ಭತ್ತದ ಕಣಜದಲ್ಲಿ ಸಕ್ಕರೆ ರಾಶಿ..ರಾಶಿ..!


Team Udayavani, Mar 21, 2020, 12:48 PM IST

ಭತ್ತದ ಕಣಜದಲ್ಲಿ ಸಕ್ಕರೆ ರಾಶಿ..ರಾಶಿ..!

ಸಾಂದರ್ಭಿಕ ಚಿತ್ರ

ಧಾರವಾಡ: ಘಮಘಮಿಸುವ ಅನ್ನದ ಅಕ್ಕಿ ಬೆಳೆಯುತ್ತಿದ್ದ ಭತ್ತದ ಗದ್ದೆಗಳು ಇದೀಗ ಸಮತಟ್ಟಾಗಿವೆ. ಬಿಸಿ ಬಿಸಿಯಾದ ರೊಟ್ಟಿಗೆ ಅಗತ್ಯವಾದ ಹಿಂಗಾರಿ ಬಿಳಿಜೋಳ ಬೆಳೆಯುತ್ತಿದ್ದ ಹಕ್ಕಲು ಪ್ರದೇಶಗಳಲ್ಲೂ ಇದೀಗ ಕಬ್ಬಿನ ನಾಟಿ ಸಾಗಿದೆ. ಅಷ್ಟೇ ಏಕೆ ವರ್ಷಪೂರ್ತಿ ಮನೆಗೆಲ್ಲ ಉಚಿತವಾಗಿ ಲಭಿಸುತ್ತಿದ್ದ ಪೌಷ್ಟಿಕ ದ್ವಿದಳ ಧಾನ್ಯ ಬೆಳೆಯುವ ಭೂಮಿಯನ್ನು ಈ ವರ್ಷ ಕಬ್ಬು ಅತಿಕ್ರಮಿಸಿಕೊಂಡಾಗಿದೆ.

ಹೌದು. ಭತ್ತ, ಜೋಳ, ಗೋಧಿಯಂತಹ ಪ್ರಧಾನ ಆಹಾರ ಬೆಳೆಗಳು ಹಾಗೂ ಹೆಸರು, ಕಡಲೆ ಸೇರಿದಂತೆ 12ಕ್ಕೂ ಅಧಿಕ ದ್ವಿದಳ ಧಾನ್ಯ ಬೆಳೆಯುತ್ತಿದ್ದ ಜಿಲ್ಲೆಯ ರೈತರೀಗ ಕಬ್ಬು ಬೆಳೆ ಮೊರೆ ಹೋಗಿದ್ದಾರೆ. ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ಪ್ರಮಾಣ ಕಳೆದ ಎರಡು ವರ್ಷದಲ್ಲಿ ಶೇ.30 ಹೆಚ್ಚಾಗಿದೆ. ರೈತರ ಹೊಲಗಳ ತುಂಬಾ ಏಕಪ್ರಬೇಧದ ಬೆಳೆ ಕಬ್ಬು ಅತಿಕ್ರಮಿಸಿಕೊಂಡಿದ್ದು ಬೇರೆ ಯಾವ ಬೆಳೆಯೂ ಕಾಣಸಿಗದಂತಾಗಿದೆ.

ಜಿಲ್ಲೆಯಲ್ಲಿ ಒಟ್ಟು 3 ಲಕ್ಷಕ್ಕೂ ಅಧಿಕ ಹೆಕ್ಟೇರ್‌ ಭೂಮಿ ಉತ್ತಮ ಕೃಷಿ ಮಾಡಲು ಲಭ್ಯವಿದೆ. ಈ ಭೂಮಿ ವಿಶೇಷ ಜೈವಿಕ ವಲಯವಾಗಿದ್ದು, 60ಕ್ಕೂ ಹೆಚ್ಚು ಪ್ರಬೇಧದ ಆಹಾರ ಸಸ್ಯಗಳು ಉತ್ತಮ ಫಸಲು ಕೊಡುವುದಕ್ಕೆ ಯೋಗ್ಯವಾಗಿದೆ. ಇದನ್ನು 25 ವರ್ಷಗಳ ಹಿಂದೆಯೇ ಧಾರವಾಡದ ಕೃವಿವಿ ವಿಜ್ಞಾನಿಗಳು ಸಂಶೋಧನೆ ನಡೆಸಿ ಸಾಬೀತು ಪಡಿಸಿದ್ದಾರೆ.

