ಯುಪಿಎಸ್ಸಿಯಲ್ಲಿ 482ನೇ ರ್ಯಾಂಕ್ ಪಡೆದು ಪಾಸಾದ ರಾಜ್ಯದ ಏಕೈಕ ಮುಸ್ಲಿಂ ವಿದ್ಯಾರ್ಥಿನಿ
Team Udayavani, May 31, 2022, 5:26 PM IST
ಹುಬ್ಬಳ್ಳಿ: ಇಲ್ಲಿನ ಘಂಟಿಕೇರಿ ದೊಡ್ಡಮನಿ ಕಾಲೋನಿ ನಿವಾಸಿ ತಪ್ಸೀನಬಾನು ದಾವಡಿ ಯುಪಿಎಸ್ ಸಿ ಪರೀಕ್ಷೆಯಲ್ಲಿ 482ನೇ ರ್ಯಾಂಕ್ ಪಡೆದಿದ್ದಾರೆ .
ಕೇಂದ್ರೀಯ ಲೋಕಸೇವಾ ಆಯೋಗವು ( ಯುಪಿಎಸ್ಸಿ ) ನಡೆಸುವ ದೇಶದ ಅತ್ಯುನ್ನತ ನಾಗರೀಕ ಸೇವೆಗಳ ನೇಮಕಕ್ಕೆ 2021ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯ ಮೇನ್ ದಲ್ಲಿ ಮೊದಲ ಪ್ರಯತ್ನದಲ್ಲೇ ತಪ್ಸೀನ ಬಾನು 482ನೇ ರ್ಯಾಂಕ್ ಬಂದಿದ್ದಾರೆ.
ದೊಡ್ಡಮನಿ ಕಾಲೋನಿಯ ಖಾದರ ಬಾಷಾ ಹಾಗೂ ಹಸೀನ ಬೇಗಂ ದಂಪತಿಯ ಪುತ್ರಿ ತಪ್ಸೀನ ಬಾನು ಯುಪಿಎಸ್ಸಿಯಲ್ಲಿ ಉತ್ತೀರ್ಣರಾಗಿರುವ ರಾಜ್ಯದ ಏಕೈಕ ಮುಸ್ಲಿಂ ವಿದ್ಯಾರ್ಥಿನಿಯಾಗಿದ್ದಾರೆ.
ಪ್ರಾಥಮಿಕ ಶಿಕ್ಷಣವನ್ನು ರೈಲ್ವೆಯ ವುಮೆನ್ಸ್ ಆರ್ಗನೈಸೇಷನ್ ಸ್ಕೂಲ್ ನಲ್ಲಿ, ಪ್ರೌಢ ಶಿಕ್ಷಣವನ್ನು ಕೇಶ್ವಾಪುರದ ಫಾತಿಮಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯುಸಿ ಶಿಕ್ಷಣವನ್ನು ವಿದ್ಯಾನಗರದ ವಿದ್ಯಾನಿಕೇತನ ವಿಜ್ಞಾನ ಪಿಯು ಕಾಲೇಜ್ ನಲ್ಲಿ, ನಂತರ ಧಾರವಾಡ ಕೃಷಿ ವಿವಿಯಲ್ಲಿ ಬಿಎಸ್ಸಿ ಪದವಿ ಪಡೆದಿದ್ದಾರೆ.
ಜನರ ಸೇವೆ ಮಾಡಬೇಕೆಂಬ ಉದ್ದೇಶದಿಂದ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದ ಇವರು ಮೊದಲು ಮುಂಬಯಿಯ ಹಚ್ ಹೌಸ್ ನಲ್ಲಿ ಪ್ರಿಲಿಮ್ಸ್ ತರಬೇತಿ ಪಡೆದುಕೊಂಡರು. ನಂತರ ಮೇನ್ಸ್ ಗೆ ತಯಾರಿ ಮತ್ತು ಸಂದರ್ಶನ ತರಬೇತಿಯನ್ನು ದೆಹಲಿಯ ಜಾಮೀಯಾ ವಿಶ್ವವಿದ್ಯಾಲಯದಲ್ಲಿ ಪಡೆದುಕೊಂಡರು. ಪ್ರಥಮ ಬಾರಿಗೆ ಮೇನ್ಸ್ ಬರೆದು ರ್ಯಾಂಕ್ ಬಂದಿರುವುದು ತುಂಬಾ ಸಂತಸ ತಂದಿದೆ. ಜೂ. 3ರಂದು ನಗರಕ್ಕೆ ಬರುತ್ತಿದ್ದಾಳೆ ಎಂದು ಕುಟುಂಬದ ಸದಸ್ಯರು ಹರ್ಷ ವ್ಯಕ್ತಪಡಿಸಿದರು.
ತಪ್ಸೀನಬಾನು ಅವರ ತಂದೆ ರೈಲ್ವೇ ನಿವೃತ್ತ ಉದ್ಯೋಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