ಕೋವಿಡ್ ಸೋಂಕಿತ ವೃದ್ಧನಿಗೆ ಕಿಮ್ಸ್ನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ
Team Udayavani, Jun 1, 2020, 4:35 AM IST
ಹುಬ್ಬಳ್ಳಿ: ಗ್ಯಾಂಗ್ರೀನ್ನಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ವೃದ್ಧರೊಬ್ಬರಿಗೆ ಇಲ್ಲಿನ ಕಿಮ್ಸ್ ವೈದ್ಯರು ರವಿವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ದಾವಣಗೆರೆ ಮೂಲದ 69 ವಯಸ್ಸಿನ ವೃದ್ಧರೊಬ್ಬರು ಕೋವಿಡ್ ಸೋಂಕಿನಿಂದ 13 ದಿನಗಳ ಹಿಂದೆ ಅಲ್ಲಿನ ಆಸ್ಪತ್ರೆ ದಾಖಲಾಗಿದ್ದರು. ಆದರೆ ಕಳೆದ ನಾಲ್ಕು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದು, ಕಾಲು ಕಪ್ಪುಗಟ್ಟಿತ್ತು. ಹೀಗಾಗಿ ಅಲ್ಲಿನ ವೈದ್ಯರು ಕಿಮ್ಸ್ಗೆ ಶಿಫಾರಸು ಮಾಡಿದ್ದು, ಗುರುವಾರ ಕಿಮ್ಸ್ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಕಿಮ್ಸ್ ವೈದ್ಯರು ಕಾಲಿನ ಪರೀಕ್ಷೆ, ಸ್ಕ್ಯಾನ್ ಮಾಡಿದಾಗ ಗ್ಯಾಂಗ್ರೀನ್ ಆಗಿರುವುದು ದೃಢಪಟ್ಟಿತ್ತು. ಕೋವಿಡ್ ಸೋಂಕಿನ ನಡುವೆಯೂ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ.
ಡಾ| ಎಸ್.ವೈ. ಮುಲ್ಕಿಪಾಟೀಲ, ಡಾ| ಸಂಜಯ, ಡಾ| ರಾಕೇಶ ಪಾಟೀಲ, ಡಾ| ಅಭಿ ಚಂದ್ರನ, ಡಾ| ವಿಕಾಸ ಜೋಶಿ, ಡಾ| ಆಶ್ರಿತಾ ಶೆಟ್ಟಿ, ಸಿಬ್ಬಂದಿಯಾದ ಗಂಗಾಧರ ಹಾಗೂ ಪ್ರವೀಣ ಶಸ್ತ್ರಚಿಕಿತ್ಸೆ ತಂಡದಲ್ಲಿದ್ದರು. ಡಾ| ಎನ್.ಐ. ಹೆಬಸೂರು, ಡಾ| ಗುರುಶಾಂತಪ್ಪ, ಡಾ| ಜಿ.ಸಿ. ಪಾಟೀಲ, ಡಾ| ಉಲ್ಲಾಸ ಬಿಸ್ಲೇರಿ, ಡಾ| ರಾಮಲಿಂಗಪ್ಪ ಹಾಗೂ ಡಾ| ಅರುಣಕುಮಾರ ಶಸ್ತ್ರಚಿಕಿತ್ಸಾ ತಂಡಕ್ಕೆ ಮಾರ್ಗದರ್ಶನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್