ಶಸ್ತ್ರಚಿಕಿತ್ಸೆ ಅನವಶ್ಯಕವಾಗಬಾರದು

ಭೀಕರ ಕಾಯಿಲೆ ಹೆಸರು ಹೇಳಿ ಗರ್ಭಾಶಯ ಶಸ್ತ್ರಚಿಕಿತ್ಸೆಗೆ ರೋಗಿಗಳನ್ನು ಪುಸಲಾಯಿಸಲಾಗುತ್ತದೆ

Team Udayavani, Jul 22, 2019, 9:50 AM IST

hubali-tdy-3

ಧಾರವಾಡ: ಉಪನ್ಯಾಸ ಕಾರ್ಯಕ್ರಮದಲ್ಲಿ ವೈದ್ಯ ಡಾ| ಸಂಜೀವ ಕುಲಕರ್ಣಿ ಮಾತನಾಡಿದರು.

ಧಾರವಾಡ: ಗರ್ಭಾಶಯ ತೆಗೆಯುವ ಶಸ್ತ್ರಚಿಕಿತ್ಸೆ ಹಲವು ಪ್ರಸಂಗಗಳಲ್ಲಿ ಮಹಿಳೆಯರಿಗೆ ವರದಾನವಾಗಿದೆ. ಆದರೆ ಹಲವು ಪ್ರಸಂಗಗಳಲ್ಲಿ ಶಸ್ತ್ರಚಿಕಿತ್ಸೆ ಅನಾವಶ್ಯಕವಾಗಬಾರದು ಎಂದು ಎಸ್‌ಡಿಎಂ ವೈದ್ಯ ಕಾಲೇಜಿನ ಹೆರಿಗೆ ಮತ್ತು ಸ್ತ್ರೀಆರೋಗ್ಯ ವಿಭಾಗದ ಮುಖ್ಯಸ್ಥೆ ಡಾ| ರತ್ನಮಾಲಾ ದೇಸಾಯಿ ಹೇಳಿದರು.

ನಗರದ ಕವಿಸಂನಲ್ಲಿ ವಿಜ್ಞಾನ ಮಂಟಪದ ಆಶ್ರಯದಲ್ಲಿ ‘ಗರ್ಭಾಶಯ ತೆಗೆಯುವ ಶಸ್ತ್ರಚಿಕಿತ್ಸೆ’ ವಿಷಯ ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಪೈಕಿ ತರುಣಿಯರಿಗೆ ವ್ಯಾಪಾರೀಕರಣ ಉದ್ದೇಶದಿಂದ ಇಂತಹ ಶಸ್ತ್ರಚಿಕಿತ್ಸೆ ಮಾಡಿದರೆ ಅದು ವೈದ್ಯಕೀಯ ವೃತ್ತಿಗೆ ಬಗೆದ ಅನ್ಯಾಯ. ಗುಳಿಗೆ, ಇಂಜೆಕ್ಷನ್‌ ಮತ್ತಿತರ ವಿಧಾನಗಳ ಮೂಲಕ ರೋಗ ನಿಯಂತ್ರಿಸಲು ಬರುತ್ತದೆ. ಎಲ್ಲ ಹಾದಿಗಳು ಮುಗಿದು ಶಸ್ತ್ರಚಿಕಿತ್ಸೆಯೊಂದೇ ಜೀವ ಉಳಿಸುವ ಸಾಧನವಾಗಬೇಕು ಎಂಬ ಅರಿವು ವೈದ್ಯರಿಗೆ ಬೇಕು ಎಂದರು.

ವೈದ್ಯ ಡಾ| ಸಂಜೀವ ಕುಲಕರ್ಣಿ ಮಾತನಾಡಿ, ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪೂರ್ವದ ಮತ್ತು ನಂತರದ ವಿಷಯ ಕುರಿತಾಗಿ ರೋಗಿಯ ಸಂಪೂರ್ಣ ವಿವರ ತಿಳಿಸುವ ಟಿಪ್ಪಣಿ, ಅಭಿಪ್ರಾಯ ಲಭ್ಯವಾಗುತ್ತವೆ. ಇವೆಲ್ಲ ವಿವರಗಳನ್ನು ಕಡ್ಡಾಯವಾಗಿ ಅಲ್ಲಿನ ವೈದ್ಯರು ಸರಕಾರಕ್ಕೆ ಸಲ್ಲಿಸುತ್ತಾರೆ. ಆದರೆ ಕರ್ನಾಟಕದಲ್ಲಿ ಅಂತಹ ವ್ಯವಸ್ಥೆಯೇ ಇಲ್ಲ. ಗರ್ಭಾಶಯ ಶಸ್ತ್ರಚಿಕಿತ್ಸೆ ಯಾಕೆ ಮಾಡುತ್ತಾರೆಂಬ ಕಲ್ಪನೆ ರೋಗಿಗಳಿಗೆ ಇರಲ್ಲ, ಇಲ್ಲವೆ ವೈದ್ಯರು ಅದನ್ನು ಮನದಟ್ಟು ಮಾಡಿಕೊಡಲ್ಲ. ಜತೆಗೆ ಭೀಕರ ಕಾಯಿಲೆಗಳ ಹೆಸರು ಹೇಳಿ ಗರ್ಭಾಶಯ ಶಸ್ತ್ರಚಿಕಿತ್ಸೆಗೆ ರೋಗಿಗಳನ್ನು ಪುಸಲಾಯಿಸಲಾಗುತ್ತದೆ ಎಂದರು.

ವೈದ್ಯಕೀಯ ವೃತ್ತಿಯ ವ್ಯಾಪಾರೀಕರಣ ಮತ್ತು ಸರಕಾರ ಮೇಲ್ವಿಚಾರಣೆಯ ಲೋಪದ ಕಾರಣದಿಂದ ಅನವಶ್ಯಕವಾಗಿ ಅದರಲ್ಲಿ ತರುಣಿಯರಿಗೆ ಗರ್ಭಾಶಯ ತೆಗೆಯುವ ಶಸ್ತ್ರಚಿಕಿತ್ಸೆಗಳು ಅಡೆತಡೆ ಇಲ್ಲದೇ ಸಾಗಿದ್ದು, ಈ ಬಗ್ಗೆ ಜನಜಾಗೃತಿ ಮತ್ತು ವೈದ್ಯರಲ್ಲಿ ಆತ್ಮ ವಿಮರ್ಶೆ ಅಗತ್ಯವಿದೆ ಎಂದು ಹೇಳಿದರು.

ಕೃಷ್ಣ ಜೋಶಿ ಸ್ವಾಗತಿಸಿದರು. ಮನೋಜ್‌ ಪಾಟೀಲ ಪ್ರಾಸ್ತಾವಿಕ ಮಾತನಾಡಿ, ನಿರೂಪಿಸಿದರು. ಶಿವಣ್ಣ ಬೆಲ್ಲದ ಇದ್ದರು. ಮಹಾಂತೇಶ ನರೇಗಲ್ಲ ವಂದಿಸಿದರು.

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.