ಜ.1ರಂದು ಬಿಎಸ್ವೈ ನಿವಾಸಕ್ಕೆ ಮುತ್ತಿಗೆ
Team Udayavani, Dec 17, 2017, 7:10 AM IST
ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಳಸಾ-ಬಂಡೂರಿ ವಿಷಯವಾಗಿ ಡಿ.31ರೊಳಗೆ ಸಿಹಿ ಸುದ್ದಿ ಕೊಡದಿದ್ದರೆ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಕೊಟ್ಟು ರಾಜಕೀಯ ನಿವೃತ್ತಿ ಹೊಂದಬೇಕು. ಇಲ್ಲವಾದರೆ ಪಕ್ಷದಿಂದ ಜನವರಿ 1ರಂದು ಅವರ ಬೆಂಗಳೂರಿನ ಡಾಲರ್ ಕಾಲೊನಿಯಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಸಂಸ್ಥಾಪಕ ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಯಡಿಯೂರಪ್ಪ ಮಹದಾಯಿ, ಕಳಸಾ-ಬಂಡೂರಿ ವಿಷಯವಾಗಿ ಡಿ.15ರೊಳಗೆ ಉತ್ತರ ಕರ್ನಾಟಕ ಜನರಿಗೆ ಸಿಹಿ ಸುದ್ದಿ ಕೊಡುತ್ತೇನೆಂದು ಹೇಳಿದ್ದರು. ಆದರೆ ಡಿ.16 ಆದರೂ ಯಾವುದೇ ಸುದ್ದಿಯಿಲ್ಲ ಎಂದರು