ಯಾವ ರಂಗ ಅಸ್ತಿತ್ವಕ್ಕೆ ಬಂದರೂ ಬಿಜೆಪಿ ಅಲ್ಲಾಡಿಸಲಾಗದು: ಶೆಟ್ಟರ್
Team Udayavani, May 27, 2022, 11:07 PM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಪ್ರಬಲವಾಗಿ ಬೆಳೆಯುತ್ತಿದೆ. ಮೂರು ಅಥವಾ ನಾಲ್ಕನೇ ರಂಗ ಬಂದರೂ ಪಕ್ಷಕ್ಕೆ ಸರಿಸಾಟಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೃತೀಯ ರಂಗದ ಚರ್ಚೆ ಹೊಸತೇನಲ್ಲ. ಹಿಂದೆಯೂ ಇದೇ ರೀತಿ ಎಲ್ಲಾ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೋರಾಟಕ್ಕೆ ಮುಂದಾಗಿದ್ದರು. ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎನ್ನುವುದು ಜನರಿಗೆ ಗೊತ್ತಿದೆ.
ಜನಪರ ಆಡಳಿತದಿಂದಾಗಿ ವರ್ಷದಿಂದ ವರ್ಷಕ್ಕೆ ಪಕ್ಷದ ಸಂಘಟನೆಯಾಗುತ್ತಿದೆ. ಪಕ್ಷದ ಪರವಾಗಿ ಜನರು ನಿಂತುಕೊಂಡಿದ್ದಾರೆ. ಯಾವ ರಂಗ ರಚನೆಯಾದರೂ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಲ್ಲಾಡಿಸಲು ಸಾಧ್ಯವಿಲ್ಲ.
ಬಿಜೆಪಿ ನಾಯಕರು ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಡಿ.ಕೆ. ಶಿವಕುಮಾರ ಹೇಳಿಕೆಯಲ್ಲಿ ಯಾವುದೇ ಸತ್ಯವಿಲ್ಲ. ಅವರಿಗೆ ಕಾನೂನು ಮೇಲೆ ಗೌರವವಿದ್ದರೆ, ಅವರು ಯಾವುದೇ ತಪ್ಪು ಮಾಡಿರದಿದ್ದರೆ ಏಕೆ ಭಯ. ಕಾನೂನು ಹೋರಾಟ ಮಾಡಲಿ. ಅದು ಬಿಟ್ಟು ರಾಜಕೀಯ ಹೇಳಿಕೆಯಿಂದ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದರು.