ಸೊರಗಿದ ನೆಲದಲ್ಲೇ ಸಿಹಿ ಕ್ರಾಂತಿ


Team Udayavani, Nov 1, 2019, 12:46 PM IST

huballi-tdy-3

ಹುಬ್ಬಳ್ಳಿ: ಸಮರ್ಪಕ ನೀರಾವರಿ ಸೌಲಭ್ಯವಿಲ್ಲದೆ ಕಬ್ಬಿನ ಬೆಳೆ ಮಾಯವಾಗಿ ಅದೇ ಜಾಗದಲ್ಲಿ ಸಜ್ಜೆ, ಗೋವಿನಜೋಳ ಇನ್ನಿತರ ಮಳೆಯಾಶ್ರಿತ ಬೆಳೆಗಳು ಕಾಣಿಸಿಕೊಂಡಿದ್ದವು. ಕಬ್ಬು ಇಲ್ಲದೆ ಇದ್ದ ಸಕ್ಕರೆ ಕಾರ್ಖಾನೆಗಳು ಕಣ್ಣುಮುಚ್ಚುವ ಸ್ಥಿತಿಗೆ ತಲುಪಿದ್ದವು. ಇದೀಗ ಮತ್ತದೇ ನೆಲದಲ್ಲಿ ಕಬ್ಬಿನ ಬೆಳೆ ನಳನಳಿಸುತ್ತಿದೆ. ಅತ್ಯಾಧುನಿಕ ಸಕ್ಕರೆ ಕಾರ್ಖಾನೆಯೊಂದು ರೈತರು ಬೆಳೆ ಕಬ್ಬು ಅರೆಯಲು ಮುಂದಡಿ ಇರಿಸಿದೆ.

ಇದು ಐತಿಹಾಸಿಕ ನೆಲ ಬದಾಮಿ ತಾಲೂಕಿನ ಚಿತ್ರಣ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ಇತಿಹಾಸ ಪುಟದಲ್ಲಿ ತನ್ನದೇ ಆದ ಮಹತ್ವ ಪಡೆದುಕೊಂಡಿದೆ. ಚಾಲುಕ್ಯರ ಆಳ್ವಿಕೆಯೊಂದಿಗೆ ಮಹತ್ವದ ಸಾಂಸ್ಕೃತಿಕ ಕೊಡುಗೆಯನ್ನು ವಿಶ್ವಕ್ಕೆ ನೀಡಿದ್ದು, ಇಂದಿಗೂ ಜಗತ್ತಿನ ಅನೇಕ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಪಕ್ಕದಲ್ಲಿ ಮಲಪ್ರಭಾ ನದಿ ಇದ್ದರೂ ಸಮರ್ಪಕ ನೀರಾವರಿ ಕಾಣದ ತಾಲೂಕು ಇದಾಗಿತ್ತು. ಇದೀಗ ಹೆರಕಲ್‌ ಏತ ನೀರಾವರಿ ಯೋಜನೆ ಮೂಲಕ ನೀರಾವರಿ ಸೌಲಭ್ಯ ಪಡೆದಿದ್ದು, ರೈತರು ಮತ್ತೆ ಕಬ್ಬಿನ ಬೆಳೆಗೆ ಮರಳಿದ್ದಾರೆ. ಕಬ್ಬು ಅರೆಯಲು ಸಕ್ಕರೆ, ಸಿಮೆಂಟ್‌ ಸೇರಿದಂತೆ ವಿವಿಧ ಉದ್ಯಮ ಲೋಕದಲ್ಲಿ ಯಶಸ್ವಿ ಹೆಜ್ಜೆ ಇರಿಸಿರುವ ನಿರಾಣಿ ಸಮೂಹ ಬಾದಾಮಿಯಲ್ಲಿ ಎಂಆರ್‌ಎನ್‌ ಕೇನ್‌ ಶುಗರ್ಸ್‌ ಸಕ್ಕರೆ ಕಾರ್ಖಾನೆ ಆರಂಭಿಸಿದೆ.  ಎಂಆರ್‌ಎನ್‌ ಕೇನ್‌ ಶುಗರ್ಸ್‌ ಸಕ್ಕರೆ ಕಾರ್ಖಾನೆ ಕಳೆದ ವರ್ಷವೇ ಪ್ರಾಯೋಗಿಕವಾಗಿ ಕಬ್ಬು ಅರೆಯುವ ಕಾರ್ಯ ಕೈಗೊಂಡಿದ್ದು, ನ.1ರಂದು ಕಾರ್ಖಾನೆ ವಿಧ್ಯುಕ್ತವಾಗಿ ಉದ್ಘಾಟನೆಗೊಂಡು, ರೈತರ ಕಬ್ಬು ಅರೆಯುವುದನ್ನು ಆರಂಭಿಸಲಿದೆ.

