ನೀರಿದ್ದರೂ ಬಳಸಿಕೊಳ್ಳಲಾಗದ ತ್ರಿಶಂಕು ಸ್ಥಿತಿ

10 ದಿನದಿಂದ ನೀರಿಗೆ ಕಾದು ಕುಳಿತ ಜನತೆ

Team Udayavani, Apr 17, 2022, 10:35 AM IST

6

ನವಲಗುಂದ: ಪಟ್ಟಣದಲ್ಲಿ ಕುಡಿಯುವ ನೀರು ಬರುತ್ತದೆಯೋ ಇಲ್ಲವೋ ಎಂದು ಜನರು ಚಾತಕ ಪಕ್ಷಿಯಂತೆ ಕಾದು ಕುಳಿತುಕೊಳ್ಳುವಂತ ಪರಿಸ್ಥಿತಿ ಉಂಟಾಗಿದೆ.

ಹತ್ತು ದಿನವಾದರೂ ಜವಳೇ ಪೇಟೆ, ಕುಂಬಾರ ಓಣಿ, ದೇಸಾಯಿ ಪೇಟೆ, ಸಿದ್ದಾಪುರ ಓಣಿ, ತೆಗ್ಗಿನಕೇರಿ ಓಣಿ, ಆನೆಗುಂದಿ ಪ್ಲಾಟ್‌, ನೀರಾವರಿ ಕಾಲೋನಿ, ಆರ್ಮಿ ಕಾಲೋನಿ, ಮುದಿಗೌಡರ ಪ್ಲಾಟ್‌ ಸೇರಿದಂತೆ ಹಲವಾರು ವಾರ್ಡ್‌ಗಳಲ್ಲಿ ನಲ್ಲಿಯ ನೀರು ಬರದೆ ಪುರಸಭೆಯವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಸಮಸ್ಯೆಯ ಮೂಲ: ಪಟ್ಟಣದ ಹೃದಯ ಭಾಗದಲ್ಲಿರುವ ನೀಲಮ್ಮನ ಕೆರೆಯಲ್ಲಿ ನೀರಿಲ್ಲ. ಪಟ್ಟಣದ ಎರಡು ಶುದ್ಧೀಕರಣ ಘಟಕ ಇದ್ದರೂ ಅದರಲ್ಲಿಯೂ ನೀರು ಬರುತ್ತಿಲ್ಲ. ಇತ್ತೀಚೆಗೆ ಮಳೆ, ಗಾಳಿ, ಸಿಡಿಲಿನಿಂದ ಪಟ್ಟಣಕ್ಕೆ ನೀರು ಪೂರೈಸುವ ಚನ್ನಮ್ಮನ ಜಲಾಗಾರದ ವಿದ್ಯುತ್‌ ಪರಿವರ್ತಕ ಸುಟ್ಟುಹೋಗಿದ್ದರಿಂದ ಸಾರ್ವಜನಿಕರಿಗೆ ನೀರು ಬಂಗಾರವಾಗಿದೆ. 10 ದಿನಗಳಾದರೂ ಕೆಲವು ವಾರ್ಡ್‌ಗಳಿಗೆ ನೀರು ಪೂರೈಕೆಯಾಗದ್ದರಿಂದ ಐದು ಕಿಮೀ ದೂರದ ಚನ್ನಮ್ಮನ ಜಲಾಶಯಕ್ಕೇ ಹೋಗಿ ನೀರು ತರುವಂತಾಗಿದೆ. ಇನ್ನು ಹೊಸ ವಿದ್ಯುತ್‌ ಪರಿವರ್ತಕ ಅಳವಡಿಸುವವರೆಗೂ ನೀರಿನ ಸಮಸ್ಯೆ ಮಾತ್ರ ತಪ್ಪಿದ್ದಲ್ಲ.

ಇಚ್ಛಾಶಕ್ತಿ ಕೊರತೆ: ಪುರಸಭೆಯಲ್ಲಿ ಅನುದಾನಕ್ಕೇನೂ ಕಡಿಮೆ ಇಲ್ಲ. ನೀರು ಪೂರೈಸುವ ಚನ್ನಮ್ಮನ ಜಲಾಗಾರಕ್ಕೆ ಇನ್ನೂ ಒಂದು ವಿದ್ಯುತ್‌ ಪರಿವರ್ತಕ ಕಾಯ್ದಿರಿಸಿದ್ದರೆ ಈ ರೀತಿ ಅವಘಡ ಸಂಭವಿಸಿದಾಗ ತಕ್ಷಣ ಬದಲಾಯಿಸಿ ಪಟ್ಟಣದ ವಾರ್ಡ್‌ಗಳಿಗೆ ನೀರನ್ನು ಪೂರೈಸಬಹುದಾಗಿತ್ತು. ಆದರೆ ಜನಪ್ರತಿನಿಧಿಗಳು-ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಜನರು ನೀರಿಗಾಗಿ ಪರದಾಡುವಂತಾಗಿದೆ. ನೀರಿದ್ದರೂ ಸರಿಯಾಗಿ ಬಳಸಿಕೊಳ್ಳದಂತಾಗಿದೆ.

