ರೈತ ಹೋರಾಟ ಬೆಂಬಲಿಸಿ ದೆಹಲಿ ಪಾದಯಾತ್ರೆ
Team Udayavani, Aug 3, 2021, 6:08 PM IST
ಹುಬ್ಬಳ್ಳಿ: ಕೇಂದ್ರ ಸರಕಾರದ ಕೃಷಿ ಕಾಯ್ದೆ ರದ್ಧತಿ ಹಾಗೂ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಖಾತ್ರಿ ಕಾನೂನು ರೂಪಣೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಚಾಮರಾಜನಗರ ಜಿಲ್ಲೆಯಿಂದ ದೆಹಲಿಗೆ ಪಾದಯಾತ್ರೆ ಕೈಗೊಂಡಿರುವ ನಾಗರಾಜ ಕುಲ್ಕುಟಕರ್ ಅವರನ್ನು ನಗರದಲ್ಲಿ ವಿವಿಧ ಹೋರಾಟಗಾರರು ಸ್ವಾಗತಿಸಿದರು.
ನಾಗರಾಜ ಕುಲ್ಕುಟಕರ ಬಾಗಲಕೊಟೆ ಜಿಲ್ಲೆ ಚಿತ್ತರಗಿಯವರಾಗಿದ್ದು, ಎಂಎಸ್ಸಿ, ಎಂಟೆಕ್ ಪದವೀಧರಾಗಿದ್ದಾರೆ. ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ರೈತರ ಹೋರಾಟ ಬೆಂಬಲಿಸಿ ಚಾಮರಾಜನಗರ ಜಿಲ್ಲೆ ಮಲೆಮಾದೇಶ್ವರ ಬೆಟ್ಟದಿಂದ ಏಕಾಂಗಿಯಾಗಿ ದೆಹಲಿ ಚಲೋ ಪಾದಯಾತ್ರೆ ಕೈಗೊಂಡಿದ್ದಾರೆ.
ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಅವರನ್ನು ಸ್ವಾಗತಿಸಿ ಮಾತನಾಡಿದ ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಮಹದಾಯಿ ವಿಚಾರದಲ್ಲಿ ರಾಜ್ಯ ಸರಕಾರ ಯಾವುದೇ ಪ್ರಸ್ತಾವನೆ ಕಳುಹಿಸದೆ ಸುಳ್ಳು ಹೇಳಿದೆ. ಕೋರ್ಟ್ ಆದೇಶದಂತೆ ಸರಕಾರ ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕ ಮುಖಂಡ ಮಹೇಶ ಪತ್ತಾರ ಮಾತನಾಡಿ, ಸುಮಾರು 7 ಸಾವಿರ ಕಿಮೀ ದೂರ ಪಾದಯಾತ್ರೆ ನಡೆಸುವ ಮೂಲಕ ನಾಗರಾಜ ಅವರು ರೈತರಲ್ಲಿ ಜಾಗೃತಿ ಮೂಡಿಸುವ ಹಾಗೂ ರೈತ ಹೋರಾಟಕ್ಕೆ ಮಹತ್ವದ ಬೆಂಬಲಕ್ಕೆ ಮುಂದಾಗಿದ್ದಾರೆ ಎಂದರು. ಮುಖಂಡರಾದ ಶಿವಣ್ಣ ಹುಬ್ಬಳ್ಳಿ, ಪುಂಡಲೀಕ ಬಡಿಗೇರ, ಪ್ರಕಾಶ ಉಳ್ಳಾಗಡ್ಡಿ , ಕಿರ್ಶೋ ಶೆಟಿ, ಶಿವಣ್ಣ ಅಸೂಟಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು