ಜನಪದ ಶೈಲಿ ಹಾಡಿಗೆ ಹೆಜ್ಜೆ ಹಾಕಿದ ಶಿಕ್ಷಕರು
Team Udayavani, Apr 7, 2019, 6:00 AM IST
ಧಾರವಾಡ: ಸ್ವೀಪ್ ಸಮಿತಿ, ಜಿಪಂ, ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಮತದಾರರ ಜಾಗೃತಿ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ|ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮ ನಗರದ ಕೃಷಿ ವಿವಿಯ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಶುಕ್ರವಾರ ಜರುಗಿತು.
ಜನಪದ ಶೈಲಿಯ ಹಾಡಿಗೆ ಶಿಕ್ಷಕರು ಕೋಲಾಟದೊಂದಿಗೆ ಹೆಜ್ಜೆ ಹಾಕಿದರೆ, ದೃಷ್ಟಿ ವಿಕಲಚೇತನೆ ಕೃತ್ತಿಕಾ ಜಂಗಲಿಮಠ ಅವರು ಧಾರವಾಡ ಗ್ರಾಮೀಣ ಬಿಇಒ ವಿದ್ಯಾ ನಾಡಿಗೇರ ರಚಿಸಿದ ಚುನಾವಣಾ ಜಾಗೃತಿ ಗೀತೆ ಹಾಡಿದರಲ್ಲದೇ ಬಾನ್ಸುರಿ ವಾದನ ಮೂಲಕ ಸಂತ ಶಿಶುನಾಳ ಶರೀಫರ ತತ್ವಪದಗಳನ್ನು ನುಡಿಸಿದರು.
ಅಳ್ನಾವರದ ಎಇಎಸ್ ಪ್ರೌಢಶಾಲೆ ವಿದ್ಯಾರ್ಥಿನಿ ರಮ್ಯಾ ಕುಬಸದ ವೃಕ್ಷಮಾತೆ ಪೋಷಾಕು ಧರಿಸಿ ಗಮನ ಸೆಳೆದಳು. ಹೊನ್ನಾಪುರ ಪ್ರಭುದೇವ ಪ್ರೌಢಶಾಲೆಯ ಮಹಾಂತೇಶ ಹುಬ್ಬಳ್ಳಿ ಅವರು ರಚಿಸಿದ, ಬಾಬಾಜಾನ್ ಮುಲ್ಲಾ ಅವರು ರಾಗ
ಸಂಯೋಜಿಸಿದ್ದ ಗೀತೆಗೆ ಶಿಕ್ಷಕಿಯರು ಹೆಜ್ಜೆ ಹಾಕಿದರು. ಮಾದರಿ ಇವಿಎಂ, ವಿವಿಪ್ಯಾಟ್ ಯಂತ್ರಗಳಲ್ಲಿ ಅಣಕು ಮತ ಚಲಾಯಿಸಿದರು.
ಮಹದೇವ ಸತ್ತಿಗೇರಿ ನಗೆಹನಿಗಳೊಂದಿಗೆಮತದಾರರನ್ನು ಜಾಗೃತಿ ಗೊಳಿಸಿದರು. ಎಫ್ .ಬಿ. ಕಣವಿ, ಕೀರ್ತಿವತಿ ಮತ್ತು ತಂಡದವರು ಕೋಲಾಟ, ಕಿರು ನಾಟಕ ಪ್ರದರ್ಶಿಸಿದರು. ಶಿಕ್ಷಕ ಸಂಜೀವ್ ಕಾಳೆ ರಚಿಸಿರುವ ಮತದಾರ ಜಾಗೃತಿ ವ್ಯಂಗ್ಯಚಿತ್ರಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಡಿಡಿಪಿಐ ಗಜಾನನ ಮನ್ನಿಕೇರಿ, ತಾಪಂ ಇಒ ಎಸ್.ಎಸ್. ಕಾದೊಳ್ಳಿ, ತಹಶೀಲ್ದಾರ್ ಪ್ರಕಾಶ ಕುದರಿ, ಎ.ಎ.ಖಾಜಿ, ವಿದ್ಯಾ ನಾಡಿಗೇರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