ಶಾಲೆಗಳಲ್ಲಿ ಕೊಂಕಣಿಯನ್ನು ತೃತೀಯ ಭಾಷೆಯಾಗಿ ಕಲಿಸಿ
Team Udayavani, Oct 16, 2017, 2:14 PM IST
ಧಾರವಾಡ: ಕೊಂಕಣಿಯನ್ನು ಶಾಲಾ-ಕಾಲೇಜುಗಳಲ್ಲಿ ತೃತೀಯ ಭಾಷೆಯಾಗಿ ಅಳವಡಿಸಬೇಕು ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್.ಪಿ. ನಾಯ್ಕ ಹೇಳಿದರು. ನಗರದ ರಂಗಾಯಣದ ಸಾಂಸ್ಕೃತಿಕ ಸಮುತ್ಛಯ ಭವನದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕೊಂಕಣಿ ಮಾನ್ಯತಾ ಬೆಳ್ಳಿಹಬ್ಬ ವರ್ಷ ಪ್ರಯುಕ್ತ ನಡೆದ ಕೊಂಕಣಿ ಭಾಷೆ-ಸಂಸ್ಕೃತಿ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಂಕಣಿ ಮಾತನಾಡುವ ಬೇರೆ ಬೇರೆ ಭಾಗದ ಜನರೆಲ್ಲ ಸೇರಿ ಕೊಂಕಣಿ ಭಾಷೆಯನ್ನು ಜನಪ್ರಿಯಗೊಳಿಸಿ ಮುಂಬರುವ ದಿನಗಳಲ್ಲಿ ಕೊಂಕಣಿ ಭಾಷೆಗೆ ಪ್ರತ್ಯೇಕ ಲಿಪಿ ಆಗಬೇಕು. ಕೊಂಕಣಿ ಭಾಷೆಗೆ ಸಂವಿಧಾನ ಮಾನ್ಯತೆ ನೀಡಿ 25 ವರ್ಷ ಸಂದಿದ್ದು ನಾಡಿನಾದ್ಯಂತ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣವರ ಮಾತನಾಡಿ, ಮುಂದಿನ ಜನಾಂಗಕ್ಕೆ ಸಂಸ್ಕೃತಿ ಉಳಿಯಲು ಭಾಷೆ ಬಹಳ ಪ್ರಾಮುಖ್ಯತೆ ಹೊಂದಿದೆ. ಕೊಂಕಣಿ ವೈವಿಧ್ಯತೆಯಿಂದ ಕೂಡಿದ ಭಾಷೆಯಾಗಿದೆ ಎಂದರು. ಕಿಟೆಲ್ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ| ಎಂ.ವೈ. ಸಾವಂತ ಮಾತನಾಡಿ, ಕೊಂಕಣಿ ಭಾಷೆಯ ಗ್ರಂಥ ಗಳನ್ನು ಪೋರ್ಚುಗೀಸರು ನಾಶಪಡಿಸಿ ಕೊಂಕಣಿ ಭಾಷೆಗೆ ದೊಡ್ಡ ಪೆಟ್ಟು ನೀಡಿದ್ದಾರೆ.
ಕವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠ ಪ್ರಾರಂಭಿಸುವಂತೆ ಒತ್ತಾಯಿಸಿದರು. ಸಾಧನಾ ಮಾನವ ಹಕ್ಕುಗಳ ಸಂಸ್ಥೆಯ ಸಂಸ್ಥಾಪಕಿ ಡಾ| ಇಸಬೆಲ್ಲಾದಾಸ ಕ್ಸೇವಿಯರ್ ಮಾತನಾಡಿದರು. ನಂತರ ಕೊಂಕಣಿ ಭಾಷಾ ಉಪನ್ಯಾಸ, ಕವನ ವಾಚನ ಮತ್ತು ಪ್ರಶಂಸೆ, ಕೊಂಕಣಿ ಹಾಡು ನೃತ್ಯ ಮತ್ತು ಪ್ರಾತ್ಯಕ್ಷಿತೆ ನಡೆಯಿತು.
ಪ್ರಜ್ವಲ ಹವ್ಯಾಸಿ ಕನ್ನಡ ಹಾಗೂ ಕೊಂಕಣಿ ಕಲಾ ಸಂಘದ ಉಪಾಧ್ಯಕ್ಷ ಕೃಷ್ಣಾನಂದ ಮಹಾಲೆ ಇತರರಿದ್ದರು. ರಿಜಿಸ್ಟಾರ್ ಡಾ| ಬಿ. ದೇಡದಾಸ ಪೈ ಸ್ವಾಗತಿಸಿದರು. ಸಂಚಾಲಕ ಸಂತೋಷ ಮಹಾಲೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