ಭಯೋತ್ಪಾದನೆ ಬೇರು ಸಹಿತ ಕೀಳಬೇಕು: ಜೋಶಿ
Team Udayavani, May 22, 2019, 12:20 PM IST
ಧಾರವಾಡ: ಡಿಸಿ ಕಚೇರಿ ಆವರಣದಲ್ಲಿರುವ ಕಾರ್ಗಿಲ್ ಸ್ತೂಪದ ಬಳಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು.
ಧಾರವಾಡ: ಭಯೋತ್ಪಾದನೆಯು ಜಗತ್ತಿನಾದ್ಯಂತ ಹಬ್ಬಿದ ಕ್ಯಾನ್ಸರ್ ರೋಗವಾಗಿದೆ. ಭಯೋತ್ಪಾದನೆ ಕಾರ್ಯವನ್ನು ವಿರೋಧಿಸದೇ ಅದನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಸಮಸ್ತ ಭಾರತೀಯರು ಸಿದ್ಧವಾಗಬೇಕು ಎಂದು ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಜೋಶಿ ಹೇಳಿದರು.
ಡಿಸಿ ಕಚೇರಿ ಆವರಣದಲ್ಲಿರುವ ಕಾರ್ಗಿಲ್ ಸ್ತೂಪದ ಬಳಿ ಭಯೋತ್ಪಾದನಾ ವಿರೋಧಿ ದಿನಾಚರಣೆ ಅಂಗವಾಗಿ ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಯೋತ್ಪಾದನೆ ಒಂದು ಅಸಾಂಪ್ರದಾಯಿಕ ಯುದ್ಧ. ಭಾರತ ಶಾಂತಿ ಬಯಸುವ ರಾಷ್ಟ್ರವಾಗಿದ್ದು, ಎಂದಿಗೂ ನಾವು ಇನ್ನೊಂದು ರಾಷ್ಟ್ರದ ಭೂಪ್ರದೇಶವನ್ನು ಕಬಳಿಸುವ, ಆಕ್ರಮಿಸುವ ಕೃತ್ಯವನ್ನು ಎಸಗಿಲ್ಲ. ಆದರೆ ಭಾರತವನ್ನು ಕೆಣಕಿದರೆ ನಮಗಿನ್ನು ಉಳಿಗಾಲವಿಲ್ಲ ಎಂಬ ಎಚ್ಚರಿಕೆಯನ್ನು ಭಾರತ ಪಾಕಿಸ್ತಾನಕ್ಕೆ ನೀಡಿದೆ. ಪ್ರಾಣತೆತ್ತ ನಮ್ಮ ವೀರಸೈನಿಕರನ್ನು ಸದಾ ಸ್ಮರಿಸಬೇಕಾದದ್ದು ಆದ್ಯ ಕರ್ತವ್ಯ. ಭಯೋತ್ಪಾದನೆ ನಿಗ್ರಹಿಸುವಲ್ಲಿ ನಮ್ಮನ್ನು ನಾವೇ ತೊಡಗಿಸಿಕೊಳ್ಳೋಣ ಎಂದರು.
ಅಧ್ಯಕ್ಷತೆ ವಹಿಸಿದ್ದ ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ ಅಧ್ಯಕ್ಷ ಚಂದ್ರಶೇಖರ ಅಮಿನಗಡ ಮಾತನಾಡಿ, ಭಯೋತ್ಪಾದಕರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿ ತಕ್ಕ ಶಿಕ್ಷೆಯನ್ನು ನೀಡಲು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಸಹಕಾರ ನೀಡಬೇಕು ಎಂದರು.
2001 ಸೆ. 18ರಂದು ಕಾಶ್ಮೀರದ ಅನಂತನಾಗ ಜಿಲ್ಲೆಯಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ವೀರಯೋಧ ರಾಘವೇಂದ್ರ ಬಡಿಗೇರ ಅವರ ಪೋಷಕರಾದ ಮಹಾದೇವಪ್ಪ ಮತ್ತು ಇಂದಿರಾ ಅವರನ್ನು ಗೌರವಿಸಲಾಯಿತು.
ವೀರಣ್ಣ ಒಡ್ಡೀನ, ಪಂಡಿತ ಮುಂಜಿ, ಎಸ್.ಬಿ. ಗುತ್ತಲ, ಪ್ರಾಣೇಶ ಪಾಶ್ಚಾಪುರ, ಭೀಮಪ್ಪ ಜಾಧವ, ಈರಪ್ಪಣ್ಣ ಅಮೀನಗಡ, ಬಾಬುರಾವ್ ರಾಠೊಡ, ನಜೀರ ಗೊರವನಕೊಳ್ಳ, ನಾಗರತ್ನಾ ಅಮೀನಗಡ, ಪ್ರಕಾಶ ಕುಲಕರ್ಣಿ, ಎ.ಆರ್. ಜೋಶಿ, ಪಿ.ಎನ್. ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