ಜು. 15ರೊಳಗೆ ಟೆಂಡರ್‌ಶ್ಯೂರ್‌ ರಸ್ತೆ ಪೂರ್ಣ

•ಉದ್ಘಾಟನೆಗೆ ಸಾರಿಗೆ ಸಚಿವ ನಿತಿನ್‌ ಗಡ್ಕರಿಗೆ ಆಹ್ವಾನ•ಗುಣಮಟ್ಟದೊಂದಿಗೆ ಮಾಡಿಕೊಂಡಿಲ್ಲ ರಾಜಿ

Team Udayavani, Jun 9, 2019, 9:26 AM IST

hubali-tdy-4..

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ ಶೆಟ್ಟರ ಹಾಗೂ ಸ್ವಾತಿ ರಾಮನಾಥನ್‌ ಟೆಂಡರ್‌ಶ್ಯೂರ್‌ ರಸ್ತೆ ಕಾಮಗಾರಿ ವೀಕ್ಷಿಸಿದರು.

ಹುಬ್ಬಳ್ಳಿ: ಮಹಾನಗರಕ್ಕೆ ಮಾದರಿಯಾಗಿರುವ ಟೆಂಡರ್‌ಶ್ಯೂರ್‌ ರಸ್ತೆ ಕಾಮಗಾರಿ ಬಹುತೇಕ ಅಂತಿಮ ಹಂತ ತಲುಪಿದ್ದು, ಜು. 15ರೊಳಗೆ ಪೂರ್ಣಗೊಳ್ಳುವ ಭರವಸೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.

ಜನಾ ಅರ್ಬನ್‌ ಸ್ಪೇಸ್‌ ಫೌಂಡೇಶನ್‌ ವ್ಯವಸ್ಥಾಪಕಿ ಸ್ವಾತಿ ರಾಮನಾಥನ್‌ ಅವರೊಂದಿಗೆ ಶನಿವಾರ ಇಲ್ಲಿನ ಶ್ರೀ ಕಾಡಸಿದ್ಧೇಶ್ವರ ಕಾಲೇಜಿನಿಂದ ತೋಳನ ಕರೆಯವರೆಗೆ ನಿರ್ಮಾಣವಾಗುತ್ತಿರುವ ಟೆಂಡರ್‌ಶ್ಯೂರ್‌ ರಸ್ತೆ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜು. 15ರೊಳಗೆ ಕಾಮಗಾರಿ ಮುಗಿಸುವ ಭರವಸೆ ನೀಡಿದ್ದಾರೆ. ಈ ಭಾಗದಲ್ಲಿ ಇದು ಮಾದರಿ ಹಾಗೂ ಸುಸಜ್ಜಿತ ರಸ್ತೆಯಾಗಿರುವುದರಿಂದ ಉದ್ಘಾಟನೆ ಕಾರ್ಯಕ್ರಮಕ್ಕೆ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಒತ್ತುವರಿ ತೆರವು ಕಾರ್ಯಾಚರಣೆ, ವಿವಿಧ ಇಲಾಖೆ ಕೆಲಸ ಕಾರ್ಯಗಳ ತಾಂತ್ರಿಕ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ನಿಗದಿತ ಸಮಯದೊಳಗೆ ಎಲ್ಲವೂ ಕೈಗೊಂಡಿದ್ದರೆ, ಫೆಬ್ರವರಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುತ್ತಿತ್ತು. ಒಂದಿಷ್ಟು ವಿಳಂಬವಾಗಿದೆ ಎನ್ನುವುದು ಬಿಟ್ಟರೆ ನಮ್ಮ ನಿರೀಕ್ಷೆಯಂತೆ ಕಾಮಗಾರಿ ನಡೆದಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ರಸ್ತೆಗಿಂತ ಇಲ್ಲಿ ಉತ್ತಮವಾಗಿ ನಿರ್ಮಿಸಲಾಗುತ್ತಿದೆ ಎಂದರು.