ಇಂತಹ ಭೂಮಿಯಲ್ಲಿ 18 ತಳಿ ದೇಶಿ ಭತ್ತ, 20ತಳಿ ಅಭಿವೃದ್ಧಿ ಪಡೆಸಿದೆ. ಹೈಬ್ರಿಡ್‌ ಭತ್ತ, 8 ಬಗೆಯ ಜೋಳ, 18 ಬಗೆಯ ಗೋದಿ, 2 ತರದರಾಗಿ, 34 ಬಗೆಯ ತೋಟಗಾರಿಕೆ ಬೆಳೆ ಸೇರಿದಂತೆ ಉತ್ತಮ ಆಹಾರ ಬೆಳೆಗಳನ್ನು ಬೆಳೆಯಬಹುದಾಗಿದೆ. ಒಟ್ಟಿನಲ್ಲಿ ಈ ಭೂಮಿಯಲ್ಲಿ ಪೌಷ್ಟಿಕ ಆಹಾರಗಳನ್ನು ಉತ್ಕೃಷ್ಟ ಮಟ್ಟದಲ್ಲಿ ಬೆಳೆಯಲು ಸಾಧ್ಯವಿದ್ದು ಇದೊಂದು ಉತ್ತಮ ಅನ್ನದ ಬಟ್ಟಲಾಗಿತ್ತು. ಇದೀಗ ಈ ಎಲ್ಲ ಭೂಮಿಯಲ್ಲೂ ಏಕ ಪ್ರಬೇಧದ ಕಬ್ಬು ಬೆಳೆ ರಾರಾಜಿಸುತ್ತಿದೆ.

ವಾಣಿಜ್ಯ ಬೆಳೆಗೆ ಜೈಕಾರ: ಆಹಾರ ಬೆಳೆಯಿಂದ ವಾಣಿಜ್ಯ ಬೆಳೆಯ ಬೆನ್ನಟ್ಟಿದ ಜಿಲ್ಲೆಯ ರೈತರು ಕಳೆದ ಹತ್ತು ವರ್ಷಗಳಲ್ಲಿ ಸಮಗ್ರ ಕೃಷಿಯಿಂದ ವಿಮುಖರಾಗಿ ಏಕಪ್ರಬೇಧ ಕಬ್ಬು ಬೆಳೆ ಹಿಂದೆ ಬಿದ್ದಿದ್ದಾರೆ. 2010ರಲ್ಲಿ ಜಿಲ್ಲೆಯಲ್ಲಿ ಕೇವಲ 14,000 ಎಕರೆಗೆ ಸೀಮಿತವಾಗಿದ್ದ ಕಬ್ಬಿನ ಬೆಳೆ ಕೇವಲ ಹತ್ತೇ ವರ್ಷಗಳಲ್ಲಿ ಅಂದರೆ 2020ಕ್ಕೆ ಬರೋಬ್ಬರಿ 1.93 ಲಕ್ಷ ಎಕರೆ ಭೂಮಿಗೆ ಏರಿಕೆ ಕಂಡಿದೆ. ಧಾರವಾಡ, ಅಳ್ನಾವರ, ಕಲಘಟಗಿ ಹಾಗೂ ಹುಬ್ಬಳ್ಳಿ ತಾಲೂಕಿನ ಭಾಗಶಃ ಪ್ರದೇಶ ಸಂಪೂರ್ಣ ಕಬ್ಬು ಬೆಳೆಯಿಂದ ಆವೃತವಾಗಿದ್ದು, ರೈತರು ಬರೀ ಕಬ್ಬು ಬೆಳೆಗೆ ಜೈ ಎನ್ನುತ್ತಿದ್ದಾರೆ.

ಕಲಘಟಗಿ ತಾಲೂಕಿನ 91 ಸಾವಿರ ಎಕರೆ ಪ್ರದೇಶ ಕಬ್ಬು ಬೆಳೆ ಆವರಿಸಿದ್ದರೆ, ಧಾರವಾಡ ತಾಲೂಕಿನ 76 ಸಾವಿರ ಎಕರೆ, ಅಳ್ನಾವರ ತಾಲೂಕಿನ 25 ಸಾವಿರ ಎಕರೆ, ಹುಬ್ಬಳ್ಳಿ ತಾಲೂಕಿನ 1000 ಎಕರೆ ಪ್ರದೇಶದಲ್ಲಿ ಕಬ್ಬಿದೆ. ಇನ್ನು ಕಬ್ಬು ಬೆಳೆ ಆಕ್ರಮಿಸುತ್ತಿರುವ ಭೂಮಿ ಹೊರತು ಪಡಿಸಿದರೆ ಮುಂಗಾರಿನಲ್ಲಿ ಬರೀ ಗೋವಿನಜೋಳ ಮತ್ತು ಸೋಯಾ ಅವರೆ ಬಿತ್ತನೆ ಪ್ರಮಾಣ ಅತ್ಯಧಿಕವಾಗುತ್ತಿದೆ.