ವರವಾದ ಹೆರಕಲ್‌ ಯೋಜನೆ: ತೆರೆದ ಹಾಗೂ ಕೊಳವೆ ಬಾವಿಯಿಂದಲೇ ನೀರಾವರಿ ಸೌಲಭ್ಯ ಹೊಂದಿದ್ದ, ಬಹುತೇಕ ಭೂಮಿ ಮಳೆಯಾಶ್ರಿತವಾಗಿದ್ದ ಬಾದಾಮಿ ತಾಲೂಕಿಗೆ ನೀರಾವರಿ ಸೌಲಭ್ಯ ಹಾಗೂ ಕೆರೆಗಳಿಗೆ ನೀರು ಒದಗಿಸುವ ನಿಟ್ಟಿನಲ್ಲಿ ಹೆರಕಲ್‌ ಏತ ನೀರಾವರಿ ಯೋಜನೆ ವರವಾಗಿ ಪರಿಣಮಿಸಿದೆ. ಶಾಸಕ ಮುರುಗೇಶ ನಿರಾಣಿ ಪ್ರಯತ್ನದ ಫ‌ಲವಾಗಿ ಯುಕೆಪಿ ಹಂತ-3ರ ಅಡಿಯಲ್ಲಿ ಕೃಷ್ಣಾ ನದಿಯ ಸುಮಾರು 3.66 ಟಿಎಂಸಿ ಅಡಿ ನೀರನ್ನು ಬಳಸಿಕೊಂಡು ಅಂದಾಜು 15,334 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಉದ್ದೇಶದೊಂದಿಗೆ ಹೆರಕಲ್‌ ಜಲಾಶಯ ಯೋಜನೆ ಆರಂಭಗೊಂಡಿತ್ತು.

ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ. ಸುಮಾರು 2.40 ಟಿಎಂಸಿ ಅಡಿ ನೀರು ಬಳಸಿಕೊಂಡು ನೀರಾವರಿ ಸೌಲಭ್ಯ ಹಾಗೂ ಬಾದಾಮಿ ತಾಲೂಕಿನ ಸುಮಾರು 8 ಕೆರೆಗಳಿಗೆ ನೀರುತುಂಬಿಸುವ ಕಾರ್ಯ ನಡೆಯುತ್ತಿದೆ. ಹೆರಕಲ್‌ ಏತನೀರಾವರಿ ಯೋಜನೆ ಎರಡನೇ ಹಂತದ ಕಾಮಗಾರಿಗೆ ಮುಂದಡಿ ಇರಿಸಲಾಗಿದೆ. ಹೆರಕಲ್‌ ದಕ್ಷಿಣ ವಿಸ್ತರಣೆ ಏತ ನೀರಾವರಿ ಯೋಜನೆಯನ್ನು ಅಂದಾಜು 107.26ಕೋಟಿ ರೂ.ವೆಚ್ಚದಲ್ಲಿ 1.13 ಟಿಎಂಸಿ ಅಡಿ ನೀರುಬಳಸಿಕೊಳ್ಳಲಾಗುತ್ತಿದೆ. ಕಲಾದಗಿ ಸಮೀಪ ಘಟಪ್ರಭಾ ನದಿ ನೀರನ್ನು ಲಿಫ್ಟ್ ಮಾಡುವ ಮೂಲಕ ಸುಮಾರು 18.90 ಕಿಮೀ ದೂರದ ಕಾಲುವೆ ಮೂಲಕ ಕೈನಕಟ್ಟಿ ಗ್ರಾಮದವರೆಗೆತೆಗೆದುಕೊಂಡು ಹೋಗಲಾಗುತ್ತದೆ. ಹೈದರಾಬಾದ್‌ ಮೂಲಕ ಕೊಯಾ ಆ್ಯಂಡ್‌ ಕಂಪನಿ ಕನ್‌ಸ್ಟ್ರಕ್ಷನ್‌ಗೆ ಗುತ್ತಿಗೆ ನೀಡಲಾಗಿದ್ದು, 18 ತಿಂಗಳಲ್ಲಿ ಕಾಮಗಾರಿ ಪೂರ್ಣಕ್ಕೆ ಕಾಲಮಿತಿ ನೀಡಲಾಗಿದೆ.

