ಶಿಕ್ಷಕರ ಮೇಲಿನ ಪ್ರೀತಿಯೇ ಗೆಲುವಿನ ಗುಟ್ಟು; ಬಸವರಾಜ ಹೊರಟ್ಟಿ

ಬೇಲೆಕೇರಿ ಬಂದರು ಅಭಿವೃದ್ಧಿ, ಅಂಕೋಲಾ-ಹುಬ್ಬಳ್ಳಿ ರೈಲ್ವೆ ಕೂಡ ಮುಂದೆ ಆಗಲಿದೆ

Team Udayavani, Jun 1, 2022, 5:32 PM IST

ಶಿಕ್ಷಕರ ಮೇಲಿನ ಪ್ರೀತಿಯೇ ಗೆಲುವಿನ ಗುಟ್ಟು; ಬಸವರಾಜ ಹೊರಟ್ಟಿ

ಶಿರಸಿ: ಶಿಕ್ಷಕರ ನೋವಿಗೆ ದಿನದ 24 ಗಂಟೆ ಶ್ರಮಿಸಿದ್ದೇ ಈ ಪ್ರೀತಿಯ ಗುಟ್ಟು. ಇದೇ ಪ್ರೀತಿ 7 ಸಲ ವಿಧಾನ ಪರಿಷತ್‌ಗೆ ಆಯ್ಕೆ ಆಗಲು ಕಾರಣವಾಗಿದೆ ಎಂದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಅಭ್ಯರ್ಥಿ ಬಸವರಾಜ ಹೊರಟ್ಟಿ ಹೇಳಿದರು.

ನಗರದ ಲಯನ್ಸ್‌ ಸಭಾಂಗಣದಲ್ಲಿ ಸೋಮವಾರ ನಡೆದ ಶಿಕ್ಷಕರ ಸಮಾವೇಶದಲ್ಲಿ ಮಾತನಾಡಿದ ಅವರು, ಒಂದು ಕುಟುಂಬದಲ್ಲಿ ಪ್ರೀತಿ-ವಿಶ್ವಾಸ ದಶಕಗಳ ಕಾಲ ಉಳಿಸಿ ಕೊಳ್ಳುವುದು ಕಷ್ಟ. ಆದರೆ 42 ವರ್ಷ ಈ ಪ್ರೀತಿ ಉಳಿಸಿಕೊಂಡಿದ್ದು ಸುಲಭವಲ್ಲ. ಶಿಕ್ಷಕರ ಪ್ರೀತಿಯೇ ಈ ಸ್ಥಾನಕ್ಕೆ ನನ್ನನ್ನು ತಂದು ನಿಲ್ಲಿಸಿದೆ ಎಂದ ಅವರು, ಪ್ರಥಮ ಪ್ರಾಶಸ್ತ್ಯದ ಮತ ಕೊಟ್ಟು ಈ ಬಾರಿಯೂ ಬೆಂಬಲಿಸುತ್ತೀರೆಂಬ ವಿಶ್ವಾಸವಿದೆ ಎಂದರು. ಬಿಜೆಪಿ, ನಂದು ಸೇರಿ ಶೇ.80 ಮತಗಳು ಪಕ್ಕಾ. ಉತ್ತಮ ವಾತಾವರಣ ಈ ಚುನಾವಣೆಯಲ್ಲಿ ನಿರ್ಮಾಣವಾಗಿದೆ.

ಗೆದ್ದ ಮರುದಿನದಿಂದ ಆರು ವರ್ಷದ ತನಕ ಶಿಕ್ಷಕರ ನೋವಿಗೆ ಸ್ಪಂದಿಸುತ್ತೇನೆ. ಶಿಕ್ಷಕರ ನೋವಿಗೆ ಸದಾ ಸ್ಪಂದಿಸುತ್ತೇವೆ. ಅತಿಥಿ ಶಿಕ್ಷಕರಿಗೂ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು. ಮಾಜಿ ಸಿಎಂ ಜಗದೀಶ ಶೆಟ್ಟರ, ಬಿಜೆಪಿ ಅಭಿಮಾನಿಗಳು, ಹೊರಟ್ಟಿ ಅಭಿಮಾನಿಗಳು ಒಂದೇ. ಹೊರಟ್ಟಿ ಶಕ್ತಿ, ಬಿಜೆಪಿ ಶಕ್ತಿ ಒಂದಾಗಿದೆ. ರಾಜ್ಯ ಸರಕಾರದ ಸಾಧನೆ, ನರೇಂದ್ರ ಮೋದಿ ಸರಕಾರ ಸಾಧನೆ ಜತೆಯಾಗಿದೆ ಎಂದರು.