ಕಬ್ಬಿಗೆ ವರವಾದ ನೆರೆ: ಕಳೆದ ವರ್ಷದ ನೆರೆಹಾವಳಿಯಿಂದ ಜಿಲ್ಲೆಯಲ್ಲಿ ನೀರಿನ ಸಂಗ್ರಹ ಸಾಕಷ್ಟು ಪ್ರಮಾಣದಲ್ಲಿ ಆಗಿದೆ. ಕೊಳವೆ ಬಾವಿಗಳು ಇದೀಗ ಉತ್ತಮ ಸ್ಥಿತಿಯಲ್ಲೇ ಇದ್ದು, ಕೆರೆ, ಕುಂಟೆಗಳಲ್ಲಿ ನೀರು ನಿಂತಿದೆ. ರೈತರು ಇದೇ ನೀರಿನ ಆಸರೆಯನ್ನಾಗಿಟ್ಟುಕೊಂಡು ಕಳೆದ ವರ್ಷಕ್ಕಿಂತ ಹೆಚ್ಚಿನ ಭೂಮಿಗೆ ನೀರು ಹಾಯಿಸಿ ಇದೀಗ ಮತ್ತಷ್ಟು ಕಬ್ಬು ಬೆಳೆಯು ತ್ತಿದ್ದಾರೆ. ಕಳೆದ ವರ್ಷ ಕೊರೆಸಿದ್ದರೂನೀರು ಬರದೇ ಹೋಗಿದ್ದ ಕೊಳವೆಬಾವಿಗಳಲ್ಲಿ ನೀರು ಬರುತ್ತಿರುವುದೇ ಕಬ್ಬಿನ ಮೋಹಕ್ಕೆ ಮತ್ತಷ್ಟು ರೈತರು ಇಳಿಯುವಂತೆ ಮಾಡಿದೆ.

ಕಾರ್ಖಾನೆ ಅಭಯವಿಲ್ಲ: ಇನ್ನೊಂದೆಡೆ ಕಳೆದ ವರ್ಷದಿಂದ ಜಿಲ್ಲೆಯಲ್ಲಿ ಬೆಳೆಯುತ್ತಿದ್ದ ಎಲ್ಲಾ ಕಬ್ಬನ್ನು ಖರೀದಿಸುತ್ತಿದ್ದ ಹಳಿಯಾಳದ ಪ್ಯಾರಿ ಶುಗರ್ ಕಂಪನಿ ಕಳೆದ ವರ್ಷವೇ ನೇರವಾಗಿ ಕರಾರು ಒಪ್ಪಂದದ ಕಬ್ಬು ಖರೀದಿಯನ್ನು ಸ್ಥಗಿತಗೊಳಿಸಿದೆ. ಅಂದರೆ ಕಬ್ಬು ಬೆಳೆಯಲು ಪ್ರೋತ್ಸಾಹ ನೀಡಿ, ನಂತರ ಕಟಾವು ಮಾಡಿಸಿಕೊಂಡು ಕಾರ್ಖಾನೆಗೆ ಪಡೆಯುತ್ತಿದ್ದ ಒಪ್ಪಂದಗಳು ಮುರಿದು ಬಿದ್ದಿವೆ. ಇದೀಗ ನೇರವಾಗಿ ರೈತರು ತಮಗೆ ತಿಳಿದ ಕಾರ್ಖಾನೆಗೆ ಕಬ್ಬು ಕಳುಹಿಸಬಹುದಾಗಿದೆ.

2019ರಲ್ಲಿ ಜಿಲ್ಲೆಯಲ್ಲಿ ಬೆಳೆದ 2.5 ಲಕ್ಷ ಟನ್‌ಗಳಷ್ಟು ಕಬ್ಬನ್ನು ಬೆಳಗಾವಿ ಜಿಲ್ಲೆಯ ಕಬ್ಬು ಕಾರ್ಖಾನೆಗಳು ಕೊಂಡುಕೊಂಡಿವೆ. 2020ರ ಕಬ್ಬನ್ನು ಅವು ಕೊಳ್ಳುತ್ತವೆ ಎನ್ನುವ ಧೈರ್ಯದ ಮೇಲೆ ರೈತರು ಬೇಕಾಬಿಟ್ಟಿಯಾಗಿ ಕಬ್ಬು ಬೆಳೆಯುತ್ತಿದ್ದು, ಒಂದು ಬೇಳೆ ಆ ಕಾರ್ಖಾನೆಗಳು ಕಬ್ಬನ್ನು ತಿರಸ್ಕರಿಸಿದರೆ ಜಿಲ್ಲೆಯ ರೈತರಿಗೆ ಸಂಕಷ್ಟ ತಪ್ಪಿದ್ದಲ್ಲ.

ಭತ್ತಕ್ಕೆ ಉತ್ತಮ ಬೆಲೆ ಇಲ್ಲದಿರುವುದಕ್ಕೆ ಕಬ್ಬು ಬೆಳೆಯುತ್ತಿದ್ದೇವೆ. ಈ ವರ್ಷ ನನ್ನ ಹೊಲದಲ್ಲಿ ಕಬ್ಬಿನ ಬೆಳೆ ದ್ವಿಗುಣಗೊಂಡಿದೆ. ಕಳೆದ ವರ್ಷ ಕಷ್ಟಪಟ್ಟು ಕಬ್ಬು ಕಳೆಸಿದೆವು. ಮುಂದಿನ ವರ್ಷವೂ ಹಾಗೆ ಮಾಡುವುದು ಇದ್ದೇ ಇದೆ.-ಬಸನಗೌಡ ಪಾಟೀಲ, ದಾಸ್ತಿಕೊಪ್ಪ ರೈತ

 

-ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.