ಅತ್ಯಾಧುನಿಕ ಸಕ್ಕರೆ ಕಾರ್ಖಾನೆ: ಬಾದಾಮಿ ತಾಲೂಕಿಗೆ ನೀರಾವರಿ ಸೌಲಭ್ಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೆ ಅಲ್ಲದೆ, ನಿರಾಣಿ ಸಮೂಹ ಸಂಸ್ಥೆ ಚೇರ್ಮನ್‌ ಮುರುಗೇಶ ನಿರಾಣಿ ಬಾದಾಮಿ ತಾಲೂಕಿನ ಕರ್ಲಾಪುರದಲ್ಲಿ ಎಂಆರ್‌ಎನ್‌ ಕೇನ್‌ ಶುಗರ್ಸ್‌ ಆರಂಭಿಸಿದ್ದಾರೆ. ಅತ್ಯಾಧುನಿಕ ಸೌಲಭ್ಯಗಳ ಸಕ್ಕರೆ ಕಾರ್ಖಾನೆ ಇದಾಗಿದೆ. ಎಂಆರ್‌ಎನ್‌ ಕೇನ್‌ ಶುಗರ್ಸ್‌ ವಾರ್ಷಿಕ 6 ಸಾವಿರ ಟನ್‌ ಸಕ್ಕರೆ ಉತ್ಪಾದನೆ ಸಾಮರ್ಥ್ಯ ಹೊಂದಿದ್ದು, 2 ಲಕ್ಷ ಲೀಟರ್‌   ಇಥೆನಾಲ್‌ ಉತ್ಪಾದಿಸಲಿದೆ. ಪ್ರಧಾನಿ ಮೋದಿ ಪರಿಕಲ್ಪನೆಯಂತೆ ರೈತರಿಗೆ ಹೆಚ್ಚು ಲಾಭ ತರುವ ನಿಟ್ಟಿನಲ್ಲಿ ಕಬ್ಬಿನ ಹಾಲಿನಿಂದಲೇ ನೇರವಾಗಿ ಇಥೆನಾಲ್‌ ಉತ್ಪಾದನೆ ತಂತ್ರಜ್ಞಾನವನ್ನು ಇದು ಹೊಂದಿದ್ದು, ಸುಮಾರು 35 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸುತ್ತದೆ. ಸುಮಾರು 6 ಸಾವಿರ ಕಬ್ಬು ಬೆಳೆಯುವ ಕುಟುಂಬಗಳು ಕಾರ್ಖಾನೆ ವ್ಯಾಪ್ತಿಯಲ್ಲಿದ್ದು, ವಿಶೇಷವಾಗಿ ಸಣ್ಣ ಹಿಡುವಳಿದಾರ ರೈತರಿಗೆ ಅನುಕೂಲವಾಗುತ್ತಿದೆ. 1,000 ಜನರಿಗೆ ಉದ್ಯೋಗ ನೀಡಲಾಗಿದೆ. 400 ಟ್ರ್ಯಾಕ್ಟರ್‌ಗಳುಕಾರ್ಖಾನೆ ಕೆಲಸಕ್ಕೆ ಬಳಕೆಯಾಗುತ್ತಿವೆ.

 

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.