ಸಾರಿಗೆ ನೌಕರರ ಕುಟುಂಬದ ಸದಸ್ಯರಿಂದ ತಟ್ಟೆ, ಲೋಟ ಪ್ರತಿಭಟನೆ
Team Udayavani, Apr 12, 2021, 12:29 PM IST
ಹುಬ್ಬಳ್ಳಿ: ಆರನೇ ವೇತನ ಆಯೋಗದ ಅನುಷ್ಠಾನಕ್ಕೆ ಒತ್ತಾಯಿಸಿ ಸಾರಿಗೆ ನೌಕರರ ಕುಟುಂಬದ ಸದಸ್ಯರು ತಟ್ಟೆ, ಲೋಟ ಪ್ರತಿಭಟನೆಗೆ ಮುಂದಾಗಿದ್ದಾರೆ.
ಇಲ್ಲಿನ ಗೋಕುಲ ರಸ್ತೆಯಲ್ಲಿರುವ ವಸತಿಗೃಹ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆರನೇ ವೇತನ ಆಯೋಗ ಅನುಷ್ಠಾನ ಮಾಡಬೇಕು ಎಂದು ಬೇಡಿಕೆ ಇಟ್ಟರೆ ಸರಕಾರ ದಮನಕಾರಿ ನೀತಿ ಅನುಸರಿಸುತ್ತಿದೆ. ನ್ಯಾಯಯುತ ಬೇಡಿಕೆ ನಮ್ಮದಾಗಿದೆ. ಯುಗಾದಿ ಹಬ್ಬ ಬಂದಿದ್ದರೂ ಮುಷ್ಕರ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕೆ ಮಾರ್ಚ್ ತಿಂಗಳಲ್ಲಿ ದುಡಿದ ವೇತನ ಪಾವತಿ ಮಾಡಿಲ್ಲ. ಇದು ಕಾರ್ಮಿಕರ ವಿರೋಧಿ ಧೋರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಜನರೇ ನಿಬಂಧನೆ ಹಾಕಿಕೊಂಡರೆ ಲಾಕ್ ಡೌನ್ ಅವಶ್ಯಕತೆಯಿಲ್ಲ: ಸಚಿವ ಸುಧಾಕರ್
ಪೊಲೀಸರೊಂದಿಗೆ ವಾಗ್ವಾದ: ಕಳೆದ ಆರೇಳು ದಿನದಿಂದ ಮುಷ್ಕರ ಮಾಡುತ್ತಿದ್ದರೂ ಸರಕಾರ ವರ್ಗಾವಣೆ ಮಾಡುವುದು, ವಜಾ ಮಾಡುವುದು ಮಾಡುತ್ತಿದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿರುವುದಕ್ಕೆ ಸರಕಾರ ಕ್ರಮ ಕೈಗೊಳ್ಳುತ್ತಿದೆ. ಯಾವುದೇ ಕೇಸ್ ಹಾಕಿದರೂ ಪರವಾಗಿಲ್ಲ ರಸ್ತೆ ಬಂದ್ ಮಾಡುವುದಾಗಿ ಪೊಲೀಸರೊಂದಿಗೆ ಮಹಿಳೆಯರು ವಾಗ್ವಾದ ನಡೆಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