಗಳಲ್ಲಿ ಈಗಾಗಲೇ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ನರೇಗಾ ಯೋಜನೆಯಡಿ ಜಿಲ್ಲೆಯ 177 ಶಾಲಾ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಲಾಗುತ್ತಿದೆ ಎಂದರು. -ಡಾ| ಸುರೇಶ ಇಟ್ನಾಳ, ಜಿಪಂ ಸಿಇಒ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.