ಸುಪಾರಿ ಹತ್ಯೆ: ತಂದೆ ಸೇರಿ ಏಳು ಜನರ ಸೆರೆ

ಕೊಲೆ ಮಾಡಿಸಿ ಮುಚ್ಚಿ ಹಾಕಲು ಪ್ರಯತ್ನ; ತನಿಖಾಧಿಕಾರಿಗಳ ಚಾಣಾಕ್ಷ ನಡೆ; ಪ್ರಕರಣ ಬಯಲಿಗೆ

Team Udayavani, Dec 8, 2022, 2:56 PM IST

3

ಹುಬ್ಬಳ್ಳಿ: ತಂದೆಯಿಂದಲೇ ಸುಪಾರಿ ನೀಡಿ ಮಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು, ಮಧ್ಯವರ್ತಿಗಳು ಸೇರಿದಂತೆ ಏಳು ಜನರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಲ್ಲಿನ ಕೇಶ್ವಾಪುರ ಕುಸುಗಲ್ಲ ರಸ್ತೆ ಅರಿಹಂತ ನಗರದ ಕಟ್ಟಡ ಸಲಕರಣೆಗಳ ವ್ಯಾಪಾರಿ, ಮೃತನ ತಂದೆ ಭರತ ಮಹಾಜನಶೇಠ, ಹಂತಕರಾದ ಮೊಹ್ಮದಹನೀಫ ಎಚ್‌., ಹನೀಫ ಬಿ., ರೆಹಮಾನ ಹಾಗೂ ಇವರಿಗೆ ಸಹಾಯ ಮಾಡಿದ್ದ ಕಲಘಟಗಿಯ ಪ್ರಭಯ್ಯ ಎಚ್‌. ಮತ್ತು ಮಧ್ಯವರ್ತಿಗಳಾದ ವೀರಾಪುರ ಓಣಿಯ ಮಹಾದೇವ ಎನ್‌., ಹಳೇಹುಬ್ಬಳ್ಳಿಯ ಸಲ್ಲಾವುದ್ದೀನ ಎಂ.ಎಂಬುವರನ್ನು ಬಂಧಿಸಿದ್ದಾರೆ.

ಬಂಧಿತ ಕಟ್ಟಡ ಸಾಮಗ್ರಿಗಳ ವ್ಯಾಪಾರಿ ಭರತ ಅವರು ಮಗ ಅಖೀಲ ಮಹಾಜನಶೇಠ (26)ನ ದುಶ್ಚಟ ಹಾಗೂ ತೀವ್ರ ಕಿರುಕುಳದಿಂದ ಬೇಸತ್ತಿದ್ದರು. ಹೇಗಾದರೂ ಆತನನ್ನು ಇನ್ನಿಲ್ಲವಾಗಿಸಬೇಕೆಂದು ಪರಿಚಿತನ ಮುಖಾಂತರ ಸುಪಾರಿ ಕೊಟ್ಟು ಕೊಲೆ ಮಾಡಿಸಿ ಅದನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದರು. ಆದರೆ ಪೊಲೀಸ್‌ ತನಿಖಾಧಿಕಾರಿಗಳ ಚಾಣಾಕ್ಷ ನಡೆಯಿಂದ ಈ ಪ್ರಕರಣ ಬಯಲಿಗೆ ಬಂದಿದೆ.

ವ್ಯಾಪಾರಿ ಭರತ ತನ್ನ ಮಗನನ್ನು ಕೊಲೆ ಮಾಡಲು 10ಲಕ್ಷ ರೂ. ಸುಪಾರಿ ಕೊಟ್ಟಿದ್ದಾಗಿ ಹಾಗೂ ಡಿ.1ರಂದು ಅಖೀಲನನ್ನು ಅವರ ಅರಿಹಂತ ನಗರದ ಮನೆಯಿಂದ ಅವನ ಕಾರಿನಲ್ಲೇ ಕರೆದುಕೊಂಡು ಕಲಘಟಗಿಯಿಂದ 2-3ಕಿ.ಮೀ ದೂರ ಕರೆದೊಯ್ದು ಶೆಡ್‌ವೊಂದರಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಶವವನ್ನು ಹೂತು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆ.

