ಜು. 15ರೊಳಗೆ ಟೆಂಡರ್ಶ್ಯೂರ್ ರಸ್ತೆ ಪೂರ್ಣ
•ಉದ್ಘಾಟನೆಗೆ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಆಹ್ವಾನ•ಗುಣಮಟ್ಟದೊಂದಿಗೆ ಮಾಡಿಕೊಂಡಿಲ್ಲ ರಾಜಿ
Team Udayavani, Jun 9, 2019, 9:26 AM IST
ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ ಶೆಟ್ಟರ ಹಾಗೂ ಸ್ವಾತಿ ರಾಮನಾಥನ್ ಟೆಂಡರ್ಶ್ಯೂರ್ ರಸ್ತೆ ಕಾಮಗಾರಿ ವೀಕ್ಷಿಸಿದರು.
ಹುಬ್ಬಳ್ಳಿ: ಮಹಾನಗರಕ್ಕೆ ಮಾದರಿಯಾಗಿರುವ ಟೆಂಡರ್ಶ್ಯೂರ್ ರಸ್ತೆ ಕಾಮಗಾರಿ ಬಹುತೇಕ ಅಂತಿಮ ಹಂತ ತಲುಪಿದ್ದು, ಜು. 15ರೊಳಗೆ ಪೂರ್ಣಗೊಳ್ಳುವ ಭರವಸೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.
ಜನಾ ಅರ್ಬನ್ ಸ್ಪೇಸ್ ಫೌಂಡೇಶನ್ ವ್ಯವಸ್ಥಾಪಕಿ ಸ್ವಾತಿ ರಾಮನಾಥನ್ ಅವರೊಂದಿಗೆ ಶನಿವಾರ ಇಲ್ಲಿನ ಶ್ರೀ ಕಾಡಸಿದ್ಧೇಶ್ವರ ಕಾಲೇಜಿನಿಂದ ತೋಳನ ಕರೆಯವರೆಗೆ ನಿರ್ಮಾಣವಾಗುತ್ತಿರುವ ಟೆಂಡರ್ಶ್ಯೂರ್ ರಸ್ತೆ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಜು. 15ರೊಳಗೆ ಕಾಮಗಾರಿ ಮುಗಿಸುವ ಭರವಸೆ ನೀಡಿದ್ದಾರೆ. ಈ ಭಾಗದಲ್ಲಿ ಇದು ಮಾದರಿ ಹಾಗೂ ಸುಸಜ್ಜಿತ ರಸ್ತೆಯಾಗಿರುವುದರಿಂದ ಉದ್ಘಾಟನೆ ಕಾರ್ಯಕ್ರಮಕ್ಕೆ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಒತ್ತುವರಿ ತೆರವು ಕಾರ್ಯಾಚರಣೆ, ವಿವಿಧ ಇಲಾಖೆ ಕೆಲಸ ಕಾರ್ಯಗಳ ತಾಂತ್ರಿಕ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ನಿಗದಿತ ಸಮಯದೊಳಗೆ ಎಲ್ಲವೂ ಕೈಗೊಂಡಿದ್ದರೆ, ಫೆಬ್ರವರಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುತ್ತಿತ್ತು. ಒಂದಿಷ್ಟು ವಿಳಂಬವಾಗಿದೆ ಎನ್ನುವುದು ಬಿಟ್ಟರೆ ನಮ್ಮ ನಿರೀಕ್ಷೆಯಂತೆ ಕಾಮಗಾರಿ ನಡೆದಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ರಸ್ತೆಗಿಂತ ಇಲ್ಲಿ ಉತ್ತಮವಾಗಿ ನಿರ್ಮಿಸಲಾಗುತ್ತಿದೆ ಎಂದರು.
ಜನಾ ಅರ್ಬನ್ ಸ್ಪೇಸ್ ಪ್ರತಿಷ್ಠಾನ ವ್ಯವಸ್ಥಾಪಕಿ ಸ್ವಾತಿ ರಾಮನಾಥನ್ ಮಾತನಾಡಿ, ಪಾದಚಾರಿ ಮಾರ್ಗ, ವಿವಿಧ ಇಲಾಖೆ ಭೂಗತ ಕೇಬಲ್ಗಳ ಪ್ರತ್ಯೇಕ ಮಾರ್ಗ, ಬೈಸಿಕಲ್ ಸವಾರರಿಗೆ ಪ್ರತ್ಯೇಕ ಮಾರ್ಗ ಸೇರಿದಂತೆ ಹಲವು ಸೌಲಭ್ಯಗಳಿರುವ ಮಾದರಿ ರಸ್ತ್ತೆಯಾಗಿದ್ದು, ಇಲ್ಲಿ ಲಭ್ಯವಿರುವ ಜಾಗಕ್ಕೆ ತಕ್ಕಂತೆ ವಿನ್ಯಾಸ ಮಾಡಿದ್ದು, ಸ್ಥಳದ ಕೊರತೆಯಿಂದ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲ. ಮುಂದಿನ ಆರು ವಾರಗಳಲ್ಲಿ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಸಾರ್ವಜನಿಕರು ಈ ರಸ್ತೆಯನ್ನು ಜವಾಬ್ದಾರಿಯಿಂದ ಬಳಸಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಇ ಎನ್.ಎಂ. ಕುಲಕರ್ಣಿ, ಎಚ್.ಎಂ. ಕೃಷ್ಣಾರಡ್ಡಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