ಜಲಾಗಾರಕ್ಕೆ ಮುಗಿಬಿದ್ದ ಜನತೆ: ಸೋಮವಾರದವರೆಗೆ ನೀರು ಬರುವುದಿಲ್ಲವೆಂಬ ವಿಷಯ ತಿಳಿದ ಸಾರ್ವಜನಿಕರು ನೀರಿಗಾಗಿ ದ್ವಿಚಕ್ರವಾಹನ, ಟಾಟಾ ಏಸ್‌, ಟ್ರ್ಯಾಕ್ಟರ್‌, ಆಟೋ ರಿಕ್ಷಾಗಳೊಂದಿಗೆ ಚನ್ನಮ್ಮನ ಜಲಾಗಾರ ಬಳಿ ಜಮಾಯಿಸಿದ್ದರು.

ಜನಪರ ಕಾಳಜಿ ಇದೆಯೇ? ಚನ್ನಮ್ಮನ ಜಲಾಶಯದಿಂದ ಪಟ್ಟಣಕ್ಕೆ ನೀರು ಪೂರೈಸಲು ಅಗತ್ಯವಿರುವ ಅವಶ್ಯಕ ಉಪಕರಣಗಳ ಕೊರತೆಯಿಂದ ಇವತ್ತು ಸಾರ್ವಜನಿಕರಿಗೆ ಬರೆ ಬೀಳುತ್ತಿದೆ. ಜ್ವಲಂತ ಸಮಸ್ಯೆಯತ್ತ ಅದೆಷ್ಟು ಸಲ ಗಮನ ಸೆಳೆದರೂ ಆಡಳಿತ ವ್ಯವಸ್ಥೆ ಜಿಡ್ಡುಗಟ್ಟಿದೆ. ಅಧ್ಯಕ್ಷ-ಉಪಾಧ್ಯಕ್ಷರ ರಾಜೀನಾಮೆಯಿಂದ ಅಧಿಕಾರ ಅಧಿಕಾರಗಳ ಕೈಯಲ್ಲಿದೆ. ಸಂಬಂಧಪಟ್ಟ ಅಧಿ ಕಾರಿಗಳಿಗೆ ವಿಚಾರಿಸಿದರೆ ಟಿಸಿ ಸುಟ್ಟು ಹೋದರೆ ನಾವೇನು ಮಾಡಬೇಕೆಂಬ ಹಾರಿಕೆ ಉತ್ತರ ಕೇಳಿಬರುತ್ತಿದೆ. ಇನ್ನೂ ಜನಪ್ರತಿನಿ ಧಿಗಳು ಅಧ್ಯಕ್ಷ-ಉಪಾಧ್ಯಕ್ಷರ ರಾಜೀನಾಮೆಗಾಗಿ ಪ್ರತಿಭಟನೆ ಮಾಡಿದಂತೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೂ ಪ್ರತಿಭಟನೆ ಮಾಡುವಂತಾಗಲಿ ಎಂಬುದು ಪಟ್ಟಣದ ಜನರ ಅಭಿಪ್ರಾಯ.

ಪ್ರತಿ ಸಲ ಏನಾದರೊಂದು ನೆಪ ಹೇಳುತ್ತಾರೆ. ಬಳಕೆ ಮಾಡಲು ನೀಲಮ್ಮನ ಕೆರೆಯಲ್ಲೂ ನೀರಿಲ್ಲ. ಪರಿಸ್ಥಿತಿ ಹೀಗಿರುವಾಗ ನೀರು ಎಲ್ಲಿದೆಯೋ ಅಲ್ಲಿಗಾದರೂ ಹೋಗಿ ತರಬೇಕು. ಇನ್ನು ನಮ್ಮ ಪರಿಸ್ಥಿತಿ ಎಲ್ಲಿಗೆ ಬರುತ್ತದೆ ನೋಡೋಣ. –ಮಂಜು ಸುಬೇದಾರ, ಪಟ್ಟಣದ ನಿವಾಸಿ

ವಿದ್ಯುತ್‌ ಪರಿವರ್ತಕ ಹಾಳಾಗಿದೆ. ಸೋಮವಾರದವರೆಗೆ ನೀರು ಬರುವುದಿಲ್ಲ ಎಂದು ಹೇಳಿದ್ದಾರೆ. ಎರಡು ಡ್ರಮ್‌ ತುಂಬುಕೊಂಡು ಹೋಗಿ ಮನೆಯಲ್ಲಿಡಬೇಕಿದೆ. –ನಿಂಗನಗೌಡ ಪಾಟೀಲ, ಪಟ್ಟಣದ ನಿವಾಸಿ

ಮಳೆ, ಗಾಳಿ, ಸಿಡಿಲಿನಿಂದ ಚನ್ನಮ್ಮ ಜಲಾಗಾರದಲ್ಲಿರುವ ವಿದ್ಯುತ್‌ ಪರಿವರ್ತಕ ಸುಟ್ಟಿರುವುದರಿಂದ ನೀರು ಸರಬರಾಜಿಗೆ ತೊಂದರೆಯಾಗಿದೆ. ಪರಿವರ್ತಕ ಅಳವಡಿಸಲಾಗಿದೆ.  -ವೀರಣ್ಣ ಹಸಬಿ, ಪುರಸಭೆ ಮುಖ್ಯಾಧಿಕಾರಿ                       

  -ಪುಂಡಲೀಕ ಮುಧೋಳೆ

ಟಾಪ್ ನ್ಯೂಸ್

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.