ಆದರೆ ಅಖೀಲನ ತಂದೆ ಭರತ ತನ್ನ ಮಗ ಕಾಣೆಯಾಗಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ವಿಡಿಯೋ ಕಾಲ್‌ ಮಾಡಿದ್ದ ಎಂದು ಕಥೆ ಕಟ್ಟಿ ನಾಟಕವಾಡಿದ್ದಾರೆ. ಕೇಶ್ವಾಪುರ ಠಾಣೆಯಲ್ಲಿ ಸಹೋದರ ಮೂಲಕ ಡಿ.3ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಮಗನನ್ನು ಹುಡುಕಿಕೊಡಿ ಎಂದು ಕೆಲ ಜನಪ್ರತಿನಿಧಿಗಳ ಮುಖಾಂತರ ಪೊಲೀಸರ ಮೇಲೆ ಒತ್ತಡ ಹಾಕಿಸಿದ್ದರೆಂದು ಮೂಲಗಳು ತಿಳಿಸಿವೆ.

ದೂರಿನನ್ವಯ ಪೊಲೀಸರು ಪೂರ್ವಾಪರ ಮಾಹಿತಿ ಕಲೆ ಹಾಕುವಾಗ ಭರತ ಮೇಲೆ ಅನುಮಾನಗೊಂಡು ತೀವ್ರ ವಿಚಾರಣೆ ನಡೆಸಿದಾಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದಾಗಿ ಬಾಯ್ಬಿಟ್ಟಿದ್ದಾರೆ. ನಂತರ ಅವರೊಂದಿಗೆ ಸಂಪರ್ಕದಲ್ಲಿದ್ದ ಮಧ್ಯವರ್ತಿಗಳಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಸುಪಾರಿ ಪಡೆದು ರೆಹಮಾನ, ಹನೀಫ ಮತ್ತು ಮೊಹ್ಮದಹನೀಫ ಕೊಲೆ ಮಾಡಿದ್ದಾರೆಂದು ತಿಳಿಸಿದ್ದಾರೆ.

ಹಂತಕರು ಅಖೀಲನ ಕೊಲೆ ಮಾಡಿದ ನಂತರ ಪ್ರಕರಣ ಮುಚ್ಚಿ ಹಾಕಲು ಶವವನ್ನು ಹೂತು ಹಾಕಿದ್ದರು. ಆದರೆ ಭರತಗೆ ತನ್ನ ಮಗನನ್ನು ಹಂತಕರು ಕೊಲೆ ಮಾಡಿದ ನಂತರ ಅದನ್ನು ಎಲ್ಲಿ ಸಾಗಿಸಿದ್ದಾರೆ ಎಂಬುದು ಗೊತ್ತಿರಲಿಲ್ಲವೆಂದು ಮೂಲಗಳು ತಿಳಿಸಿವೆ.

ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ: ಬಂಧಿತರ ಹೇಳಿಕೆ ಆಧರಿಸಿ ಪೊಲೀಸ್‌ ಆಯುಕ್ತರು ಅಖೀಲನ ಶವ ಪತ್ತೆಗಾಗಿ ಪ್ರಕರಣದ ತನಿಖೆಗಾಗಿ ಐದು ತನಿಖಾಧಿಕಾರಿಗಳ ತಂಡ ರಚಿಸಿದ್ದರು. ತನಿಖಾಧಿಕಾರಿಗಳು ಬಂಧಿತರ ಮಾಹಿತಿ ಆಧರಿಸಿ ಮಂಗಳವಾರ ರೆಹಮಾನನನ್ನು ಬಂಧಿಸಿ ವಿಚಾರಣೆ ಮಾಡಿದಾಗ ಆತ ಕೊಲೆ ಮಾಡಿದ ಕಲಘಟಗಿ ತಾಲೂಕು ದೇವಿಕೊಪ್ಪ ಗ್ರಾಮದ ಅರಣ್ಯ ಪ್ರದೇಶದಲ್ಲಿನ ಸ್ಥಳ ಹಾಗೂ ಹೂತಲಾದ ಜಾಗ ತೋರಿಸಿದ್ದ. ತನಿಖಾಧಿಕಾರಿಗಳು ಬುಧವಾರ ಬೆಳಗ್ಗೆ ಉಪ ವಿಭಾಗಾಧಿಕಾರಿಗಳ ಸಮಕ್ಷಮದಲ್ಲಿ ಹೂತಲಾಗಿದ್ದ ಅಖೀಲನ ಶವ ಹೊರ ತೆಗೆದು, ಮರಣೋತ್ತರ ಪರೀಕ್ಷೆಗೊಳಪಡಿಸಿ ಅವರ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಏಳು ಜನರನ್ನು ಇದುವರೆಗೆ ಬಂಧಿಸಿದ್ದು, ಇದರಲ್ಲಿ ಇನ್ನು ಯಾರ್ಯಾರು ಭಾಗಿಯಾಗಿದ್ದಾರೆಂದು ಪತ್ತೆ ಮಾಡುತ್ತಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.

