ಕನ್ನಡ ಶಾಲೆ-ಮಹದಾಯಿಗೆ ಹಕ್ಕೊತ್ತಾಯ

| ಜಿಲ್ಲಾ 13ನೇ ಸಾಹಿತ್ಯ ಸಮ್ಮೇಳನಕ್ಕೆ ತೆರೆ | ಆಂಗ್ಲ ಶಾಲೆ ಆರಂಭ ನಿರ್ಧಾರ ಮರುಪರಿಶೀಲಿಸಲು ಸರ್ಕಾರಕ್ಕೆ ಆಗ್ರಹ

Team Udayavani, Jul 30, 2019, 8:59 AM IST

hubali-tdy-1

ಹುಬ್ಬಳ್ಳಿ: ಜಿಲ್ಲಾ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಡಾ| ಮಲ್ಲಿಕಾ ಘಂಟಿ ಮಾತನಾಡಿದರು.

ಹುಬ್ಬಳ್ಳಿ: ಇಂಗ್ಲಿಷ್‌ ಮಾಧ್ಯಮ ಶಾಲೆ ತೆರೆಯುವ ಸರಕಾರದ ನಿರ್ಧಾರ ಮರುಪರಿಶೀಲನೆಯಾಗಬೇಕು ಹಾಗೂ ಮಲಪ್ರಭಾ ನದಿಗೆ ಮಹದಾಯಿ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸರಕಾರವನ್ನು ಆಗ್ರಹಿಸಿ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಎರಡು ದಿನ ಕಾಲ ನಡೆದ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಯಾವುದೇ ಮೂಲಸೌಲಭ್ಯಗಳಿಲ್ಲದೇ ಅಗತ್ಯ ಪರಿಣಿತರಿಲ್ಲದೇ ಕನ್ನಡ ಮಾಧ್ಯಮದ ಶಾಲೆಗಳೆಂದು ಪರವಾನಗಿ ಪಡೆದು ಸರಕಾರಕ್ಕೆ ಮತ್ತು ಸರಕಾರದ ನಿಯಮಾವಳಿಗಳಿಗೆ ನಾಮ ಹಾಕಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಾಗಿ ಪರಿವರ್ತಿಸಿ ಜನತೆಯನ್ನು ಲೂಟಿ ಮಾಡುತ್ತಿದ್ದು, ಇವುಗಳನ್ನು ತಡೆಯುವಲ್ಲಿ ಸರಕಾರ ಕಣ್ಣಿದ್ದು ಕುರುಡನಂತೆ ವರ್ತಿಸುತ್ತಿದೆ. ಇದರಿಂದಾಗಿ ಸಾವಿರಾರು ಕನ್ನಡ ಶಾಲೆಗಳು ಮುಚ್ಚುವ ದುಸ್ಥಿತಿ ನಿರ್ಮಾಣವಾಗಿದೆ.

ಮಾತೃ ಭಾಷೆಯಲ್ಲಿ ಆಗ ತಾನೆ ಬೆರಗಿನಿಂದ ಹೊರ ಜಗತ್ತನ್ನು ನೋಡುವ, ಯೋಚಿಸುವ ಎಳೆಯ ಮಗುವಿನ ಮೇಲೆ ತನ್ನದಲ್ಲದ ತನ್ನ ಪರಿಸರದಲ್ಲಿಲ್ಲದ ಅನ್ಯ ಭಾಷೆಯಲ್ಲಿ ವಿಷಯವನ್ನು ಗ್ರಹಿಸುವಂತೆ ಒತ್ತಡ ಹೇರುವುದು, ಆ ಮಗುವಿನ ಮಾನಸಿಕ ಪರಿಸರದ ವಿಕಾಸದ ಮೇಲೆ ಅಹಿತಕರ ಪರಿಣಾಮ ಬೀರುತ್ತದೆಂಬುದು ಜಗತ್ತಿನ ಹಲವು ಅಧ್ಯಯನಗಳು ಹೇಳುತ್ತಿರುವಾಗ ಸರಕಾರದ ಈ ನಡೆ ಸಾಧುವಾಗಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರವನ್ನು ಮರು ಪರಿಶೀಲಿಸಿ ತನ್ನ ತೀರ್ಮಾನದಿಂದ ಹೊರಬಂದು ಕನ್ನಡ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಮುಂದಾಗಬೇಕು.

ಮಹದಾಯಿ ನ್ಯಾಯಾಧಿಕರಣ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು. ರಾಜ್ಯ ಸರಕಾರ ಅಪೂರ್ಣಗೊಂಡ ಕಳಸಾ ಕಾಮಗಾರಿಯನ್ನು ಪೂರ್ಣಗೊಳಿಸಿ ಮಲಪ್ರಭೆಗೆ ಮಹದಾಯಿ ನೀರನ್ನು ಹರಿಸಲು ಕ್ರಮ ವಹಿಸಬೇಕು. ಮಹದಾಯಿ ನದಿ ಪಾತ್ರದ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಕರ್ನಾಟಕದ ನೀರಿನ ಹಕ್ಕು ಪಡೆಯಲು ರಾಜ್ಯ ಸರಕಾರ ವಿಶೇಷ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಲಾಯಿತು.

ಪ್ರೊ| ಕೆ.ಎಸ್‌. ಕೌಜಲಗಿ ನಿರ್ಣಯಗಳನ್ನು ಮಂಡಿಸಿದರು. ಪಾಲ್ಗೊಂಡ ಕನ್ನಡಾಭಿಮಾನಿಗಳು ಒಮ್ಮತದಿಂದ ಬೆಂಬಲ ಸೂಚಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.