ಶಿಕ್ಷಕರ ಸಮಸ್ಯೆ ಬಂದಾಗ ಯಾವುದೇ ಸರಕಾರ ಇದ್ದರೂ ಹೋರಾಟ ಮಾಡಿ ಕೆಲಸ ಮಾಡಿದ್ದಾರೆ ಹೊರಟ್ಟಿಯವರು. ಅವರ ಗೆಲುವು ಇನ್ನಷ್ಟು ಶಕ್ತಿಯುತ ಆಗಲಿದೆ ಎಂದರು. ಬೇಲೆಕೇರಿ ಬಂದರು ಅಭಿವೃದ್ಧಿ, ಅಂಕೋಲಾ-ಹುಬ್ಬಳ್ಳಿ ರೈಲ್ವೆ ಕೂಡ ಮುಂದೆ ಆಗಲಿದೆ. ಎಂಪಿ, ಐದು ಶಾಸಕರು, ಉಳ್ವೆಕರ್‌ ಎಲ್ಲ ಸೇರಿ ಬಿಜೆಪಿ ಆಗಿದೆ ಎಂದರು.

ಸಚಿವ ಶಿವರಾಮ ಹೆಬ್ಟಾರ ಮಾತನಾಡಿ, ಏಳು ಬಾರಿ ಗೆದ್ದ ಹೊರಟ್ಟಿ ಅವರು ಈ ಬಾರಿಯೂ ಗೆಲ್ಲುತ್ತಾರೆ. ಕಳೆದ ಸಲ ಚುನಾವಣೆ ಪ್ರಚಾರಕ್ಕೆ ಹೋದರೆ ಈ ಬಾರಿ ಬಿಡಿ, ಹೊರಟ್ಟಿ ಅವರಿಗೆ ಮತದಾನ ಮಾಡುತ್ತೇವೆ ಎನ್ನುತ್ತಿದ್ದರು. ಅವರು ಒಳ್ಳೆಯ ಕೆಲಸ, ಹೋರಾಟದಿಂದ ಗೆದ್ದಿದ್ದಾರೆ. ಶೆಟ್ಟರ ನೇತೃತ್ವದಲ್ಲಿ ಈ ಚುನಾವಣೆಯಲ್ಲಿ ಗೆಲುವು ಆಗಲಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರು, ಏಳು ಬಾರಿ ಗೆದ್ದಿದ್ದಾರೆ ಎಂದರೆ, ಕೆಲಸ ಮಾಡಿದ್ದಾರೆ ಎಂದರ್ಥ. ಸದನದ ಒಳಗೆ-ಹೊರಗೆ ಕೆಲಸ ಮಾಡಿದ್ದಾರೆ. ದಾಖಲೆ ಮತಗಳಿಂದ ಹೊರಟ್ಟಿ ಗೆಲ್ಲುತ್ತಾರೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ಎಂ.ಜಿ. ಭಟ್ಟ, ಉಷಾ ಹೆಗಡೆ, ಮಹೇಶ ತೆಂಗಿನಕಾಯಿ, ಗಣಪತಿ ನಾಯ್ಕ, ಚಂದ್ರು ಎಸಳೆ, ಎನ್‌.ಎಸ್‌. ಹೆಗಡೆ ಇತರರು ಇದ್ದರು. ಎಂ.ಎಂ. ಭಟ್ಟ ನಿರೂಪಿಸಿದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.