ದೃಶ್ಯಂ ಮಾದರಿಯಲ್ಲಿ ಕೊಲೆ?

ಹಂತಕರು ಅಖೀಲನನ್ನು ದೇವಿಕೊಪ್ಪದ ಅರಣ್ಯ ಪ್ರದೇಶಕ್ಕೆ ಕರೆದೊಯ್ದ ನಂತರ ಆತನನ್ನು ಹೇಗೆ ಕೊಲೆ ಮಾಡಬೇಕು ಹಾಗೂ ಸಾಕ್ಷಿ ಸಿಗದಂತೆ ಶವವನ್ನು ಹೂಳಬೇಕೆಂದು ಓರ್ವನು ಹಂತಕರಿಗೆ ದೃಶ್ಯಂ ಮಾದರಿಯ ಚಿತ್ರದಂತೆ ಮಾರ್ಗದರ್ಶನ ಮಾಡಿದ್ದಾನಂತೆ. ಅದರಂತೆ ಹಂತಕರು ಅವನನ್ನು ಕೊಲೆ ಮಾಡಿ ಹೂತಿದ್ದಾರೆಂದು ತಿಳಿದು ಬಂದಿದೆ. ಹಂತಕರು ಅಖೀಲನ ಮುಖಕ್ಕೆ ತಲೆದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಅದೇ ಸ್ಥಳದಲ್ಲೇ ಹೂತು ಹಾಕಿದ್ದರು. ನಂತರ ಹಂತಕರು ಶವವನ್ನು ನಾಯಿ, ನರಿ ಸೇರಿದಂತೆ ಕಾಡು ಪ್ರಾಣಿಗಳು ಎಳೆದುಕೊಂಡು ಹೋಗಬಾರದೆಂದು ಶವದ ಮೇಲೆ ಉಪ್ಪು ಸುರಿದಿದ್ದರು ಹಾಗೂ ವಾಸನೆ ಬರಬಾರದೆಂದು ಸುತ್ತಲೂ ಕರ್ಪೂರ ಹಾಕಿದ್ದರೆಂದು ತಿಳಿದು ಬಂದಿದೆ. ಅಖೀಲನನ್ನು ಕೊಲೆ ಮಾಡುವ ದಿನ ಸ್ಥಳಕ್ಕೆ ಗೋವಾ ಮೂಲದ ಇನ್ನೊಬ್ಬನು ಅಲ್ಲಿಗೆ ಬಂದಿದ್ದ. ಇದರಲ್ಲಿ ಆತನ ಪಾತ್ರವೇನು ಎಂಬುದು ಇನ್ನೂ ತಿಳಿದು ಬಂದಿಲ್ಲವೆಂದು ಹೇಳಲಾಗುತ್ತಿದೆ.

60 ಲಕ್ಷ ಸುಪಾರಿ?

ಅಖೀಲನನ್ನು ಕೊಲೆ ಮಾಡಲು ಆತನ ತಂದೆ ಭರತರು ಹಂತಕರು ಮತ್ತು ಮಧ್ಯವರ್ತಿಗಳಿಗೆ ಸುಮಾರು 60ಲಕ್ಷ ರೂ. ಸುಪಾರಿ ಕೊಟ್ಟಿದ್ದರು ಎನ್ನಲಾಗುತ್ತಿದೆ.ಮೂಲಗಳ ಪ್ರಕಾರ ಮಗನ ಕಿರುಕುಳದಿಂದ ಬೇಸತ್ತು ಭರತ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದರು ಎನ್ನಲಾಗಿದೆ. ಆದರೆ ಈ ಕೊಲೆಗೆ ಇನ್ನು ಬೇರೆ ಕಾರಣವಿರಬಹುದೇ ಅಥವಾ ಮಗನ ದುಶ್ಚಟ ಹಾಗೂ ಕಿರುಕುಳವಷ್ಟೇ ಕಾರಣ ಇರಬಹುದೇ ಎಂದು ತಿಳಿದು ಬಂದಿಲ್ಲ. ತನಿಖೆ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎನ್ನುತ್ತವೆ ಪೊಲೀಸ್‌ ಮೂಲಗಳು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.