ಉಗ್ರ ದಾಳಿ ಭೀತಿ: ಅವಳಿ ನಗರದಲ್ಲೂ ಕಟ್ಟೆಚ್ಚರ
Team Udayavani, Aug 17, 2019, 9:58 AM IST
ಹುಬ್ಬಳ್ಳಿ: ಪಾಕಿಸ್ತಾನದ ಉಗ್ರರು ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಪ್ರಮುಖ ನಗರಗಳ ಮೇಲೂ ದಾಳಿ ಮಾಡಬಹುದು ಎಂಬ ಗುಪ್ತಚರ ಮಾಹಿತಿ ಮೇರೆಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಾಶ್ಮೀರದ ವಿಷಯವಾಗಿ ಪಾಕಿಸ್ತಾನದ ಉಗ್ರರು ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ಮಾಡಿದ್ದ ಆತ್ಮಾಹುತಿ ದಾಳಿ ರೀತಿಯಲ್ಲೇ ಮತ್ತೆ ದಾಳಿಗಳನ್ನು ಮಾಡುವ ಸಾಧ್ಯತೆಗಳಿವೆ. ಆ ನಿಟ್ಟಿನಲ್ಲಿ ಸಂಚು ರೂಪಿಸಿದ್ದಾರೆ. ಈಗಾಗಲೇ ರಾಜ್ಯಕ್ಕೂ ಕೆಲ ಭಯೋತ್ಪಾದಕರು ನುಸುಳಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಜ್ಯದ ಬಹುತೇಕ ಪ್ರಮುಖ ನಗರ ಹಾಗೂ ಪ್ರಮುಖ ಕಟ್ಟಡ, ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರು ನಗರ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನು ತಪಾಸಿಸುತ್ತಿದ್ದಾರೆ. ಸಂಶಯ ಕಂಡುಬಂದವರ ಮೇಲೆ ತೀವ್ರ ನಿಗಾವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಗರದಾದ್ಯಂತ ಕಟ್ಟೆಚ್ಚರ: ಹು-ಧಾ ಪೊಲೀಸ್ ಆಯುಕ್ತರು ನಗರದಾದ್ಯಂತ ಕಟ್ಟೆಚ್ಚರ ಘೋಷಿಸಿದ್ದಾರೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ಸ್ಟ್ಯಾಂಡ್, ಮಾಲ್ಗಳು, ಜನನಿಬಿಡ ಪ್ರದೇಶ ಸೇರಿದಂತೆ ಆಯಕಟ್ಟಿನ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತಾ ಪಡೆ ನಿಯೋಜಿಸಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ‘ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್