ಜನಾ ಅರ್ಬನ್‌ ಸ್ಪೇಸ್‌ ಪ್ರತಿಷ್ಠಾನ ವ್ಯವಸ್ಥಾಪಕಿ ಸ್ವಾತಿ ರಾಮನಾಥನ್‌ ಮಾತನಾಡಿ, ಪಾದಚಾರಿ ಮಾರ್ಗ, ವಿವಿಧ ಇಲಾಖೆ ಭೂಗತ ಕೇಬಲ್ಗಳ ಪ್ರತ್ಯೇಕ ಮಾರ್ಗ, ಬೈಸಿಕಲ್ ಸವಾರರಿಗೆ ಪ್ರತ್ಯೇಕ ಮಾರ್ಗ ಸೇರಿದಂತೆ ಹಲವು ಸೌಲಭ್ಯಗಳಿರುವ ಮಾದರಿ ರಸ್ತ್ತೆಯಾಗಿದ್ದು, ಇಲ್ಲಿ ಲಭ್ಯವಿರುವ ಜಾಗಕ್ಕೆ ತಕ್ಕಂತೆ ವಿನ್ಯಾಸ ಮಾಡಿದ್ದು, ಸ್ಥಳದ ಕೊರತೆಯಿಂದ ವಾಹನ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲ. ಮುಂದಿನ ಆರು ವಾರಗಳಲ್ಲಿ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಸಾರ್ವಜನಿಕರು ಈ ರಸ್ತೆಯನ್ನು ಜವಾಬ್ದಾರಿಯಿಂದ ಬಳಸಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಇ ಎನ್‌.ಎಂ. ಕುಲಕರ್ಣಿ, ಎಚ್.ಎಂ. ಕೃಷ್ಣಾರಡ್ಡಿ ಇನ್ನಿತರರಿದ್ದರು.

ಅವೈಜ್ಞಾನಿಕ ಜಂಕ್ಷನ್‌ ಅಭಿವೃದ್ಧಿ:

ಸಿದ್ದೇಶ್ವರ ವೃತ್ತದಲ್ಲಿ ಟೆಂಡರ್‌ಶ್ಯೂರ್‌ ರಸ್ತೆಗೆ ಸಂಪರ್ಕ ಕಲ್ಪಿಸುವ ಸಿಆರ್‌ಎಫ್ ರಸ್ತೆ ಎತ್ತರವಾಗಿರುವುದನ್ನು ಸ್ವಾತಿ ರಾಮನಾಥನ್‌ ಗಮನಿಸಿದರು. ಸಿಆರ್‌ಎಫ್ ರಸ್ತೆ ಅವೈಜ್ಞಾನಿಕವಾಗಿ ನಿರ್ಮಿಸಿರುವ ಪರಿಣಾಮ ಜಂಕ್ಷನ್‌ನಲ್ಲಿ ಜನರು ಸಾಕಷ್ಟು ಸಮಸ್ಯೆ ಅನುಭವಿಸಬೇಕಾಗುತ್ತದೆ. ಎರಡು ರಸ್ತೆಗಳು ಸಮಾನಾಂತರವಾಗಿರಬೇಕು. ಈಗಾಗಲೇ ನಿರ್ಮಿಸಿರುವ ರಸ್ತೆಗೆ ಅನುಗುಣವಾಗಿ ಹೊಸ ರಸ್ತೆ ನಿರ್ಮಾಣ ಮಾಡಬೇಕಿತ್ತು. ಇದನ್ನು ಮರೆತು ರಸ್ತೆ ಮಾಡಿದ್ದರಿಂದ ಸಿಆರ್‌ಎಫ್ ರಸ್ತೆ ಎತ್ತರವಾಗಿದೆ. ಯಾವುದೇ ಕಾರಣಕ್ಕೂ ಟೆಂಡರ್‌ಶ್ಯೂರ್‌ ಯೋಜನೆಗೆ ಧಕ್ಕೆ ಬಾರದಂತೆ ಅಧಿಕಾರಿಗಳು ಸಮನ್ವಯ ಸಾಧಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.